ಉತ್ತರ ಕರ್ನಾಟಕದಲ್ಲಿ ಕಾರ್ಮುಗಿಲು; ಹೊಸ ಹುಡುಗನ ಕನಸು ನನಸು


Team Udayavani, Jul 21, 2018, 3:28 PM IST

karmugilu.jpg

ಉತ್ತರ ಕರ್ನಾಟಕದಿಂದ ಸಾಕಷ್ಟು ಮಂದಿ ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಇನ್ನು ಕೆಲವು ಸಿನಿಮಾಗಳು ಉತ್ತರ ಕರ್ನಾಟಕದಲ್ಲೇ ತಯಾರಾಗಿ ಅಲ್ಲೇ ಬಿಡುಗಡೆ ಕೂಡಾ ಆಗುತ್ತದೆ. ಈಗ ಉತ್ತರ ಕರ್ನಾಟಕದ ಮಂದಿಯೇ ಸೇರಿಕೊಂಡು ಮಾಡಿರುವ ಸಿನಿಮಾವೊಂದು ಜುಲೈ 27ರಂದು ತೆರೆಗೆ ಬರಲು ಸಿದ್ಧವಾಗಿದೆ. ಅದು “ಕಾರ್ಮುಗಿಲು’. ಹೌದು, “ಕಾರ್ಮುಗಿಲು’ ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ್ದು, ಜುಲೈ 27 ರಂದು ಬಿಡುಗಡೆಯಾಗುತ್ತಿದೆ. ಮಾಧವ ಶಿವಾ ಈ ಚಿತ್ರದ ನಿರ್ದೇಶಕರು. ನಿರ್ದೇಶನದ ಜೊತೆಗೆ ಚಿತ್ರದಲ್ಲಿ ನಾಯಕರಾಗಿಯೂ ನಟಿಸಿದ್ದಾರೆ. 

ಸಿನಿಮಾ ನಿರ್ದೇಶಕರಾಗಿ ಇವರಿಗೆ ಇದು ಚೊಚ್ಚಲ ಸಿನಿಮಾ. ಈ ಹಿಂದೆ ಕೇವಲ 68 ರೂಪಾಯಿಯಲ್ಲಿ ಐದು ನಿಮಿಷದ ಕಿರುಚಿತ್ರ ನಿರ್ಮಿಸಿ ಫ್ರೀ ಸ್ಟೈಲ್‌ ಅವಾರ್ಡ್‌ನಲ್ಲಿ 1300ಕ್ಕೂ ಹೆಚ್ಚು ಕಿರುಚಿತ್ರಗಳ ಪೈಪೋಟಿ ಮಧ್ಯೆ 2ನೇ ಸ್ಥಾನ ಪಡೆದ ಮಾಧವ ಶಿವಾ ಅವರು ಈಗ “ಕಾರ್ಮುಗಿಲು’ ಮಾಡಿದ್ದಾರೆ. ಮಾಧವ ಶಿವಾ ಅವರು ಸಿನಿಮಾವನ್ನು ಅದ್ಧೂರಿಯಾಗಿ ಮಾಡಿದ್ದು, ಯಾವುದೇ ವಿಚಾರದಲ್ಲೂ ರಾಜಿಯಾಗಿಲ್ಲವಂತೆ. ಚಿತ್ರದ ಬಗ್ಗೆ ಮಾತನಾಡುವ ಮಾಧವ ಶಿವಾ ಅವರು, “ಚಿತ್ರದಲ್ಲಿ ನಾಯಕ ನಟನಾಗಿ ಕನಸು ಹೊತ್ತು ಬೆಂಗಳೂರಿಗೆ ಹೋದ ನನಗೆ ನಿರ್ದೇಶಕರೊಬ್ಬರು ಮಾಡಿದ ಅವಮಾನವೇ ನಾನಿಂದು ನಿರ್ದೇಶಕ, ನಟನಾಗಲು ಸಾಧ್ಯವಾಗಿದೆ.

