ಮನದ ಕ್ಲೇಶ ಕಳೆಯಲು ಭಜನೆ ಸಹಕಾರಿ: ಸತೀಶ್‌ ಕೋಟ್ಯಾನ್‌


Team Udayavani, Jul 25, 2018, 2:00 AM IST

bhajane-24-7.jpg

ಪೆರ್ಡೂರು: ಇಲ್ಲಿನ ಶ್ರೀ ಭೈರವನಾಥೇಶ್ವರ ಸೇವಾ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಸಂಗೀತ ಶಾಲೆಯ ಆರನೇ ವಾರ್ಷಿಕೋತ್ಸವದ ಅಂಗವಾಗಿ ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಜು. 22ರಂದು ಜರಗಿದ ಅಭಜಿತ ಉಡುಪಿ, ದ.ಕ. ಜಿಲ್ಲಾ ಮಟ್ಟದ ಆಯ್ದ ತಂಡಗಳ ಭಜನೆ ಜುಗಲ್‌ ಬಂದಿ ಸ್ಪರ್ಧೆಯಲ್ಲಿ ಸತತ ಮೂರನೇ ವರ್ಷ ಮಂಗಳೂರು ನೀರುಮಾರ್ಗದ ಶ್ರೀ ಸುಬ್ರಹ್ಮಣ್ಯ ಭಜನ ಮಂಡಳಿ ಪ್ರಥಮ ಬಹುಮಾನ ಗಳಿಸಿದೆ.

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಿತಿ ಅಧ್ಯಕ್ಷ ಸತೀಶ್‌ ಕೋಟ್ಯಾನ್‌, ನಿತ್ಯದ ಬದುಕಿನಲ್ಲಿ ಕಾಡುವ ಮನದ ಕ್ಲೇಶ‌ ಕಳೆದುಕೊಂಡು ಪ್ರಫ‌ುಲ್ಲಗೊಳ್ಳಲು ಭಜನೆ ಸಹಕರಿಸುತ್ತದೆ. ಮಾತ್ರವಲ್ಲದೆ ಸಜ್ಜನರಾಗಿ ಬಾಳುವಂತೆ ಮಾಡುತ್ತದೆ. ಭಜನೆ ಇದ್ದಲ್ಲಿ ದೇವರಿರುತ್ತಾನೆ ಎಂದರು.

ಭಜನೆ ಕ್ಷೇತ್ರದಲ್ಲಿ ದಶಕಗಳ ಸೇವೆ ಸಲ್ಲಿಸಿದ ಗ್ರಾಮದ ಹಿರಿಯರಾದ ಭುಜಂಗ ಶೆಟ್ಟಿ, ಹೆರ್ಡೆ ಸಣ್ಣಮನೆ  ಹಾಗೂ ಬಿ.ಕೆ. ಪದ್ಮನಾಭ ಉಪಾಧ್ಯಾಯ, ಬೆಳ್ಳರ್ಪಾಡಿ ಇವರನ್ನು ಸಮ್ಮಾನಿಸಲಾಯಿತು. ಸ್ಪರ್ಧೆಯ ಹಾಗೂ ಶಾಲೆಯ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಭಜನೆ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಿತಿಯ ಸದಸ್ಯರ ಕುಟುಂಬದಲ್ಲಿ ಈ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಎಸೆಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.


