ಸಂಪರ್ಕ ರಸ್ತೆ ನಿರ್ಮಿಸಿ: ಕುದ್ರುಬೈಲು ನಿವಾಸಿಗಳ ಆಗ್ರಹ


Team Udayavani, Jul 25, 2018, 2:40 AM IST

kudrubailu-24-7.jpg

ತೆಕ್ಕಟ್ಟೆ: ತೆಕ್ಕಟ್ಟೆ ಗ್ರಾ.ಪಂ.ವ್ಯಾಪ್ತಿಯ ಕುದ್ರುಬೈಲು ಪರಿಸರಕ್ಕೆ ಸಂಪರ್ಕ ರಸ್ತೆ ಇಲ್ಲದಿರುವುದರಿಂದ ಜನತೆ ವರ್ಷವಿಡೀ ಪ್ರಯಾಸ ಪಡುವಂತಾಗಿದೆ. ಇದರೊಂದಿಗೆ ಮಳೆಗಾಲದಲ್ಲಂತೂ ಈ ಭಾಗದಲ್ಲಿ ನೆರೆ ಸಮಸ್ಯೆಯಿಂದಾಗಿ ಇಡೀ ಪರಿಸರವೇ ಜಲಾವೃತಗೊಳ್ಳುತ್ತಿದ್ದು ಸಂಪರ್ಕ ತಪ್ಪಿ ಹೋಗುತ್ತಿದೆ.  ಪರಿಸರದಲ್ಲಿ ಪ್ರತಿವರ್ಷವೂ ನೆರೆ ಭೀತಿಯಿಂದ ಸರಿಯಾದ ಸಂಪರ್ಕ ರಸ್ತೆಗಳಿಲ್ಲದೆ ಪ್ರಯಾಸಪಡುವಂತಾಗಿದೆ.

ಸಂಪರ್ಕ ರಸ್ತೆಗಳಿಲ್ಲ 
ಕುದ್ರುಬೈಲು ಪರಿಸರದಲ್ಲಿ ಕೆಲವು ಮನೆಗಳು ಮತ್ತು ನೂರಾರು ಎಕರೆ ಕೃಷಿ ಭೂಮಿ ಇದೆ. ತೆಕ್ಕಟ್ಟೆ ರಾ.ಹೆ. 66 ಕ್ಕೆ ಹತ್ತಿರದಲ್ಲೇ ಈ ಜಾಗವಿದ್ದರೂ ಇಲ್ಲಿ ಮನೆ ಹೊಂದಿದವರು ಸಂಪರ್ಕ ರಸ್ತೆ ಇಲ್ಲದೆ ಪರದಾಡುಂತಾಗಿದೆ. ಜತೆಗೆ ಕೃಷಿ ಕಾರ್ಯಕ್ಕೂ ತೀವ್ರ ಅಡಚಣೆಯಾಗುತ್ತಿದ್ದು ತೊಂದರೆ ಅನುಭವಿಸುವಂತಾಗಿದೆ. ಇನ್ನು ಇಲ್ಲಿರುವ ಕಾಲುಸಂಕವೂ ಶಿಥಿಲವಾಗಿದ್ದು, ನೀರಿನ ಹರಿವು ತೀವ್ರವಾಗಿರುವಾಗ ದಾಟುವುದು ತೀವ್ರ ಅಪಾಯಕಾರಿಯಾಗಿದೆ. ಕುದ್ರುಬೈಲುಗೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಇಲ್ಲಿನ ಜನರು ದಶಕಗಳಿಂದ ಆಗ್ರಹಿಸುತ್ತಲೇ ಬಂದಿದ್ದಾರೆ.

ಹುಸಿಯಾದ ಭರವಸೆ !
ಗ್ರಾ.ಪಂ. ವ್ಯಾಪ್ತಿಯಲ್ಲಿ ಕುದ್ರುಬೈಲು ನೆರೆ ಪೀಡಿತ ಪ್ರದೇಶಗಳಲ್ಲಿ ಒಂದು. ವರ್ಷವೂ ಈ ಸಮಸ್ಯೆ ಮರುಕಳಿಸುತ್ತಲೇ ಇದೆ. ಆದರೆ ಪರಿಹಾರ ಸಿಕ್ಕಿಲ್ಲ. 2011ರಲ್ಲಿ ಉಡುಪಿ ಸಂಸದರಾಗಿದ್ದ  ಡಿ.ವಿ.ಸದಾನಂದ ಗೌಡರು ಇಲ್ಲಿಗೆ ಭೇಟಿ ನೀಡಿ ಕುದ್ರು ಸಂಪರ್ಕ ರಸ್ತೆ ಬಗ್ಗೆ ಭರವಸೆ ನೀಡಿದ್ದರು. ಆದರೆ ಅದು ಬರಿಯ ಮಾತಾಗಿ ಉಳಿದಿದೆ. ಜನರು ಸಂಪರ್ಕ ರಸ್ತೆ ಬಗ್ಗೆ ಇನ್ನೂ ಕಾಯುತ್ತಲೇ ಇದ್ದಾರೆ.

ಶಾಶ್ವತ ಪರಿಹಾರ ಕಲ್ಪಿಸಿ
ಕುದ್ರುಬೈಲು ಸಂಪರ್ಕ ರಸ್ತೆ ಇಲ್ಲದ್ದರಿಂದ ಶಿಥಿಲಗೊಂಡ ಕಾಲು ಸಂಕದ ಮೇಲೆ ಅಪಾಯದ ನಡುವೆ ಕೃಷಿಕರು ಹೊಳೆ ಸಾಲು ದಾಟಿಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಗ್ರಾಮೀಣರ ಸಂಕಷ್ಟವನ್ನು ಅರಿತು ಇನ್ನಾದರೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕಾಗಿದೆ.
– ಶ್ರೀನಾಥ್‌ ಶೆಟ್ಟಿ  ಮೇಲ್ತಾರುಮನೆ, ತೆಕ್ಕಟ್ಟೆ  ಕೃಷಿಕರು

ತೀವ್ರ ನಿರ್ಲಕ್ಷ್ಯ
ಕಳೆದ ಹಲವು ವರ್ಷಗಳಿಂದಲೂ ಈ ಕುದ್ರುಬೈಲು ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಮಳೆಗಾಲದಲ್ಲಿ ಇಲ್ಲಿ ಅಪಾಯದ ನಡುವೆ ಸಂಚರಿಸಬೇಕಾಗಿದೆ.  
– ನಾಗೇಶ್‌ ದೇವಾಡಿಗ, ಕುದ್ರುಮನೆ. ಸ್ಥಳೀಯರು

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.