ಬಿಲ್ಲವರ ಅಸೋಸಿಯೇಶನ್‌ ಬೊರಿವಲಿ-ದಹಿಸರ್‌ : ಆಟಿಡೊಂಜಿ ಕೂಟ


Team Udayavani, Jul 25, 2018, 4:28 PM IST

2307mum09.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಬೊರಿವಲಿ-ದಹಿಸರ್‌ ಸ್ಥಳೀಯ ಸಮಿತಿಯ ವಾರ್ಷಿಕ ಆಟಿಡೊಂಜಿ ಕೂಟ ಕಾರ್ಯಕ್ರಮವು ಗೋರೈ-1 ರಲ್ಲಿರುವ ಸ್ಥಳೀಯ ಸಮಿತಿಯ ಕಚೇರಿ ಗುರು ಸನ್ನಿಧಿಯಲ್ಲಿ ವೈವಿಧ್ಯಮಯ ಕಾರ್ಯ ಕ್ರಮಗಳೊಂದಿಗೆ ಜು. 22 ರಂದು ಅಪರಾಹ್ನ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಮೊಗವೀರ ಮಾಸಿಕದ ಸಂಪಾದಕ ಅಶೋಕ್‌ ಸುವರ್ಣ ಇವರು ಗುರುಮೂರ್ತಿ ಸಾನಿಧ್ಯದಲ್ಲಿ ದೀಪ ಬೆಳಗಿಸಿ ಕಲಶದಲ್ಲಿ ಹಿಂಗಾರ ಅರಳಿಸಿ ತುಳುನಾಡ ಪರಂಪರೆಗೆ ಅನುಗುಣವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಊರಿನ ಪರಂಪರೆಯನ್ನು ನವಿ ರುಗೊಳಿಸುವಂತ ಇಂತಹ ಕಾರ್ಯಕ್ರಮ ಉಪಯುಕ್ತವಾಗಿದೆ. ಇದರಿಂದ ಮುಂದಿನ ಜನಾಂಗವು ಫಲಕಾರಿಯಾಗಲಿದೆ. ನಾವು ನಮ್ಮ ಹಿತ್ತಲಿನ ಕೆಲವೊಂದು ಗಿಡಮೂಲಿಕೆಗಳ ಮಹತ್ವ, ಅದರ ಪ್ರಯೋಜನವನ್ನು ಕಂಡುಕೊಂಡಾಗ ಹಲವಾರು ರೋಗರುಜಿನಗಳು ಗುಣ ಮುಖವಾಗಲಿದ್ದು, ಕೆಲವೊಂದು ಎಲೆಯಲ್ಲಿ ಕೀಟನಾಶಕದ ಗುಣವು ಇದೆ. ಇಂದಿನ ಕಾರ್ಯಕ್ರಮದಲ್ಲಿ ಮಹಿಳೆಯರು ತಯಾರಿಸಿದ ಆಟಿ ತಿಂಗಳ ಅಗರಣೆಗಳೂ ಮುಂದಿನ ಜನಾಂಗಕ್ಕೆ ತಿಳುವಳಿಕೆ ನೀಡುವಂಥದ್ದಾಗಿದೆ. ಸ್ವಂತ ಯಜ್ಞಯಾಗಾದಿಗಳ ಮೂಲಕ ಸ್ವತಂತ್ರವಾಗಿ ದೇವರನ್ನು ಪೂಜಿಸಲು ಅನುವು ಮಾಡಿಕೊಟ್ಟಂತಹ ಶ್ರೀ ನಾರಾಯಣ ಗುರುಗಳ ತತ್ವವನ್ನು ಅಧರಣೀಯವಾಗಿ ಅನುಸರಿಸುತ್ತಿರುವ ಬಿಲ್ಲವರ ಅಸೋಸಿಯೇಶನ್‌ ಜಯ ಸಿ. ಸುವರ್ಣರ ಮುಂದಾಳತ್ವದಲ್ಲಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳು ಸಮಾಜದ ಜನರಿಗೆ ಹಾಗೂ ಇತರರಿಗೂ ನೀಡಿ ಸಹಕಾರಿ ಯಾಗಿದೆ. ಬೊರಿವಲಿ ಸಮಿತಿಯ ಈವೊಂದು ಕಾರ್ಯಕ್ರಮವು ಇತರರಿಗೆ ಮಾದರಿಯಾಗಿದೆ ಎಂದು ನುಡಿದರು.

