ಭದ್ರಾ ಡ್ಯಾಂ ಬಹುತೇಕ ಭರ್ತಿ
Team Udayavani, Jul 25, 2018, 6:00 AM IST
ಬೆಂಗಳೂರು: ಮಲೆನಾಡು, ಕರಾವಳಿ, ಕೊಡಗು ಭಾಗದಲ್ಲಿ ಮಳೆ ಮುಂದುವರಿದಿದ್ದು, ನಾಲ್ಕು ವರ್ಷಗಳ ನಂತರ ಭದ್ರಾ ಜಲಾಶಯ ಭರ್ತಿಯಾಗುವ ಹಂತ ತಲುಪಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಉತ್ತಮ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಸೇರಿ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ.
ಭದ್ರಾ ಜಲಾಶಯ ನಾಲ್ಕು ವರ್ಷಗಳ ನಂತರ ಭರ್ತಿಯಾಗುವ ಹಂತ ತಲುಪಿದ್ದು, ಭರ್ತಿಗೆ ಒಂದೆರಡು ಅಡಿ ಮಾತ್ರ ಬಾಕಿಯಿದೆ. (ಗರಿಷ್ಠ; 186 ಅಡಿ, ಪ್ರಸ್ತುತ 183.3 ಅಡಿ). ಈ ಹಿನ್ನೆಲೆಯಲ್ಲಿ ಮಂಗಳವಾರ ನಾಲ್ಕು ಕ್ರಸ್ಟ್ ಗೇಟ್ಗಳ ಮೂಲಕ 6,000 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ನದಿತೀರದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಈ ಮಧ್ಯೆ, ಕಳೆದ ಶುಕ್ರವಾರ ಸಿರುಗುಪ್ಪ ಬಳಿ ತುಂಗಭದ್ರಾ ನದಿಯಲ್ಲಿ ಮರಳು ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿಹೋಗಿದ್ದ ತಂದೆ, ಮಗ ಇಬ್ಬರಲ್ಲಿ ಮಗನ ಶವ ಪತ್ತೆಯಾಗಿದೆ. ಬಾಲಕ ಇಸಾಕ್ನ ಶವ ಚಿಕ್ಕಬಳ್ಳಾರಿ ಸಮೀಪ ಪತ್ತೆಯಾಗಿದೆ. ಈತನ ತಂದೆ ರಫಿಕ್ ಶವ ಇನ್ನೂ ಪತ್ತೆಯಾಗಿಲ್ಲ.
ಶಿವಮೊಗ್ಗ ಜಿಲ್ಲೆ ಭದ್ರಾ ಜಲಾಶಯ ನಾಲ್ಕು ವರ್ಷಗಳ ನಂತರ ಭರ್ತಿಯಾಗುವ ಹಂತ ತಲುಪಿದ್ದು, ಭರ್ತಿಗೆ ಒಂದೆರಡು ಅಡಿ ಮಾತ್ರ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ 4 ಕ್ರಸ್ಟ್ಗೇಟ್ಗಳ ಮೂಲಕ 6,000 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ.