ಲಿಂಗ ತಾರತಮ್ಯಕ್ಕೆ ಭ್ರೂಣ ಲಿಂಗ ಪತ್ತೆ ಕಾರಣ: ಡಾ| ರಾಮರಾವ್‌


Team Udayavani, Jul 22, 2018, 6:30 AM IST

2107kdpp7.jpg

ಕುಂದಾಪುರ: ಪ್ರಸ್ತುತ ಉಡುಪಿಯಲ್ಲಿಯೇ ಲಿಂಗಾನುಪಾತದಲ್ಲಿ ವ್ಯತ್ಯಾಸವಿದ್ದು, ಒಂದು ಸಾವಿರ ಪುರುಷರಿಗೆ 950 ಮಂದಿ ಮಹಿಳೆಯರಿದ್ದಾರೆ. ಈ ರೀತಿಯ ಲಿಂಗ ತಾರತಮ್ಯಕ್ಕೆ ಭ್ರೂಣ ಲಿಂಗ ಪತ್ತೆ ಕೂಡ ಒಂದು ಪ್ರಮುಖ ಕಾರಣ ಎಂದು ಉಡುಪಿ ಜಿಲ್ಲಾಸ್ಪತ್ರೆಯ ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮರಾವ್‌ ಹೇಳಿದರು. 

ಶನಿವಾರ ಕುಂದಾಪುರದ ಭಂಡಾಕಾರ್ ಕಾಲೇಜಿನಲ್ಲಿ ತಾ|  ಕಾನೂನು ಸೇವಾ ಸಮಿತಿ, ಬಾರ್‌ ಅಸೋಸಿಯೇಶನ್‌ ಕುಂದಾಪುರ, ಅಭಿಯೋಗ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಭ್ರೂಣ ಲಿಂಗ ತಪಾಸಣೆ ತಡೆಯ ಬಗ್ಗೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. 

ಪುರುಷ ಹಾಗೂ ಮಹಿಳಾ ಅಸಮಾನತೆ ಎಲ್ಲ ಕಡೆಗಳಲ್ಲಿಯೂ ಇದ್ದು, ಈ ಸಮಸ್ಯೆಯ ಗಂಭೀರತೆ ನಾವೆಲ್ಲರೂ ಅರಿಯಬೇಕಿದೆ. ಭ್ರೂಣ ಲಿಂಗ ತಪಾಸಣೆ ತಡೆಯ ಕುರಿತು ಇನ್ನಷ್ಟು ಅರಿವು ಮೂಡಬೇಕಿದೆ. ಪರಸ್ಪರ ಪುರುಷ, ಸ್ತ್ರೀಯರ ಮಧ್ಯೆ ತುಂಬಾ ತಾರತಮ್ಯವಿದೆ. ಅದಕ್ಕೆ ಕಾರಣಗಳು ಹಲವು ಎಂದರು.

ಸಹಬಾಳ್ವೆಯಿಂದ ಸಂತೋಷ
ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್‌ ನ್ಯಾಯಾಧೀಶ ಮತ್ತು ಕುಂದಾಪುರ ತಾ| ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಡಿ.ಪಿ.ಕುಮಾರಸ್ವಾಮಿ ಮಾತನಾಡಿ, ಜೀವನದಲ್ಲಿ ಕುಟುಂಬ, ಸಮಾಜದೊಂದಿಗೆ ಹೊಂದಾಣಿಕೆ  ಬಹಳ ಮುಖ್ಯ. ಹೀಗಿದ್ದಾಗ ಎಲ್ಲವನ್ನೂ ಕಲಿಯುವುದರ ಜತೆಗೆ ಬದುಕನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ. ಪರಸ್ಪರರೊಂದಿಗೆ ಹೊಂದಾಣಿಕೆಗಳು ನಮ್ಮನ್ನು ಸಂತೋಷದಿಂದಿರಲು ಸಹಕಾರಿಯಾಗುತ್ತದೆ ಎಂದರು. 

ಕುಂದಾಪುರ ಬಾರ್‌ ಅಸೋಸಿ ಯೇಶನ್‌ನ ಅಧ್ಯಕ್ಷ ಸಳ್ವಾಡಿ ನಿರಂಜನ ಹೆಗ್ಡೆ, ಅಧ್ಯಕ್ಷತೆ ವಹಿಸಿದ್ದರು.  ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶಚಂದ್ರ ಶೆಟ್ಟಿ, ಬಾರ್‌ ಅಸೋಸಿಯೇಶನ್‌ನ ಪ್ರ. ಕಾರ್ಯದರ್ಶಿ ಎಚ್‌. ಪ್ರಮೋದ್‌ ಹಂದೆ ಉಪಸ್ಥಿತರಿದ್ದರು. 

ಕಾಲೇಜಿನ ಪ್ರಾಂಶುಪಾಲ ಡಾ| ಎನ್‌.ಪಿ ನಾರಾಯಣ ಶೆಟ್ಟಿ ಸ್ವಾಗತಿಸಿದರು. ಇಂಗ್ಲೀಷ್‌ ವಿಭಾಗದ ಉಪಾನ್ಯಾಸಕ ಶರಣ್‌ ಕಾರ್ಯಕ್ರಮ ನಿರ್ವಹಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಶುಭಕರಾಚಾರಿ ವಂದಿಸಿದರು.

ತಂತ್ರಜ್ಞಾನ ಸದುದ್ದೇಶಕ್ಕೆ ಬಳಕೆಯಾಗಲಿ
ತಂತ್ರಜ್ಞಾನ ನಮ್ಮ ಎಲ್ಲೆಗಳನ್ನು ಮೀರಿ ಬೆಳೆದಿದೆ. ಅದರ ಪ್ರಗತಿ ಸಮಾಜದ ಸ್ವಾಸ್ಥ್ಯ ಹಾಗೂ ಸದ್ಭಳಕೆಗೆ ವಿನಿಯೋಗವಾಗಬೇಕೇ ಹೊರತು, ದುರ್ಬಳಕೆ ಆಗಬಾರದು. ತಂತ್ರಜ್ಞಾನದಲ್ಲಿ ಒಂದಾದ ಭ್ರೂಣ ತಪಾಸಣೆ ಮೆಷಿನ್‌ ಹುಟ್ಟುವ ಮಗುವಿನ ದೈಹಿಕ ಲೋಪದೋಷಗಳನ್ನು ಆರೋಗ್ಯದ ಸಮಸ್ಯೆ ಅರಿಯಲು ಬಳಸಬೇಕು. ಆದರೆ ಇದನ್ನು ಲಿಂಗ ತಪಾಸಣೆಗೆ ಬಳಸುತ್ತಿರುವುವುದು ಸಾಮಾಜಿಕ ಸಮಸ್ಯೆಯಾಗಿ ಪರಿಣಮಿಸಿದೆ. ಹೆಣ್ಣು ಲಿಂಗ ಭ್ರೂಣ ಹತ್ಯೆಯಾಗುತ್ತಿದೆ. ಇದರಿಂದ ಸಾಮಾಜಿಕ ಅಭದ್ರತೆ, ಅಸಮತೋಲನಕ್ಕೆ ದಾರಿಯಾಗಿದೆ. ಇದರ ಅರಿವಿನ ಜತೆಗೆ ಕಾನೂನಿನ ಅರಿವು ಇರಬೇಕಾಗಿದೆ.
– ಶ್ಯಾಮಲಾ ಭಂಡಾರಿ, ವಕೀಲರು

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.