ಅತಿಥಿಯಾಗಿ ಪಾಲ್ಗೊಂಡ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಕೋಟ್ಯಾನ್‌ ಇವರು ಮಾತನಾಡಿ, ಸಂಸಾರದ ಶಿಲ್ಪಿಗಳಾದ ನಾರಿಯರ ಮೇಲೆ ಪ್ರೀತಿ, ಗೌರವ, ಪೂಜ್ಯನೀಯ ಭಾವನೆ ಹೊಂದಿರಬೇಕು. ಅದಕ್ಕೆ ದೇವರ ಅನುಗ್ರಹ ಇದೆ. ಸಂಸ್ಕಾರ ಯುತ ಬದುಕನ್ನು ಮಕ್ಕಳಲ್ಲಿ ಅಳವಡಿಸುವ ಮೂಲಕ ಅವರ ಬದುಕನ್ನು ಸಾರ್ಥಕಗೊಳಿಸಬೇಕು. ಜಾತಿ ಯಾವುದಾದರೇನು, ಒಳ್ಳೆಯ ಮನುಷ್ಯನಾಗು ಎಂಬ ಶ್ರೀ ನಾರಾಯಣ ಗುರುಗಳ ತತ್ವದ ಚಿಂತನೆಯಲ್ಲಿ ಜರಗಿದ ಬೊರಿವಲಿ ಸ್ಥಳೀಯ ಸಮಿತಿಯ ಇಂದಿನ ಕಾರ್ಯಕ್ರಮ ಜಾತ್ಯಾತೀತದ ಸಮೀಕರಣವಾಗಿ ಮೂಡಿಬಂದಿದೆ ಎಂದು ನುಡಿದರು.

ಅಕ್ಷಯದ ಉಪ ಸಂಪಾದಕ ಹರೀಶ್‌ ಜಿ. ಪೂಜಾರಿ ಇವರು ಮಾತನಾಡಿ, ಆಟಿಡೊಂಜಿ ಕೂಟ ಕಾರ್ಯಕ್ರಮ ಮಕ್ಕಳ ಸಂಸ್ಕೃತಿಯ ಉಳಿವಿಗಾಗಿ ಒಂದು ಉತ್ತಮ ಕಾರ್ಯಕ್ರಮ. ಹಿಂದಿನ ಆಟಿ ತಿಂಗಳ ಕಷ್ಟಕಾರ್ಪಣ್ಯದ ಬದುಕು ಇಂದು ಕಾಣಸಿಗದಿದ್ದರು, ಅದರ ಹಿನ್ನೆಲೆ ತಿಳಿಯುವುದು ಅವಶ್ಯಕ. ರೋಗರುಜಿನಗಳಿಗೆ ಬೇಕಾದ ವಿವಿಧ ದೇಶಿಯ ಔಷಧಿಗಳು, ಆಟಿಕಳಂಜದಂತಹ ಮೂಲಕ ಮನೆಯಲ್ಲಿನ ದಾರಿದ್ರÂ ಓಡಿಸು ವಂತಹ ತಿಳುವಳಿಕೆ ಸಂಸ್ಕೃತಿ ಇಂತಹ ಕಾರ್ಯಕ್ರಮವನ್ನು ಶಿಮಂತೂರು ಚಂದ್ರಹಾಸ ಸುವರ್ಣರು ಯಶಸ್ವಿಯಾಗಿ ಆಯೋ ಜಿಸುತ್ತಿರುವುದು ಅಭಿನಂದನೀಯ ಎಂದರು.

