7 ಕೆ.ಜಿ. ಅಕ್ಕಿ: ಚುನಾವಣೆವರೆಗೂ ಮುಂದುವರಿಕೆ?


Team Udayavani, Jul 25, 2018, 6:00 AM IST

29.jpg

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಏಳು ಕೆ.ಜಿ.ಅಕ್ಕಿ ಕೊಡುವ ವಿಚಾರದ ಬಗ್ಗೆ ಗೊಂದಲ ಮುಂದುವರಿದಿದೆಯಾದರೂ ಮುಂದಿನ ಲೋಕಸಭಾ
ಚುನಾವಣೆವರೆಗೆ ಈಗಿರುವ ವ್ಯವಸ್ಥೆಯನ್ನೇ ಮುಂದುವರಿಸಿ ಎಂದು ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಕೆಲವು ಶಾಸಕರು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮೇಲೆ ಒತ್ತಡ ಹಾಕುತ್ತಿದ್ದಾರೆ.

2 ಕೆ.ಜಿ. ಅಕ್ಕಿ ಕಡಿತಗೊಳಿಸುವುದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಹೀಗಾಗಿ, ಲೋಕಸಭೆ ಚುನಾವಣೆವರೆಗೆ ಹಾಲಿ ವ್ಯವಸ್ಥೆ ಮುಂದುವರಿದರೆ ಎರಡೂ ಪಕ್ಷಗಳಿಗೂ ಅನುಕೂಲವಾಗಲಿದೆ. ಹೀಗಾಗಿ, ಸದ್ಯಕ್ಕೆ ಯೋಜನೆ ಮುಂದುವರಿಯಲಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಏಳು ಕೆ.ಜಿ ಅಕ್ಕಿ ಕೊಡುವುದಾಗಿ ಮುಖ್ಯಮಂತ್ರಿ ಹಾಗೂ ಆಹಾರ ಸಚಿವರು ಹೇಳುತ್ತಿದ್ದಾರೆ. ಆದರೆ, ಆಗಸ್ಟ್‌ ಮತ್ತು ಸೆಪ್ಟೆಂಬರ್‌ ತಿಂಗಳಿಗೆ ಏಳು ಕೆ.ಜಿ. ಅಕ್ಕಿ ಕೊಡಲು ಯಾವುದೇ ತೊಂದರೆಯಿಲ್ಲ. ಆದರೆ, ಮುಂದೇನು ಎಂದು ಈಗಲೇ ಹೇಳಲಿಕ್ಕಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸುತ್ತಾರೆ.
ಈಗಾಗಲೇ ಜುಲೈನಲ್ಲಿ ಬಿಪಿಎಲ್‌ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 7 ಕೆ.ಜಿ. ಅಕ್ಕಿ ವಿತರಿಸಲಾಗಿದೆ. 

