ಸಭಾಪತಿ ಕ್ಷಮೆ ಕೋರಿದ ಎಸ್.ಮೂರ್ತಿ
Team Udayavani, Jul 22, 2018, 7:00 AM IST
ಬೆಂಗಳೂರು: ವಿಧಾನ ಪರಿಷತ್ ಸಚಿವಾಲಯದ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಕ್ಷಮೆಯಾಚಿಸಿದ್ದಾರೆ.
ವಿಧಾನ ಪರಿಷತ್ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿರುವ ಮೂರ್ತಿ ವಿರುದಟಛಿ ಸಭಾಧ್ಯಕ್ಷರಿಗೆ ಪತ್ರ ಬರೆಯುವುದಾಗಿ
ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದರು. ಆದ್ದರಿಂದ ಶನಿವಾರ ಹೊರಟ್ಟಿಯರನ್ನು ಭೇಟಿ ಮಾಡಿ, ಮೂರ್ತಿ ಲಿಖೀತ ರೂಪದಲ್ಲಿ ಕ್ಷಮೆ ಕೋರಿದ್ದಾರೆ. ತಾವು ಪರಿಷತ್ ಕಾರ್ಯ ಚಟುವಟಿಕೆಗಳ ಬಗ್ಗೆ ಯಾವುದೇ ರೀತಿಯ ಹೇಳಿಕೆಗಳನ್ನು ನೀಡಿಲ್ಲ. ಮಾಧ್ಯಮಗಳಲ್ಲಿ ತಪ್ಪಾಗಿ ಅರ್ಥೈಸಲಾಗಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದೆ.