ಸಾರ್ವಜನಿಕ ಜಾಗೃತಿಗಾಗಿ ಬೀಟ್‌ ಸದಸ್ಯರ ನೇಮಕ


Team Udayavani, Jul 25, 2018, 2:55 AM IST

beat-24-7.jpg

ಪಡುಬಿದ್ರಿ: ಸಾರ್ವಜನಿಕರು ಎಲ್ಲದಕ್ಕೂ ಪೊಲೀಸರನ್ನೇ ಹೊಣೆ ಮಾಡುವುದಕ್ಕಿಂತ ಮೊದಲು ತಾವೂ ಜಾಗೃತರಾಗಬೇಕು ಎಂಬ ನಿಟ್ಟಿನಲ್ಲಿ ಪೊಲೀಸ್‌ ಠಾಣಾ ಸರಹದ್ದಿನ ಗ್ರಾಮಗಳಲ್ಲಿ ವಾರ್ಡ್‌ ಬೀಟ್‌ ಸದಸ್ಯರ ಚಿಂತನೆಯನ್ನು ಇಲಾಖೆ ಕೈಗೆತ್ತಿಕೊಂಡಿದೆ. ಅಪರಿಚಿತ ಯಾರೇ ಬಾಡಿಗೆದಾರರಿರಲಿ, ಅವರ ವಿಳಾಸ ಹಾಗೂ ಗುರುತು ಪತ್ರವನ್ನು  ಕಟ್ಟಡದ ಮಾಲಕರು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಹಾಗೂ ಪೊಲೀಸ್‌ ಠಾಣೆಗೂ ನೀಡಬೇಕು ಎಂದು ಪಡುಬಿದ್ರಿ ಠಾಣಾಧಿಕಾರಿ ಸತೀಶ್‌ ತಿಳಿಸಿದರು. ಅವರು ಜು. 24ರಂದು ಬೀಡಿನಕರೆ ಅಂಗನವಾಡಿಯಲ್ಲಿ ನಡೆದ ಪಡುಬಿದ್ರಿ ಗ್ರಾ. ಪಂ. ವ್ಯಾಪ್ತಿಯ 3 ಮತ್ತು 4 ನೇ ವಾರ್ಡ್‌ಗೆ ಸಂಬಂಧಿಸಿದ ಪೊಲೀಸ್‌ ಬೀಟ್‌ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಕಳೆದ ಕೆಲ ದಿನಗಳ ಹಿಂದೆ ಹೆಜಮಾಡಿಯಲ್ಲಿ ಬೈಕ್‌ ಕಳ್ಳತನದ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣದಲ್ಲಿ ಮನೆಯಲ್ಲಿ ಬಾಡಿಗೆಯಲ್ಲಿದ್ದ ವ್ಯಕ್ತಿಗಳೇ ಬೈಕ್‌ ಕದ್ದೊಯ್ದಿದ್ದರು. ಆದರೆ ಮನೆಯವರಲ್ಲಿ ವಿಚಾರಿಸಿದಾಗ ಬಾಡಿಗೆದಾರರ ಯಾವುದೇ ಗುರುತು ಪತ್ರವಿರಲಿಲ್ಲ. ಇದರಿಂದ ಆರೋಪಿಗಳ ಪತ್ತೆಗೆ ತೊಡಕಾಗಿತ್ತು ಎಂದರು. ಕನ್ನಂಗಾರಿನ ಮದರಸ ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸ ಸುರಿಯಲಾಗುತ್ತಿದೆ. ಬೀದಿ ದೀಪಗಳು ಸರಿಯಾಗಿ ಉರಿಯುತ್ತಿಲ್ಲ ಎಂದು ಗ್ರಾಮಸ್ಥರು ಪಡುಬಿದ್ರಿ ಗ್ರಾ.ಪಂ. ಪಿಡಿಒ ಅವರನ್ನು ಪ್ರಶ್ನಿಸಿದರು.

