ಹೇಮಾವತಿ ಜಲಧಾರೆ ನೋಡಲು ಹರಿದು ಬಂದ ಜನ ಸಾಗರ 


Team Udayavani, Jul 23, 2018, 12:40 PM IST

Jilla-Ismail-Saheb.jpg

ಹಾಸನ: ಗೊರೂರಿನ ಹೇಮಾವತಿ ಜಲಾಶಯದತ್ತ ಭಾನುವಾರ ಜನಸಾಗರವೇ ಹರಿದು ಬಂದಿತ್ತು. ಜಲಾಶಯದ 6 ಕ್ರಸ್ಟ್‌ಗೇಟ್‌ಗಳ ಮೂಲಕ ಹರಿವ ಜಲಧಾರೆಯನ್ನು ನೋಡಲು ಸಾವಿರಾರು ಜನರು ಜಲಾಶಯದ ಮುಂಭಾಗ ಜಮಾಯಿಸಿ ವಾರಾಂತ್ಯದ ಸಂತೋಷ ಸವಿದರು. 

ಶುಕ್ರವಾರ ಮತ್ತು ಶನಿವಾರ ಜಲಾಶಯಕ್ಕೆ ಒಳಹರಿವು ಕ್ಷೀಣಿಸಿದ್ದರಿಂದ ಕ್ರಸ್ಟ್‌ಗೇಟ್‌ಗಳ ಮೂಲಕ ನದಿಗೆ ನೀರಿನ ಹರಿವನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಶನಿವಾರ ಘಟ್ಟಪ್ರದೇಶದಲ್ಲಿ ಭಾರೀ ಮಳೆ ಆರಂಭವಾಗಿದ್ದರಿಂದ ಭಾನುವಾರ ಬೆಳಗ್ಗೆ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 18,751 ಕ್ಯುಸೆಕ್‌ಗೆ ಏರಿತು. ಹಾಗಾಗಿ ನದಿಗೆ ಕ್ರಸ್ಟ್‌ಗೇಟ್‌ಗಳ ಮೂಲಕ 14, 574 ಕ್ಯುಸೆಕ್‌ ನೀರನ್ನು ಹರಿಸಲಾಯಿತು.

ನದಿಗೆ ನೀರು ಬಿಡುತ್ತಿರುವ ಮಾಹಿತಿ ಪಡೆದ ಜನರು ಬೆಳಗ್ಗೆ 9 ಗಂಟೆಯಿಂದಲೇ ಗೊರೂರಿನತ್ತ ಹೊರಟರು. ಜಲಾಶಯದ ಮುಂಭಾಗ ಜಮಾಯಿಸಿದ ಸಾವಿರಾರು ಜನರು ಮಳೆಯನ್ನೂ ಲೆಕ್ಕಿಸದೆ ಕ್ರಸ್ಟ್‌ಗೇಟ್‌ಗಳ ಮೂಲಕ ನದಿಗೆ ಧುಮುಕುವ ಜಲಧಾರೆಯನ್ನು ಕಣ್ತುಂಬಿಕೊಂಡರು. ಕೆಲವರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. 

ವಾಹನಗಳ ಸಾಲು: ಕಳೆದ ವಾರವೂ ಸಾವಿರಾರು ಜನರು ಜಲಾಶಯದತ್ತ ಹೋಗಿ ಜಲಧಾರೆಯ ಸೊಬಗು ಸವಿದಿದ್ದರು. ಈ ಭಾನುವಾರವೂ ಜನರು ಗೊರೂರು ಹೇಮಾವತಿ ಜಲಾಶಯದ ತಪ್ಪಲನ್ನು ಪಿಕ್‌ನಿಕ್‌ಸ್ಪಾಟ್‌ ಮಾಡಿಕೊಂಡು ಭಾನುವಾರದ ರಜೆಯನ್ನು ಕಟುಂಬದರೊಂದಿಗೆ ಕಳೆದರು. ಸಾವಿರಾರು ಜನರು ಬಂದಿದ್ದರಿಂದ ಗೊರೂರಿನ ಬಳಿ 2 ಕಿ.ಮೀ.ವರೆಗೂ ವಾಹನಗಳು ಹೆದ್ದಾರಿಯ ಬದಿಯಲ್ಲಿ ಸಾಲು ನಿಂತಿದ್ದವು. 

ಜಲಾಶಯದ ಮೇಲೆ ಹೋಗಲು ಈ ಭಾನುವಾರ ಅವಕಾಶ ನೀಡಲಿಲ್ಲ. ಹಾಗಾಗಿ ಜಲಧಾರೆ ವೀಕ್ಷಿಸಿದ ಜನರು ಜಲಾಶಯದ ಹಿನ್ನೀರಿನ ದ್ವೀಪ ಬೀಕನಹಳ್ಳಿ ಬಳಿ ಹರಿವು ಕೋನಾಪುರ ದ್ವೀಪಕ್ಕೆ ಭೇಟಿ ನೀಡಿ ಹೇಮಾವತಿಯ ಜಲ ರಾಶಿಯನ್ನು ದಿಟ್ಟಿಸಿ ಸಂತಸಪಟ್ಟರು. ಮತ್ತೆ ಕೆಲವರು ಹಾಸನ ತಾಲೂಕು ಶೆಟ್ಟಿಹಳ್ಳಿ ಬಳಿ ತೆರಳಿ ಹಿನ್ನೀರಿನಲ್ಲಿ ಮುಳುಗಿರುವ ಪುರಾತನ ಚರ್ಚ್‌ ಹಾಗೂ ಹಾಸನ ತಾಲೂಕು ಮತ್ತು ಆಲೂರು ತಾಲೂಕು ಬೆಸೆಯುವ ಕೊಂಡಿ ಶೆಟ್ಟಿಹಳ್ಳಿ ಸೇತುವೆ ಮೇಲೆ ನಿಂತು ನೀರಿನ ಅಲೆಯ ಸೊಬಗು ಸವಿದರು. 
 
ಹೇಮಾವತಿ ಜಲಾಶಯದ ಮಟ್ಟ
22-07-2018,  ಭಾನುವಾರ.

ಪೂರ್ಣಮಟ್ಟ : 2922 ಅಡಿಗಳು. 
ಇಂದಿನ ಮಟ್ಟ : 2919. 93 ಅಡಿಗಳು
ಒಳ ಹರಿವು :18,751 ಕ್ಯುಸೆಕ್‌.
ಹೊರಹರಿವು: 17,584 ಕ್ಯುಸೆಕ್‌.
ನೀರಿನ ಸಂಗ್ರಹ ಸಾಮರ್ಥ್ಯ: 37.10 ಟಿಎಂಸಿ
ಇಂದಿನವರೆಗೆ ಸಂಗ್ರಹ : 35.10 ಟಿಎಂಸಿ.
ಕಳೆದ ವರ್ಷದ ಮಟ್ಟ : 2885. 72 ಅಡಿಗಳು.
ಕಳೆದ ವರ್ಷ ಒಳ ಹರಿವು : 9,470 ಕ್ಯುಸೆಕ್‌.
ಕಳೆದ ವರ್ಷ ಹೊರ ಹರಿವು:150 ಕ್ಯುಸೆಕ್‌.
ಕಳೆದ ವರ್ಷದ ಸಂಗ್ರಹ: 11.99 ಟಿಎಂಸಿ.

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.