ಕಿಷ್ಕಿಂದಾ ಅಂಜನಾದ್ರಿಬೆಟ್ಟದ ದೇಗುಲ ಸರ್ಕಾರದ ವಶ


Team Udayavani, Jul 24, 2018, 6:30 AM IST

ban24071806medn-new.jpg

ಗಂಗಾವತಿ: ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯ ದೇವಾಲಯ ಮತ್ತು ಇದಕ್ಕೆ ಸಂಬಂಧಿಸಿದ ಸ್ಥಿರ, ಚರಾಸ್ತಿಗಳನ್ನು ಸೋಮವಾರ ಹುಲಿಗೆಮ್ಮ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಚಂದ್ರಮೌಳಿ ಗಂಗಾವತಿ, ತಹಶೀಲ್ದಾರ್‌ ಎಲ್‌.ಡಿ. ಚಂದ್ರಕಾಂತ ನೇತೃತ್ವದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಕಂದಾಯ ಮತ್ತು ಪೊಲೀಸ್‌ ಇಲಾಖೆಯ ಅಧಿಕಾರಿಗಳ ತಂಡ ಅಂಜನಾದ್ರಿ ಬೆಟ್ಟಕ್ಕೆ ತೆರಳಿ ಬೆಟ್ಟದ ಕೆಳಗೆ ಮತ್ತು ಮೇಲ್ಭಾಗದಲ್ಲಿ ಆಸ್ತಿಗಳನ್ನು ಸರ್ವೇ ಮಾಡಿ ಪ್ರತಿಯೊಂದನ್ನು ದಾಖಲಿಸಿಕೊಂಡು ಮಹಜರ್‌ ಮಾಡಿ ವಿಡಿಯೋ ರೆಕಾರ್ಡಿಂಗ್‌ ಮಾಡಿಕೊಂಡರು. ಆಂಜನೇಯ ದೇವರ ಬೆಳ್ಳಿಯ ಗಧೆ, ಪೂಜಾ ಸಾಮಾಗ್ರಿ, ಅಡುಗೆ ಸಾಮಾನು ಹಾಗೂ ಸಂಸ್ಕೃತ ಪಾಠಶಾಲೆಯನ್ನು ವಶಕ್ಕೆ ಪಡೆದರು. ಪ್ರಸ್ತುತ ದೇವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕ, ವ್ಯವಸ್ಥಾಪಕ ಸೇರಿ 17 ಜನರ ಹೆಸರು ನೋಂದಾಯಿಸಿಕೊಂಡು ತಾತ್ಕಾಲಿಕವಾಗಿ ಕೆಲಸ ಮಾಡುವಂತೆ ಸೂಚಿಸಲಾಯಿತು.

ಹನುಮ ಉದಯಿಸಿದ ನಾಡೆಂದು ಖ್ಯಾತಿ ಪಡೆದ ಕಿಷ್ಕಿಂದಾ ಅಂಜನಾದ್ರಿ ಪ್ರದೇಶದಲ್ಲಿ ಹಲವು ದಶಕಗಳಿಂದ ಬೆಟ್ಟದ ಮೇಲಿರುವ ಆಂಜನೇಯ ದೇವಾಲಯದಲ್ಲಿ ಸ್ಥಳೀಯರೇ ಪೂಜಾ ಕಾರ್ಯ ಮಾಡುತ್ತಿದ್ದರು. ಇತ್ತೀಚೆಗೆ ಉತ್ತರ ಭಾರತದಿಂದ ಹಾಗೂ ವಿದೇಶಿ ಭಕ್ತರು ಆಗಮಿಸುವುದು ಹೆಚ್ಚಾಗಿದ್ದರಿಂದ ಆದಾಯ ಹೆಚ್ಚಾಗಿತ್ತು. ಆನೆಗೊಂದಿ ರಾಜಮನೆತನದವರು ಟ್ರಸ್ಟ್‌ ರಚಿಸಿ ಉತ್ತರ ಭಾರತದಿಂದ ಆಗಮಿಸಿದ ಸಾಧುಗಳನ್ನು ಪೂಜಾ ಕಾರ್ಯಕ್ಕೆ  ನಿಯುಕ್ತಿ ಮಾಡಿದರು. 10 ವರ್ಷದ  ಹಿಂದೆ ಮಹಾಂತ ವಿದ್ಯಾದಾಸ ಬಾಬಾ ಎಂಬುವರನ್ನು ಅರ್ಚಕರನ್ನಾಗಿ ಮಾಡಲಾಯಿತು. ಇವರ ಅವಧಿಯಲ್ಲಿ ಸರ್ಕಾರ, ದಾನಿಗಳ ಸಹಾಯದಿಂದ ಹಲವು ಅಭಿವೃದ್ಧಿ ಕಾರ್ಯಗಳು ಜರುಗಿದವು.

