ಮಾದಕ ವ್ಯಸನ ಮುಕ್ತ ಭಾರತಕ್ಕೆ ಶ್ರಮಿಸಿ


Team Udayavani, Jul 23, 2018, 12:40 PM IST

Jilla–Kajal.jpg

ತಿಪಟೂರು: ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ ಹದಗೆಡುವುದಲ್ಲದೆ ತಮ್ಮ ಜೀವಿತಾವಧಿಯ ಆಯಸ್ಸನ್ನು ಕಸಿದುಕೊಳ್ಳುತ್ತದೆ. ಆದ್ದರಿಂದ ದುರಾಭ್ಯಾಸಗಳಿಂದ ದೂರ ಉಳಿದು ಉತ್ತಮ ಜೀವನವನ್ನು ಕಂಡುಕೊಳ್ಳಬೇಕೆಂದು ಬೆಂಗಳೂರಿನ ಪ್ರಾದೇಶಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರದ ರಾಜ್ಯ ಸಂಯೋಜಕರಾದ ಶೈಲಜಾ ತಿಳಿಸಿದರು.

ನಗರದ ಎಸ್‌ವಿಪಿ. ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಎನ್‌ಎಸ್‌ಎಂ ಬಾಲಿಕಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆರ್‌ಆರ್‌ಟಿಸಿ ಹಾಗೂ ಹರಿಹರ  ಶಕ್ತಿ ಅಸೋಸಿಯೇಟ್‌  ಸಂಯುಕ್ತಾಶ್ರಯದಲ್ಲಿ ಮಕ್ಕಳಿಗೆ ಮಾದಕ ವ್ಯಸನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಾದಕ ವ್ಯಸನದಿಂದ ದೂರವಿರಿ: ಮಕ್ಕಳು ಮಾದಕ ವ್ಯಸನದಿಂದ ದೂರ ಇರಬೇಕು. ತಮ್ಮ ಸುತ್ತಮುತ್ತ ಅಥವಾ ಕುಟುಂಬದಲ್ಲಿ ಯಾರಾದರೂ ಮಾದಕ ವ್ಯಸನಿಗಳು ಕಂಡು ಬಂದರೆ ಅದರ ದುಷ್ಪರಿಣಾಮವನ್ನು ಅವರಿಗೆ ತಿಳಿಸಿ ಮಾದಕ ವ್ಯಸನದಿಂದ ಮುಕ್ತ ಮಾಡಲು ಪ್ರಯತ್ನಿಸಬೇಕು ಎಂದರು.

 ಇತ್ತೀಚಿನ ದಿನಗಳಲ್ಲಿ ಶೋಕಿಗಾಗಿ ಹಾಗೂ ಕಷ್ಟಗಳನ್ನು ಮರೆಯಬಹುದು ಎಂಬ ನೆಪದಿಂದ, ಇನ್ನೂ ಕೆಲವರು ಸ್ನೇಹಿತರ ಒತ್ತಾಯಕ್ಕೆ ಹೀಗೆ ನಾನಾ ಕಾರಣಗಳಿಂದ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಇಂತಹವರು ಕಂಡುಬಂದರೆ ಅವರ ಮನ ಪರಿವರ್ತನೆ ಮಾಡಿ ಮಾದಕ ವ್ಯಸನದಿಂದ ದೂರ ಮಾಡಬೇಕು. ಇದರಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯೊಂದಿಗೆ ಸಮಾಜಮುಖೀ ಕಾರ್ಯದಲ್ಲಿ ತೊಡಗಿದಂತಾಗುತ್ತದೆ ಎಂದರು.

ಸ್ವತ್ಛ ಭಾರತಕ್ಕೆ ಸಹಕರಿಸಿ: ಮಾದಕ ವ್ಯಸನ ಮುಕ್ತ ಭಾರತ ಮಾಡುವುದು ಎಲ್ಲಾ ಮಕ್ಕಳ ಕನಸಾಗಿದೆ. ಅಲ್ಲದೆ ಮಹಾತ್ಮ ಗಾಂಧೀಜಿಯವರ ಆಕಾಂಕ್ಷೆ ಸ್ವತ್ಛ ಭಾರತ ನಿರ್ಮಾಣ ಇದರ ಸಾಕಾರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಇದರಲ್ಲಿ ಮಕ್ಕಳ ಪಾತ್ರ ಬಹಳ ಮುಖ್ಯ ಎಂದರು.

ಈ ಸಂದರ್ಭದಲ್ಲಿ ಮಾದಕ ವ್ಯಸನ ಕುರಿತು ಹಲವು ಸ್ಪರ್ಧೆಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜನ ಶಿಕ್ಷಣ ಸಂಸ್ಥೆಯ ಸಂಯೋಜಕ ಬಿ.ಜಗದೀಶ್‌, ಕಾರ್ಯ ಕ್ಷೇತ್ರಾಧಿಕಾರಿಗಳಾದ ರವಿಕಾಂಬಳೆ, ಪುಂಡಲೀಕ ಗೋಗಿಹಾಳ,

ಶಿವಕುಮಾರ್‌, ಎಸ್‌ವಿಪಿ ಪ್ರೌಢಶಾಲೆ ಹಿರಿಯ ಶಿಕ್ಷಕ ಬಿ.ಎಸ್‌. ಸಿದ್ದರಾಮಯ್ಯ, ಎನ್‌ಎಸ್‌ಎಂ ಬಾಲಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎಚ್‌.ಕೆ.ಪದ್ಮಾಕ್ಷಮ್ಮ, ಸಹ ಶಿಕ್ಷಕರಾದ ಜುಂಜಯ್ಯ, ಎಸ್‌.ಜಿ. ಬಸವರಾಜು, ಶಿವಕುಮಾರ್‌, ಸಿದ್ದೇಶ್‌ ಮತ್ತಿತರರಿದ್ದರು. 

ಟಾಪ್ ನ್ಯೂಸ್

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.