ಸಮಿತಿಯ ಗೌರವಾಧ್ಯಕ್ಷ ಶಾಂತಾರಾಮ ಸೂಡ, ಉಪಾಧ್ಯಕ್ಷ ಪ್ರಮೋದ್‌ ರೈ ಪಳಜೆ, ತೀರ್ಪುಗಾರರಾದ ಖ್ಯಾತ ಗಾಯಕ ಚಂದ್ರಶೇಖರ ಕೆದಿಲಾಯ, ಉಮಾಮಹೇಶ್ವರಿ  ಭಟ್‌ ಆತ್ರಾಡಿ ಹಾಗೂ ಶಶಿಪ್ರಭಾ ಮಾತನಾಡಿದರು. ವೇದಿಕೆಯಲ್ಲಿ ತಾ. ಪಂ. ಸದಸ್ಯ ಸುಭಾಸ್‌ ನಾಯ್ಕ, ಪೆರ್ಡೂರು ಪಂಚಾಯತ್‌ ಅಧ್ಯಕ್ಷೆ ಶಾಂಭವಿ ಕುಲಾಲ್‌, ಸಮಿತಿಯ ಕಾರ್ಯದರ್ಶಿ, ಸಂಗೀತ ಶಾಲೆಯ ಶಿಕ್ಷಕಿ ಅಕ್ಷತಾ ರಾವ್‌ ಉಪಸ್ಥಿತರಿದ್ದರು. ಉಪೇಂದ್ರ ಆಚಾರ್ಯ ನಿರೂಪಿಸಿ, ವಂದಿಸಿದರು.

ಬಹುಮಾನ ವಿಜೇತರು
ಶ್ರೀ  ಸುಬ್ರಹ್ಮಣ್ಯ ಭಜನ ಮಂಡಳಿ, ನೀರುಮಾರ್ಗ, ಮಂಗಳೂರು (ಪ್ರಥಮ), ಅಮೃತವರ್ಷಿಣಿ ಭಜನ ಮಂಡಳಿ, ಪಿತ್ರೋಡಿ, ಉದ್ಯಾವರ (ದ್ವಿತೀಯ), ಮಕ್ಕಳ ಶ್ರೀ ಮಹಾಲಕ್ಷ್ಮೀ ಭಜನ ಮಂಡಳಿ, ಕಾಪು ಪೊಲಿಪು (ತೃತೀಯ), ವಿಶೇಷ ಬಹುಮಾನ: ಶಿವರಂಜಿನಿ ಭಜನ  ಮಂಡಳಿ, ಸುರತ್ಕಲ್‌, ಭಗವಾನ್‌ ಶಿರ್ಡಿ ಸತ್ಯಸಾಯಿ ಸೇವಾ ಕ್ಷೇತ್ರ, ಬೆಳ್ತಂಗಡಿ.

ವೈಯಕ್ತಿಕ ವಿಭಾಗದಲ್ಲಿ ಈಶ್ವರ್‌, ಮಕ್ಕಳ ಶ್ರೀ ಮಹಾಲಕ್ಷ್ಮೀ ಭಜನ ಮಂಡಳಿ, ಕಾಪು ಪೊಲಿಪು (ಉತ್ತಮ ಗಾಯಕ), ಸುಮನ್‌ ದೇವಾಡಿಗ (ತಬಲ), ಪ್ರಸಾದ್‌ (ಹಾರ್ಮೋನಿಯಂ) ಶ್ರೀ ಸುಬ್ರಹ್ಮಣ್ಯ ಭಜನ  ಮಂಡಳಿ, ನೀರುಮಾರ್ಗ, ಮಂಗಳೂರು.

ವಿದ್ಯಾರ್ಥಿಗಳಿಗಾಗಿ ನಡೆದ‌ ಸ್ಪರ್ಧೆಗಳ ವಿಜೇತರು: ಕಿರಿಯರ ವಿಭಾಗ: ಸಾನಿಧ್ಯ (ಪ್ರಥಮ), ಸೌಮ್ಯಶ್ರೀ (ದ್ವಿತೀಯ), ಶಶಾಂಕ್‌  (ತೃತೀಯ),
ಪ್ರೌಢ ವಿಭಾಗ: ಸೌಜನ್ಯಾ (ಪ್ರಥಮ), ಶಯನಾ (ದ್ವಿತೀಯ), ದಿಶಾ ಯು.ಶೆಟ್ಟಿ (ತೃತೀಯ),
ಹಿರಿಯರ ವಿಭಾಗ: ನಾಗಲತಾ (ಪ್ರಥಮ), ಕುಸುಮಾ (ದ್ವಿತೀಯ), ಶ್ರೇಯಾ (ಪ್ರೋತ್ಸಾಹಕ).

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.