ಈ ನಡುವೆ ಟ್ರಸ್ಟ್‌ ಹಾಗೂ ಬಾಬಾ ನಡುವೆ ವೈಮನಸ್ಸು ಉಂಟಾಯಿತು. ಇದೇ ಸಂದರ್ಭದಲ್ಲಿ ಬಾಬಾ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರಿಂದಾಗಿ ಬಾಬಾ ಅವರನ್ನು ಅರ್ಚಕ ಸ್ಥಾನದಿಂದ ಪದಚ್ಯುತಿ ಮಾಡಲಾಯಿತು. ಟ್ರಸ್ಟ್‌ ಹಾಗೂ ಬಾಬಾ ಬೆಂಬಲಿಗರ ನಡುವೆ  ಸಂಘರ್ಷ ಹಿನ್ನೆಲೆಯಲ್ಲಿ ಕಂದಾಯ ಮತ್ತು ಪೊಲೀಸ್‌ ಇಲಾಖೆಗಳು ದೇವಾಲಯವನ್ನು ಸುಪರ್ದಿಗೆ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರಿಂದ ಅಂಜನಾದ್ರಿ ಕ್ಷೇತ್ರ ಸರ್ಕಾರದ ವಶಕ್ಕೆ ಹೋಗಿದೆ.ಮಧುಗಿರಿ ಮೋದಿ ಎಂಬ ಹಿಂದೂ ಸಂಘಟನೆ ಕಾರ್ಯಕರ್ತ ಅಂಜನಾದ್ರಿ ಬೆಟ್ಟವನ್ನು ಸರ್ಕಾರದ ವಶಕ್ಕೆ ಪಡೆಯುತ್ತಿರುವುದು ಸರಿಯಲ್ಲ. ಸರ್ಕಾರ ಕೂಡಲೇ ಆದೇಶ ವಾಪಸ್‌ ಪಡೆಯುವಂತೆ ಮನವಿ ಸಲ್ಲಿಸಿದರು.

ಟ್ರಸ್ಟ್‌ಗೆ ವಹಿಸುವಂತೆ ಮನವಿ
ಆನೆಗೊಂದಿ ರಾಜಮನೆತನದವರ ನೇತೃತ್ವದಲ್ಲಿರುವ ಅಂಜನಿ ಪರ್ವತ ಚಾರಿಟೇಬಲ್‌ ಮತ್ತು ರಿಲಿಜಿನಿಯನ್‌ ಟ್ರಸ್ಟ್‌ನ ಅಧ್ಯಕ್ಷ ರಾಜಾ ನರಸಿಂಹ ದೇವರಾಯಲು ಹಾಗೂ ಲಲಿತಾರಾಣಿ ಶ್ರೀರಂಗದೇವರಾಯಲು ಇತರೆ ಪದಾಧಿಕಾರಿಗಳು ದೇವಾಲಯವನ್ನು ಸರ್ಕಾರದ ವಶಕ್ಕೆ ಪಡೆದ ಆದೇಶವನ್ನು ಮರುಪರಿಶೀಲಿಸಿ ಪುನಃ ಟ್ರಸ್ಟ್‌ಗೆ ವಹಿಸುವಂತೆ ತಹಶೀಲ್ದಾರ್‌ ಮೂಲಕ ಡಿಸಿಗೆ ಮನವಿ ಸಲ್ಲಿಸಿದರು.

ಅಂಜನಾದ್ರಿಯಲ್ಲಿ ಎಂದಿನಂತೆ ಪೂಜಾ, ಧಾರ್ಮಿಕ ಕಾರ್ಯ, ಅನ್ನಸಂತರ್ಪಣೆ ನಡೆಯಲಿದೆ. ಈಗಿರುವ ಸಿಬ್ಬಂದಿ, ಅರ್ಚಕರು ಇರಲಿದ್ದಾರೆ. ಮುಂದಿನ ವ್ಯವಸ್ಥೆ ಆಗುವ ತನಕ ಇವರನ್ನೇ ಮುಂದುವರಿಸಲಾಗುತ್ತದೆ. ಕ್ಷೇತ್ರದ ಆಚಾರ, ವಿಚಾರ ಪದ್ಧತಿಗಳು ನಿರಂತರವಾಗಿ ಜರುತ್ತವೆ. ಅಂಜನಾದ್ರಿ ಬೆಟ್ಟದ ಹೆಸರಿನಲ್ಲಿ ಬ್ಯಾಂಕ್‌ನಲ್ಲಿ ಖಾತೆ ತೆರೆಯಲಾಗುತ್ತದೆ. ಭಕ್ತರು ದೇಣಿಗೆಯನ್ನು ಬ್ಯಾಂಕ್‌ ಖಾತೆಗೆ ಹಾಕಬೇಕು. ಪ್ರತಿಯೊಂದಕ್ಕೂ ಲೆಕ್ಕಪತ್ರ ಇಡಲಾಗುತ್ತದೆ.
– ಚಂದ್ರಮೌಳಿ, ಅಂಜನಾದ್ರಿ ಬೆಟ್ಟ ದೇವಾಲಯದ ಆಡಳಿತಾಧಿಕಾರಿ

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.