ಸಾಮಾಜಿಕ ಕೊಡುಗೆಯತ್ತ ಗಮನ ನೀಡಿ


Team Udayavani, Jul 20, 2018, 2:49 PM IST

dvg-1.jpg

ದಾವಣಗೆರೆ: ಸರ್ಕಾರಿ ನೌಕರರು ಇಲಾಖಾ ಕೆಲಸ-ಕಾರ್ಯಗಳ ಜೊತೆಗೆ ಸಾಮಾಜಿಕ ಕೊಡುಗೆಯತ್ತ ಗಮನ ನೀಡಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಆರ್‌. ಚೇತನ್‌ ಸಲಹೆ ನೀಡಿದ್ದಾರೆ.

ಗುರುವಾರ, ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಿಪಿಕ ನೌಕರರ ಸಂಘದಿಂದ ಏರ್ಪಡಿಸಿದ್ದ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಸವಲತ್ತು ಪಡೆಯುವಂತಹ ನೌಕರರು ಸಮಾಜಕ್ಕೆ ಏನಾದರೂ ಕಾಣಿಕೆ ನೀಡುವಂತಾಗಬೇಕು ಎಂದು ಆಶಿಸಿದರು. 

ಸರ್ಕಾರಿ ಸ್ವಾಮ್ಯದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರು, ಅಧಿಕಾರಿಗಳು ಮಾಡಿಕೊಂಡಿರುವ ಸಂಘಗಳು ಸರ್ಕಾರದ ಒಂದು ಭಾಗವೇ ಆಗಿವೆ. ಯಾವ ಉದ್ದೇಶಕ್ಕಾಗಿ ಸಂಘಗಳ ರಚನೆ ಮಾಡಿಕೊಳ್ಳಲಾಗಿದೆ ಎಂಬುದರ ಬಗ್ಗೆ ಪದಾಧಿಕಾರಿಗಳು, ನೌಕರರು ತಿಳಿದು, ಸಂಘದ ಮೂಲ ಧ್ಯೇಯೋದ್ದೇಶ, ಆಶಯದಂತೆ ನಡೆದುಕೊಳ್ಳಬೇಕು ಎಂದು ತಿಳಿಸಿದರು. 

ಸರ್ಕಾರಿ ಇಲಾಖಾ ನೌಕರರ ಸಂಘದ ಪದಾಧಿಕಾರಿಗಳು, ನೌಕರರಿಗೆ ಸಂಬಂಧಿಸಿದಂತೆ ನಿಗದಿತ ಕಾಲಾವಧಿಯಲ್ಲಿ ಕಾರ್ಯಾಗಾರ, ವಿಚಾರ ಸಂಕಿರಣ ಹಮ್ಮಿಕೊಳ್ಳುವುದರಿಂದ ಇಲಾಖಾ ಕೆಲಸ-ಕಾರ್ಯಗಳ ಜೊತೆಗೆ ಸಾಮಾಜಿಕ ಹೊಣೆಗಾರಿಕೆ ಜಾಗೃತಿ ಮೂಡುತ್ತದೆ. ನೌಕರರು ಸಮಾಜದ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಆರೋಗ್ಯ ಇಲಾಖೆ ಲಿಪಿಕ ನೌಕರರು ಹಾಗೂ ಇತರೆ ನೌಕರರು ಒಟ್ಟಾಗಿ ಜನತೆಗೆ ಸುರಕ್ಷಿತ ಆರೋಗ್ಯ ಸೇವೆ ನೀಡಬೇಕು. ಆರೋಗ್ಯ ಇಲಾಖೆ ನೌಕರರದ್ದು ಒಂದು ರೀತಿಯ ತುರ್ತು ಸೇವೆ ಇದ್ದಂತೆ. ಲಿಪಿಕ ನೌಕರರು ದಿನದ 24 ಗಂಟೆ ಕಾರ್ಯನಿರ್ವಹಿಸದೆ ಇರಬಹುದು. ಆದರೆ, 24 ಗಂಟೆ ನಿರ್ವಹಿಸುವ ಇತರೆ ಸಿಬ್ಬಂದಿಗೆ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುವುದು ತುಂಬಾ ಸಂತೋಷದ ವಿಚಾರ. ಆರೋಗ್ಯ ಇಲಾಖೆಯ ನೌಕರರಲ್ಲಿ ಹೆಚ್ಚಿನ ಪ್ರಾಮಾಣಿಕತೆ ಅಗತ್ಯ. ಅಗತ್ಯವಾದ ಸಂದರ್ಭದಲ್ಲಿ ನಿಗದಿತ ಸಮಯ ಕೆಲಸ
ಮಾಡಬೇಕು ಎಂದರು.

ಪ್ರಾಸ್ತಾವಿಕ ಮಾತುಗಳಾಡಿದ ಸಂಘದ ಗೌರವ ಅಧ್ಯಕ್ಷ ನಿಜಲಿಂಗಪ್ಪ, ಸಂಘ ನೌಕರರ ಹಿತರಕ್ಷಣೆಯ ಜೊತೆಗೆ ಇಲಾಖೆ, ಜಿಲ್ಲಾಡಳಿತ, ಆಸ್ಪತ್ರೆಗೆ ಪೂರಕವಾಗಿ ಕೆಲಸ ಮಾಡುತ್ತದೆ. ನೌಕರರ ಅನುಕೂಲಕ್ಕಾಗಿ ವಿಶೇಷ ಕಾರ್ಯಾಗಾರ ಇತರೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು. 

ಮಾಹಿತಿ ಹಕ್ಕು ಕಾಯ್ದೆ ವಿಷಯ…
ಕಾಚಾಪುರ ರಂಗಪ್ಪ ಉಪನ್ಯಾಸ ನೀಡಿದರು. ಲಿಪಿಕ ನೌಕರರ ಸಂಘದ ಅಧ್ಯಕ್ಷ ಎಸ್‌. ನಾಗರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್‌. ತ್ರಿಪುಲಾಂಬ, ಜಿಲ್ಲಾ ಆಸ್ಪತ್ರೆ ಅಧೀಕ್ಷಕಿ ಡಾ| ಎಚ್‌.ಡಿ. ನೀಲಾಂಬಿಕೆ, ಲಿಪಿಕ ನೌಕರರ ಸಂಘದ ಕಾರ್ಯಾಧ್ಯಕ್ಷ ಎ. ಪುಟ್ಟಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಸ್‌. ಹಾಲೇಶಪ್ಪ, ಆರ್‌. ಶ್ರೀನಿವಾಸ್‌, ಕೆ.ಎಂ. ಪುರುಷೋತ್ತಮ, ಜಯಪ್ರಕಾಶ್‌, ಗಂಗಾಧರ, ಶಿವಾಜಿರಾವ್‌ ಇತರರು ಇದ್ದರು. ರಾಮಾಚಾರ್‌ ಪ್ರಾರ್ಥಿಸಿದರು. ವೆಂಕಟೇಶ್‌ ಸ್ವಾಗತಿಸಿದರು. ಡಾ| ಆನಂದ ಋಗ್ವೇದಿ ನಿರೂಪಿಸಿದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.