ಆಗಸ್ಟ್‌ಗೆ ಬೇಕಾಗುವ ಅಕ್ಕಿ ಈಗಾಗಲೇ ಖರೀದಿಸಿದ್ದು, ಅದನ್ನು ಪಡಿತರ ಅಂಗಡಿಗಳಿಗೆ ಪೂರೈಕೆ ಮಾಡುತ್ತೇವೆ. ಜುಲೈನಲ್ಲಿ ಉಳಿಕೆಯಾದ ಅಕ್ಕಿಯನ್ನು ಆಗಸ್ಟ್‌ನಲ್ಲಿ ಮತ್ತು ಆಗಸ್ಟ್‌ನಲ್ಲಿ ಉಳಿಕೆಯಾದ ಅಕ್ಕಿಯನ್ನು ಸೆಪ್ಟೆಂಬರ್‌ ತಿಂಗಳಲ್ಲಿ ಬಳಕೆ ಮಾಡಕೊಳ್ಳಲಾಗುವುದು. ಹಾಗಾಗಿ, 2 ತಿಂಗಳ ಮಟ್ಟಿಗೆ ಏಳು ಕೆ.ಜಿ ಅಕ್ಕಿಗೆ ಸಮಸ್ಯೆಯಿಲ್ಲ. ಅದೇ ರೀತಿ ಒಂದು ಬಿಪಿಎಲ್‌ ಕಾರ್ಡ್‌ಗೆ 1 ಕೆ.ಜಿ ತೊಗರಿ ಬೇಳೆ ಸಹ ಸಿಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಬಜೆಟ್‌ನಲ್ಲಿ ಘೋಷಿಸಿರುವ ಒಂದು ಬಿಪಿಎಲ್‌ ಕುಟುಂಬದ ಪ್ರತಿ ಸದಸ್ಯನಿಗೆ ರಿಯಾಯಿತಿ ದರದಲ್ಲಿ ಅರ್ಧ ಕೆ.ಜಿ. ತೊಗರಿ ಬೇಳೆ, ಪ್ರತಿ ಬಿಪಿಎಲ್‌ ಕಾರ್ಡ್‌ಗೆ 1 ಕೆ.ಜಿ. ತಾಳೆ ಎಣ್ಣೆ, 1 ಕೆ.ಜಿ. ಅಯೋಡಿನ್‌ ಮತ್ತುಕಬ್ಬಿಣಾಂಶಯುಕ್ತ ಉಪ್ಪು, 1 ಕೆ.ಜಿ. ಸಕ್ಕರೆ ಸಹ ಅ.1ರಿಂದಲೇ ಫ‌ಲಾನುಭವಿಗಳಿಗೆ ಸಿಗಲಿದೆ. ಈಗಿನ ವ್ಯವಸ್ಥೆಯಲ್ಲಿ ಒಂದು ಬಿಪಿಎಲ್‌ ಕಾರ್ಡ್‌ಗೆ 1 ಕೆ.ಜಿ.ತೊಗರಿ ಬೇಳೆ ನೀಡಲಾಗುತ್ತಿತ್ತು. ಈಗ ಕುಟುಂಬದ ಒಬ್ಬ ಸದಸ್ಯನಿಗೆ ಅರ್ಧ ಕೆ.ಜಿ ತೊಗರಿ ಬೇಳೆ ನೀಡಲು ಉದ್ದೇಶಿಸಲಾಗಿದೆ. ಹೀಗಾಗಿ ಹೆಚ್ಚುವರಿ ಬೇಳೆ ಹೊಂದಿಸಲು ಸಿದಟಛಿತೆ ಮಾಡಿಕೊಳ್ಳಬೇಕು. ಅದೇ ರೀತಿ ಗುಜರಾತ್‌ನಿಂದ ಉಪ್ಪು ಖರೀದಿಸಲು ಟೆಂಡರ್‌ ಕರೆಯಬೇಕು. ಇದಕ್ಕೆಲ್ಲ ಕನಿಷ್ಠ 2 ತಿಂಗಳಾದರೂ ಬೇಕು. ಹಾಗಾಗಿ, ಈಗಿನ ಬಜೆಟ್‌ನಲ್ಲಿ ಘೋಷಿಸಿರುವ ಪಡಿತರ ಪ್ರಮಾಣ ಅಕ್ಟೋಬರ್‌ನಿಂದ ಫ‌ಲಾನುಭವಿಗಳಿಗೆ ಸಿಗಲಿದೆ ಎಂದು ಆಹಾರ ಇಲಾಖೆಯ ಹಿರಿಯ ಅಧಿಕಾರಿಗಳು ಹೇಳುತ್ತಾರೆ.

ಅನ್ನಭಾಗ್ಯ ಯೋಜನೆಯಡಿ 7 ಕೆ.ಜಿ. ಅಕ್ಕಿ ವಿತರಣೆ ಮುಂದುವರಿಯಲಿದೆ. ಅಕ್ಕಿ ಕಡಿತ ಬಗ್ಗೆ ಮುಖ್ಯಮಂತ್ರಿ ನನ್ನ ಬಳಿ ಚರ್ಚೆ ನಡೆಸಿಲ್ಲ. ಹೀಗಾಗಿ, ಆ ವಿಚಾರದಲ್ಲಿ ಯಾವುದೇ ಗೊಂದಲ ಬೇಡ.
● ಜಮೀರ್‌ ಅಹಮದ್‌, ಸಚಿವ

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.