ಶಿರ್ವ -ಕಟ್ಟಿಂಗೇರಿ ಮೂಡುಬೆಳ್ಳೆ ಸಂಪರ್ಕ ರಸ್ತೆ ಸಂಚಾರ ಮುಕ್ತ
Team Udayavani, Jul 22, 2018, 6:15 AM IST
ಶಿರ್ವ: ಜಿಲ್ಲೆ ಯಾದ್ಯಂತ ಜುಲೈ ಮೊದಲ ವಾರ ಸುರಿದ ಮಹಾಮಳೆಗೆ ಕೊಚ್ಚಿಹೋಗಿದ್ದ ಶಿರ್ವ ಮಾಣಿಬೆಟ್ಟು ಗರಡಿಯ ಬಳಿ ಮೂಡುಬೆಳ್ಳೆ- ಕಟ್ಟಿಂಗೇರಿ- ಶಿರ್ವ ಸಂಪರ್ಕ ರಸ್ತೆಯ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು ಎರಡೂ ಗ್ರಾಮಗಳ ಜನರ ಸಂಚಾರಕ್ಕೆ ಮುಕ್ತವಾಗಿದೆ.
ಶಿರ್ವ ಮಾಣಿಬೆಟ್ಟು ಹಾಗೂ ಕಟ್ಟಿಂಗೇರಿ ಪರಿಸರದ ಜನ ನಿತ್ಯ ಕೆಲಸ ಕಾರ್ಯ ಹಾಗೂ ಶಾಲೆ ಕಾಲೇಜುಗಳಿಗೆ ಹೋಗಲು ಈ ರಸ್ತೆಯನ್ನೇ ಬಳಸುತ್ತಿದ್ದು ರಸ್ತೆ ಕಡಿತಗೊಂಡಿದ್ದರಿಂದಾಗಿ ಜನ ಅತ್ತಿತ್ತ ಸಾಗಲು ಪರದಾಟ ನಡೆಸುತ್ತಿರುವ ಬಗ್ಗೆ ಪತ್ರಿಕೆ ಸಮಗ್ರ ವರದಿ ಪ್ರಕಟಿ ಸಿತ್ತು. ದಿನನಿತ್ಯಈ ಮಾರ್ಗದಲ್ಲಿ ಐದಾರು ಶಾಲಾ ವಾಹನಗಳು ಓಡಾಟ ನಡೆಸುತ್ತಿದ್ದು ರಸ್ತೆ ಕೊಚ್ಚಿ ಹೋಗಿದ್ದರಿಂದಾಗಿ ಜನರು, ಶಾಲಾ ವಿದ್ಯಾರ್ಥಿಗಳು ದೂರದ ಮಟ್ಟಾರು-ನಾಲ್ಕುಬೀದಿ ರಸ್ತೆಯನ್ನು ಬಳಸುತ್ತಿತ್ತು.
ಉದಯವಾಣಿ ವರದಿಗೆ ಸ್ಪಂದನೆ
ವರದಿಗೆ ಸ್ಪಂದಿಸಿದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 1 ಲಕ್ಷ ರೂ. ಬಿಡುಗಡೆ ಮಾಡಿ ತುರ್ತು ಕಾಮಗಾರಿ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಗುತ್ತಿಗೆದಾರ ಚಂದ್ರಶೇಖರ ಶೆಟ್ಟಿ ಕಾಮಗಾರಿ ನಡೆಸಿ ರಸ್ತೆ ಸರಿಪಡಿಸಿದ್ದಾರೆ. ಜಿ.ಪಂ.ಸದಸ್ಯ ವಿಲ್ಸನ್ ರೋಡ್ರಿಗಸ್ ಈ ರಸ್ತೆಗೆ ಸಂಕ ರಚಿಸುವ ಬಗ್ಗೆ ಅನುದಾನ ಜೋಡಿಸಿಕೊಂಡು ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಕೈಗೊಳ್ಳುವಂತೆ ಗ್ರಾಮಸ್ಥರ ಪರವಾಗಿ ಸ್ಥಳೀಯ ಶಾಸಕ ಲಾಲಾಜಿ ಮೆಂಡನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್