ಬಳಕೆಗೆ ಮುನ್ನವೇ ತುಕ್ಕು ಹಿಡಿದ ಸೈಕಲ್‌


Team Udayavani, Jul 24, 2018, 12:47 PM IST

bid-3.jpg

ಬಸವಕಲ್ಯಾಣ: ಅಂಗವಿಕಲರಿಗಾಗಿ ನಗರಸಭೆಯಿಂದ ಮಂಜೂರಾದ ಸೈಕಲ್‌ಗ‌ಳು ಆಯ್ಕೆಯಾದ ಫಲಾನುಭವಿಗಳಿಗೆ ಸೇರದೇ, ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸೈಕಲ್‌ಗ‌ಳು ಉಪಯೋಗಕ್ಕೆ ಬರುವ ಮುನ್ನವೇ ತುಕ್ಕು ಹಿಡಿದು ಸಂಪೂರ್ಣ
ಹಾಳಾಗಿವೆ.

ಲಕ್ಷಾಂತರ ರೂ. ಖರ್ಚು ಮಾಡಿ ಖರೀದಿ ಮಾಡಿದ್ದ 150ಕ್ಕೂ ಹೆಚ್ಚು ಸೈಕಲ್‌ಗ‌ಳು ನಗರದ ಹೊರವಲಯದ ನೀರು ಶುದ್ಧೀಕರಣ ಘಟಕದ ಆವರಣದಲ್ಲಿ ಇಟ್ಟ ಸ್ಥಳದಲ್ಲಿಯೇ ತುಕ್ಕು ಹಿಡಿದು, ಟೂಬ್‌ ಮತ್ತು ಟೈರ್‌ಗಳು ಮಣ್ಣು ಪಾಲಾಗಿವೆ. ಮೂರು ವರ್ಷಗಳ ಹಿಂದೆ ನಗರಸಭೆಯ ಬಜೆಟ್‌ನ ಶೇ.3ರಷ್ಟು ಅಂಗವಿಕಲರ ಮೀಸಲಾತಿ ಅನುದಾನದಲ್ಲಿ ಸೈಕಲ್‌ ಖರೀದಿ ಮಾಡಿ ಇಡಲಾಗಿತ್ತು. ಆದರೆ ಆಯ್ಕೆಯಾದ ಫಲಾನುಭವಿಗಳಿಗೆ ವಿತರಣೆ ಮಾಡದೆ ಇರುವುದು ನೋವಿನ ಸಂಗತಿಯಾಗಿದೆ.

ಕಳೆದ ಕೆಲವು ವರ್ಷಗಳಿಂದ ಸೈಕಲ್‌ಗಳನ್ನು ನೀರು ಶುದ್ಧೀಕರಣ ಘಟಕದಲ್ಲಿ ಇಡಲಾಗಿತ್ತು. ಈವರೆಗೂ ಸೈಕಲ್‌ಗ‌ಳು ಇವೆಯೋ ಅಥವಾ ಇಲ್ಲವೊ ಎಂಬುದನ್ನು ನೋಡಲಿಕ್ಕೂ ಬಂದಿಲ್ಲ. ಇದರಿಂದ ಉಪಯೋಗಕ್ಕೆ ಬರುವ ಮುನ್ನವೇ ಅವುಮಣ್ಣುಪಾಲಾಗಿವೆ ಎಂದು ಸಿಬ್ಬಂದಿ ವೊಬ್ಬರು ಮಾಹಿತಿ ನೀಡಿದರು. 

ಆಯ್ಕೆಯಾದ ಫಲಾನುಭವಿಗಳಿಗೆ ಸೈಕಲ್‌ ಹಂಚದೇ ಹಾಗೆ ಇಟ್ಟಿರುವುದನ್ನು ಸಂಬಂಧಪಟ್ಟ ಜಿಲ್ಲಾ ಪಂಚಾಯಿತಿ ಮುಖ್ಯ
ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಿಲ್ಲ. ಇದರಿಂದ ಅಂಗವಿಕಲರ ಹಿತದೃಷ್ಟಿಯಿಂದ ಸರಕಾರ ಅನುದಾನ ನೀಡಿ ಮಂಜೂರು ಮಾಡಿದ ಸೈಕಲ್‌ಗಳು ಉಪಯೋಗಕ್ಕೆ ಬರುವ ಮುನ್ನವೇ ಹಾಳಾಗಲು ಕಾರಣವಾಯಿತು ಎಂದು ಎಂಆರ್‌ಡಬ್ಲೂ ಕಾರ್ಯಕರ್ತರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಮೂರು ವರ್ಷಗಳ ಹಿಂದೆ ಅಂಗವಿಕಲರಿಗಾಗಿ ಮಂಜೂರಾದ ಸೈಕಲ್‌ಗ‌ಳನ್ನು ಫಲಾನುಭವಿಗಳಿಗೆ ವಿತರಣೆ ಮಾಡದೆ ಇರುವುದನ್ನು ನೋಡಿದರೆ ಅಧಿಕಾರಿಗಳ ನಿರ್ಲಕ್ಷ ತಿಳಿಯುತ್ತದೆ.

ಈ ವಿಷಯಕ್ಕೆ ಸಂಬಂಧ ಪಟ್ಟಂತೆ ಪ್ರತಿಭಟನೆ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕೂಡ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಆಯ್ಕೆಯಾದ ಫಲಾನುಭವಿಗಳಿಗೆ ಸೇರಬೇಕಾದ ಸೈಕಲ್‌ಗ‌ಳು ಇಟ್ಟ ಸ್ಥಳದಲ್ಲಿ ತುಕ್ಕು ಹಿಡಿದಿವೆ.
 ಶಿವಕುಮಾರ, ಎಂಆರ್‌ಡಬ್ಲೂ ಕಾರ್ಯಕರ್ತ

ನೀರು ಶುದ್ಧೀಕರಣ ಘಟಕದಲ್ಲಿ ನಾಲ್ಕು ವರ್ಷಗಳಿಂದ ಅಂಗವಿಕಲರ ಸೈಕಲ್‌ಗ‌ಳು ಬಿದ್ದಿವೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಆದರೆ ನಾನು ಅಧಿಕಾರ ವಹಿಸಿಕೊಳ್ಳುವ ಮುಂಚೆ ಮಂಜೂರಾಗಿರುವುದು. ಹೀಗಾಗಿ ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ.
 ಮೀನಾಕುಮಾರಿ, ಸಿಎಂಸಿ ಅಧಿಕಾರಿ

ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.