ಲೇಖಕ, ನಾಟಕಕಾರ, ಕವಿ ಶಿಮಂತೂರು ಚಂದ್ರಹಾಸ ಸುವರ್ಣ ಅವರು ಪ್ರಾಸ್ತಾವಿಕವಾಗಿ ಮಾತನಾಟಿ, ಇಂದು ಬೊರಿವಲಿ ಸಮಿತಿಯ 11 ನೇ ವಾರ್ಷಿಕ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮವು ಆಚರಣೆಯಲ್ಲಿ ಸಾಹಿತಿ ಪಾಲ್ತಾಡಿ ರಾಮಕೃಷ್ಣರಿಂದ  ಆಳವಾಗಿ ಚರ್ಚೆಗೊಳಗಾಗಿ ಶಾಸ್ತೊÅàಕ್ತವಾಗಿ ನಡೆಯುತ್ತಾ ಬಂದಿದೆ. ಆಟಿತಿಂಗಳಲ್ಲಿ ದೊರೆಯುವ ಗೆಡ್ಡೆಗೆಣಸು, ತರಕಾರಿ, ಹಣ್ಣುಗಳನ್ನು ಇಂದು ಉಪಯೋಗಿಸಲಾಗಿದ್ದು, ಕಾರ್ಯಕ್ರಮವನ್ನು ಹೊರನಾಡ ಕನ್ನಡಿಗರಿಗೆ ಪರಿಚಯಿಸಿದ ಹೆಮ್ಮೆ ಬೊರಿವಲಿ ಸಮಿತಿಗೆ ಲಭಿಸುತ್ತದೆ. ಈ ಕಾರ್ಯಕ್ರಮವು ಜಾತಿ, ಮತ, ಬೇಧವಿಲ್ಲದೆ ಗುರುತತ್ವದ ಬಂಧುತ್ವದಲ್ಲಿ ಜರಗುತ್ತಿದೆ ಎಂದು ನುಡಿದರು.
ವಿವಿಧ ರೀತಿಯ ವೈಶಿಷ್ಟÂಪೂರ್ಣ ಭಕ್ಷÂಗಳನ್ನು ತಯಾರಿಸಿ ಪ್ರದರ್ಶಿಸಿದ ಮಹಿಳೆಯರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಕಾರ್ಯಾಧ್ಯಕ್ಷ ಎಂ.  ಸುಂದರ ಪೂಜಾರಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಸಮಿತಿಯಲ್ಲಿ ಜರಗುವ ಪ್ರತಿಯೊಂದು ಕಾರ್ಯಕ್ರಮಗಳಿಗೆ ಮುಂದೆಯೂ ಕೂಡಾ ಸದಸ್ಯರ ಪ್ರೋತ್ಸಾಹ, ಸಹಕಾರ ಸದಾಯಿರಲಿ ಎಂದು ನುಡಿದರು.

ಮಾಜಿ ಕಾರ್ಯಾಧ್ಯಕ್ಷ ಜಿ. ಎಂ. ಕೋಟ್ಯಾನ್‌ ಉಪಸ್ಥಿತರಿದ್ದರು. ಕೇಂದ್ರ ಕಚೇರಿಯ ಮಾಜಿ ಕಾರ್ಯ ದರ್ಶಿ ಧರ್ಮಪಾಲ ಜಿ. ಅಂಚನ್‌, ಪ್ರೇಮನಾಥ್‌ ಕೋಟ್ಯಾನ್‌ ಉಪ ಸ್ಥಿತರಿದ್ದರು. ವತ್ಸಲಾ ಪೂಜಾರಿ ಮತ್ತು ಬಳಗದವರು ಪ್ರಾರ್ಥನೆಗೈದರು. ಲಕ್ಷಿ¾à ದೇವಾಡಿಗ, ಮೋಹಿನಿ ಕೋಟ್ಯಾನ್‌, ವೇದಾ ಶೆಟ್ಟಿ ಪಾಡªನ, ಆಟಿಕಳಂಜ ಹಾಡನ್ನು ಹಾಡಿದರು. ಗೌರವ ಕಾರ್ಯದರ್ಶಿ ಮೋಹನ್‌ ಬಿ. ಅಮೀನ್‌ ಸ್ವಾಗತಿಸಿ, ವಂದಿಸಿದರು. ಉಪ ಕಾರ್ಯಾಧ್ಯಕ್ಷ ಕೃಷ್ಣರಾಜ್‌ ಸುವರ್ಣ ನಿರ್ವಹಿಸಿದರು.

ಗೌರವ ಕೋಶಾಧಿಕಾರಿ ಶ್ರೀಧರ ಬಂಗೇರ, ಜತೆ ಕಾರ್ಯದರ್ಶಿ ಅಶೋಕ್‌ ಸಾಲ್ಯಾನ್‌, ಜತೆ ಕೋಶಾಧಿಕಾರಿ ಸುರೇಶ್‌ ಸನಿಲ್‌, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ದಯಾನಂದ ಪೂಜಾರಿ, ಆರ್‌. ಎಸ್‌. ಪೂಜಾರಿ, ಪಿ. ಎ. ಪೂಜಾರಿ, ಭಾರತಿ ಅಮೀನ್‌, ರಾಘು ಅಮೀನ್‌, ರಾಘು ಪೂಜಾರಿ, ರತ್ನಾ ಪೂಜಾರಿ, ಚಂದ್ರಶೇಖರ ಬಿ. ಎಸ್‌., ಸ್ಥಳೀಯ ಸಂಘ ಸಂಸ್ಥೆಯ ಪದಾಧಿಕಾರಿಗಳು, ಆಮಂತ್ರಿತ ಸದಸ್ಯರು, ಯುವ ವಿಭಾಗದ ಸದಸ್ಯರು, ಮಹಿಲಾ ಸದಸ್ಯೆಯರು ಉಪಸ್ಥಿತರಿದ್ದರು. 

ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.