ಪಡುಬಿದ್ರಿಯ ಘನ ತ್ಯಾಜ್ಯ ಸಮಸ್ಯೆಗೆ ಶೀಘ್ರದಲ್ಲಿ ಮುಕ್ತಿ ದೊರೆಯಲಿದೆ. ನಡ್ಪಾಲು ಗ್ರಾಮದಲ್ಲಿ ಸುಮಾರು ಒಂದು ಎಕರೆ ಜಮೀನು ಇರುವ ಬಗ್ಗೆ ಮಾಹಿತಿ ಪಡೆಯಲಾಗಿದೆ. ಅದರ ಸರ್ವೇ ಸಂಖ್ಯೆ ಗುರುತಿಸಿ ಘಟಕ ನಿರ್ಮಾಣ ಮಾಡಲು ಪ್ರಯತ್ನಿಸಲಾಗುತ್ತದೆ. ಈಗಾಗಲೇ ಗ್ರಾ.ಪಂ. ಕಟ್ಟಡದ ಬಳಿಯಲ್ಲಿ ಘನತ್ಯಾಜ್ಯ ಸಂಸ್ಕರಣಾ ಪ್ರಾಯೋಗಿಕ ಘಟಕ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ ಎಂದು ಪಿಡಿಒ ಪಂಚಾಕ್ಷರಿ ಸ್ವಾಮಿ ಕೆರಿಮಠ ವಿವರಿಸಿದರು.

ಬೀಡು ಮಂಜೊಟ್ಟಿ ರಸ್ತೆಯಲ್ಲಿ ಸಂಚರಿಸುವವರ ಬಗ್ಗೆ ನಿಗಾವಹಿಸಬೇಕು. ಕನ್ನಂಗಾರಿನ ಮಸೀದಿ ಪ್ರದೇಶದಲ್ಲಿ ನಡೆಯುವ ಸಮಾರಂಭಗಳಿಗೆ ಆಗಮಿಸುವವರು ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರಿದರು. ಪೊಲೀಸರು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಪ್ರೊಬೆಶನರಿ ಸಹಾಯಕ ಕಮಿಷನರ್‌ ಮಂಜುನಾಥ್‌, ಪಡುಬಿದ್ರಿ ಠಾಣೆಯ ಎಎಸ್‌ಐ ದಿವಾಕರ್‌ ಸುವರ್ಣ, ಹೆಡ್‌ ಕಾನ್‌ಸ್ಟೆಬಲ್‌ ಯೋಗೀಶ್‌, ಗ್ರಾ.ಪಂ. ಸದಸ್ಯರಾದ ಮೈಯ್ಯದಿ, ರವಿಚಂದ್ರ, ಶಶಿಕಲಾ, ಸ್ಥಳೀಯರಾದ ರೋಹಿತಾಕ್ಷ ಸುವರ್ಣ, ಶ್ರೀನಾಥ್‌ ಹೆಗ್ಡೆ, ಅಂಗನವಾಡಿ ಶಿಕ್ಷಕಿ ಲೀಲಾವತಿ ಉಪಸ್ಥಿತರಿದ್ದರು.

ಮಕ್ಕಳಿಗೆ ಮೊಬೈಲ್‌ ಬೇಡ
ಯಾರೇ ಅಪರಿಚಿತ ವ್ಯಕ್ತಿಗಳು ಏನೇನೋ ನೆಪದಿಂದ ರಸ್ತೆಗಳಲ್ಲಿ ಹಾಗೂ ಒಂಟಿ ಮಹಿಳೆಯರಿರುವ ಮನೆಗಳಿಗೆ ಭೇಟಿ ನೀಡುವ ಸಮಯದಲ್ಲಿ ಎಚ್ಚರದಿಂದಿರಬೇಕು. ಶಾಲಾ ಮಕ್ಕಳ ಕೈಯಲ್ಲಿ ಯಾವುದೇ ಕಾರಣಕ್ಕೂ ಮೊಬೈಲ್‌ ನೀಡಬೇಡಿ. ಮಕ್ಕಳು ಮನೆಗೆ ಬರುವಾಗ ದಾರಿ ಕಡೆ ಗಮನವಿರದೆ ಕೇವಲ ಮೊಬೈಲ್‌ ಮೇಲಿರುತ್ತದೆ. ಇದು ದುಷ್ಕರ್ಮಿಗಳಿಗೆ ಅನುಕೂಲವಾಗುತ್ತದೆ. ಈ ಬಗ್ಗೆಯೂ ಎಚ್ಚರವಹಿಸಬೇಕು ಎಂದು ಪಡುಬಿದ್ರಿ ಠಾಣಾಧಿಕಾರಿ ಸತೀಶ್‌ ಮನವಿ ಮಾಡಿದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.