ಸ್ಥಳೀಯರಿಂದಲೇ ಗುತ್ತಿಗಾರು – ಕಮಿಲ – ಬಳ್ಪ ರಸ್ತೆ ದುರಸ್ತಿ


Team Udayavani, Jul 24, 2018, 1:15 PM IST

road-repair-24-7.jpg

ಸುಬ್ರಹ್ಮಣ್ಯ: ಗುತ್ತಿಗಾರು ಕಮಿಲ ಬಳ್ಪ ರಸ್ತೆ ತೀರಾ ಹದಗೆಟ್ಟಿದ್ದು, ಸಂಬಂಧಪಟ್ಟವರಿಗೆ ಮನವಿ ನೀಡಿದ್ದರೂ ಸ್ಪಂದಿಸದ ಕಾರಣ 2ನೇ ವರ್ಷವೂ ಸ್ಥಳೀ ಯರೇ ಶ್ರಮದಾನದ ಮೂಲಕ ರಸ್ತೆಯ ತಾತ್ಕಾಲಿಕ ದುರಸ್ತಿಯನ್ನು ಮಾಡಿದರು. ಸ್ಥಳೀಯ ಯುವಕರ ತಂಡ ಮತ್ತು ಕಮಿಲದ ಬಾಂಧವ್ಯ ಗೆಳೆಯರ ಬಳಗದ 30ಕ್ಕೂ ಅಧಿಕ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡರು.

ಮನವಿಗೂ ಸ್ಪಂದನೆ ಇಲ್ಲ
ಸುಮಾರು 5.4 ಕಿ.ಮೀ. ದೂರ ಇರುವ ಗುತ್ತಿಗಾರು – ಕಮಿಲ – ಬಳ್ಪ ರಸ್ತೆ ಹದಗೆಟ್ಟು 10 ವರ್ಷಗಳೇ ಕಳೆದಿವೆ. ಎರಡು ಪ್ರಮುಖ ರಾಜ್ಯ ಹೆದ್ದಾರಿಗಳನ್ನು ಸಂಪರ್ಕ ಮಾಡುವ ರಸ್ತೆ ಇದಾಗಿದೆ. ಸ್ಥಳೀಯರು ಸಂಬಂಧಪಟ್ಟವರಿಗೆ ಮನವಿ ನೀಡುತ್ತಲೇ ಇದ್ದಾರೆ. ಜಿಲ್ಲಾ ಪಂಚಾಯತ್‌ ರಸ್ತೆ ಇದಾಗಿದೆ. ಶಾಸಕರಿಗೆ, ಜಿಲ್ಲಾ ಪಂಚಾಯತ್‌ ಗೆ, ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ, ಜಿಲ್ಲಾಧಿಕಾರಿಗಳಿಗೆ, ಸಚಿವರಿಗೆ ಹೀಗೆ ಎಲ್ಲರಿಗೂ ಮನವಿ ನೀಡಿಯಾಗಿದೆ. ಯಾವುದೇ ರೀತಿಯ ಸ್ಪಂದನೆ ಇಲ್ಲ.

ಶ್ರಮದಾನಕ್ಕೆ ಮುನ್ನುಡಿ ಬರೆದರು
ಇಲಾಖೆಗಳು ಯಾವುದೇ ಸ್ಪಂದನ ನೀಡದ ಕಾರಣ ಕಳೆದ ವರ್ಷ ಜನರೇ ಶ್ರಮದಾನದ ಮೂಲಕ ಈ ರಸ್ತೆಯನ್ನು ದುರಸ್ತಿ ಮಾಡಿದ್ದರು. ಈ ವರ್ಷವೂ ಸಾರ್ವಜನಿಕರು, ಯುವಕರು ಹಾಗೂ ಕಮಿಲದ ಬಾಂಧವ್ಯ ಗೆಳೆಯರ ಬಳಗದ ಸದಸ್ಯರು ಶ್ರಮದಾನದ ಮೂಲಕ ರಸ್ತೆ ದುರಸ್ತಿ ಮಾಡಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಗುಂಡಿ ಇರುವ ಕಡೆಗಳಲ್ಲಿ ಕಲ್ಲು, ಮರಳು ತುಂಬುವ ಮೂಲಕ ‘ನಮ್ಮ ರಸ್ತೆ-ನಮ್ಮ ಕೆಲಸ’ ಎನ್ನುವ ಧ್ಯೇಯ ಇಟ್ಟುಕೊಂಡು ಇಡೀ ದಿನ ಕೆಲಸ ಮಾಡಿ ರಸ್ತೆ ದುರಸ್ತಿ ಮಾಡಿದ್ದಾರೆ. ಸುಮಾರು 30ಕ್ಕೂ ಅಧಿಕ ಮಂದಿಯ ಶ್ರಮದಿಂದ ರಸ್ತೆ ಈ ಮಳೆಗಾಲದಲ್ಲಿ ಸಂಚಾರ ಯೋಗ್ಯವಾಗಿದೆ.

ಸಂಪೂರ್ಣ ಡಾಮರು ಆಗಿಯೇ ಇಲ್ಲ
ಈ ರಸ್ತೆಯ ದುರಸ್ತಿಗಾಗಿ 8 ವರ್ಷಗಳ ಹಿಂದೆಯೇ ಪ್ರತಿಭಟನೆ ನಡೆದಿತ್ತು. ಹೀಗಿದ್ದರೂ 5.4 ಕಿ.ಮೀ. ಉದ್ದದ ರಸ್ತೆಗೆ ಸಂಪೂರ್ಣ ಡಾಮರು ಕಾಮಗಾರಿ ನಡೆದೇ ಇಲ್ಲ. ಬಹು ಒತ್ತಾಯದ ಮೇರೆಗೆ ಎರಡು ವರ್ಷದ ಹಿಂದೆ 1.5 ಕಿ.ಮೀ. ರಸ್ತೆಯನ್ನು ಭೂಸೇನಾ ನಿಗಮದ ಮೂಲಕ ರಸ್ತೆ ಅಗೆದು ದುರಸ್ತಿ ಮಾಡಿದ್ದರು. ಅದು ಕೂಡ ಒಂದೇ ವರ್ಷದಲ್ಲಿ ಕಿತ್ತು ಹೋಗಿತ್ತು. ಈ ಬಗ್ಗೆ ಜಿ.ಪಂ.ನಿಂದ ಹಿಡಿದು ಜಿಲ್ಲಾಧಿಕಾರಿ ಕಚೇರಿವರೆಗೂ ತಿಳಿಸಿದರೂ ಪ್ರಯೋಜನ ಶೂನ್ಯ. 

ತೇಪೆಯೂ ಮಂಗಮಾಯ!
ಕಳೆದ ವರ್ಷ 1.5 ಕಿ.ಮೀ. ರಸ್ತೆಯನ್ನು ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯ ಮೂಲಕ ದುರಸ್ತಿ ಮಾಡಲಾಗಿತ್ತು. ಉಳಿದ ಸುಮಾರು 2 ಕಿ.ಮೀ. ರಸ್ತೆ ತೇಪೆ ಹಾಕುವ ಕಾರ್ಯ ಮಾಡಿದ್ದರು. ಇದೀಗ ಮಳೆಗೆ ಅಲ್ಲಲ್ಲಿ ತೇಪೆಯೂ ಎದ್ದು ಹೋಗುತ್ತಿದೆ. 2 ಕಿ.ಮೀ. ರಸ್ತೆಯಂತು ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಅಯೋಗ್ಯವಾಗಿದೆ.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.