 ಈಗಾಗಲೇ ಚಿತ್ರದ ಹಾಡುಗಳು ಜನರ ಮನಸ್ಸು ಗೆದ್ದಿದ್ದು, ಈಗ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ಮಾಡಲಾಗಿದೆ. ಉತ್ತರ ಕರ್ನಾಟಕದ ಜನ ಕೈ ಬಿಡೋದಿಲ್ಲ ಎಂಬ ನಂಬಿಕೆ ಇದ್ದು, ಆದಷ್ಟು ಈ ಭಾಗದ ಚಿತ್ರಮಂದಿರಗಳಲ್ಲಿ ಜುಲೈ 27ಕ್ಕೆ ಬಿಡುಗಡೆ ಆಗಲಿದೆ. ನಾಯಕನ ಬದುಕಿನಲ್ಲಿ ಆಕಾಂಕ್ಷೆಗಳನ್ನು ಹೊತ್ತ ಮೋಡಗಳು ಕವಿದಿರುತ್ತವೆ. ಅವು ನನಸಾಗಿ ಹನಿ ಹನಿಯಾಗಿ ಜಾರಬೇಕಷ್ಟೆ. ಆದರೆ ಅವು ಮಳೆಯಾಗಿ ಧರೆಗೆ ಇಳಿಯುತ್ತಾ ಎಂಬ ಪ್ರಶ್ನೆಗಳಿಗೆ ಉತ್ತರವನ್ನು ಚಿತ್ರದಲ್ಲಿ ಕಾಣಬಹುದು. ಇದು ಕೇವಲ ಕಾಲ್ಪನಿಕ ಕಥೆಯಾದರೂ ಇಲ್ಲಿ ಮೂಡಿ ಬಂದಿರುವ ದೃಶ್ಯಗಳು ವಾಸ್ತವಕ್ಕೆ ಹತ್ತಿರವಾಗಿವೆ’ ಎನ್ನುತ್ತಾರೆ.

ಚಿತ್ರದ “ಕಾರ್ಮುಗಿಲೆ, ಕಾರ್ಮುಗಿಲೆ ಕಳಚಿತು ನಿನ್ನ ಬಾನಿನ ಬಂಧ. ಹನಿಯಾಗಿ ನೀ ಧರೆ ಸೋಕುವ ಮುನ್ನ, ಸೇರುತಿರುವೆಯಾ ನೀ ಕಡಲ ತೀರವ…’ ಎಂಬ ಗೀತೆಯನ್ನು ಮಾಧವ ಅವರೇ ಬರೆದಿದ್ದಾರೆ. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು,  ಪ್ರಣತಿ ಎಸ್‌, ಜೋಯಲ್‌ ಸಕ್ರಿ ಹಾಗೂ ಅಮಿತ್‌ ಚೌಗಲೆ, ಸುಜಯಿಂದ್ರ ಸೇರಿದಂತೆ ಸ್ಥಳೀಯ ಗಾಯಕರಿಗೆ ಅವಕಾಶ ನೀಡಲಾಗಿದೆ. 

ನಾಯಕಿಯಾಗಿ ಚೈತ್ರಾ ಸುಂಕದ ಬಣ್ಣ ಹಚ್ಚಿದ್ದಾರೆ. ಕಥೆ, ಚಿತ್ರಕಥೆ, ಸಾಹಿತ್ಯವನ್ನು ಮಾಧವ ಅವರೇ ಬರೆದಿದ್ದು, ಸಂಭಾಷಣೆಗೆ ಜಯದೇವ ಪೂಜಾರ ಸಾಥ್‌ ನೀಡಿದ್ದಾರೆ. ಈ ಚಿತ್ರಕ್ಕಾಗಿ ಭೂಮಿ ಫಿಲ್ಮ್ ಕ್ರಿಯೇಶನ್ಸ್‌ ಎಂಬ ಹೋಮ್‌ ಬ್ಯಾನರ್‌ ಅಡಿಯಲ್ಲಿ ಮಾಧವ ಅವರ ಸಹೋದರ ಮಹಾದೇವ ಅಳಗವಾಡಿ ಬಂಡವಾಳ ಹೂಡಿದ್ದಾರೆ. ಜೋಯಲ್‌ ಸಕ್ರಿ ಸಂಗೀತ ಸಂಯೋಜನೆ, ಹರ್ಷವರ್ಧನ ಡಿ.ಎಂ. ಛಾಯಾಗ್ರಹಣದಲ್ಲಿ ಚಿತ್ರ ಮೂಡಿಬಂದಿದೆ.

– ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.