ಶಿಕ್ಷಣ ಇಲಾಖೆ ವಿವಿಧ ಹುದ್ದೆಗಳಿಗೆ ಕೌನ್ಸೆಲಿಂಗ್
Team Udayavani, Jul 25, 2018, 4:37 PM IST
ಧಾರವಾಡ: ಇಲ್ಲಿಯ ಡಯಟ್ ಆವರಣದ ಡೆಪ್ಯುಟಿ ಚನ್ನಬಸಪ್ಪ ಸಮಾವೇಶ ಭವನದಲ್ಲಿ ಮಂಗಳವಾರ ಜರುಗಿದ ಶಿಕ್ಷಣ ಇಲಾಖೆಯ ಆನ್ಲೈನ್ ಕೌನ್ಸೆಲಿಂಗ್ನಲ್ಲಿ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಆದೇಶ ಪತ್ರ ನೀಡಿ ಸ್ಥಳ ನಿಯುಕ್ತಿಗೊಳಿಸಲಾಯಿತು. ಇಲಾಖೆ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮೊದಲ 3 ರ್ಯಾಂಕ್ ಗಳಿಸಿದ ಕಾಡಪ್ಪ ಕೋಳೂರು, ಬಿ.ಬಿ. ದುಬ್ಬನಮರಡಿ ಹಾಗೂ ಪೂರ್ಣಿಮಾ ಮುಕ್ಕುಂದಿ ಅವರು ಆಯ್ಕೆ ಮಾಡಿಕೊಂಡಂತೆ ಧಾರವಾಡ ಡಿಡಿಪಿಐ ಕಚೇರಿಯ ವಿಷಯ ಪರಿವೀಕ್ಷಕರ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಆದೇಶಗಳನ್ನು ಅಪರ ಆಯುಕ್ತರು ನೀಡಿದರು.
31 ವಿಷಯ ಪರಿವೀಕ್ಷಕರು, 9 ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿಗಳು, 12 ಸಮಗ್ರ ಶಿಕ್ಷಣ ಅಭಿಯಾನದ ಸಹಾಯಕ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ 67 ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರ ಹುದ್ದೆಗಳು ಸೇರಿದಂತೆ ವಾಯವ್ಯ ಕರ್ನಾಟಕ ವಲಯದ 9 ಜಿಲ್ಲೆಗಳ ವ್ಯಾಪ್ತಿಯ ಒಟ್ಟು 119 ಅಧಿಕಾರಿಗಳ ಹುದ್ದೆಗಳಿಗೆ ಕೌನ್ಸೆಲಿಂಗ್ ನಡೆಸಿ ಆದೇಶಗಳನ್ನು ನೀಡಲಾಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕ ಶೈಕ್ಷಣಿಕ ವಲಯದ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಆದೇಶ ಪತ್ರ ನೀಡಿ ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ ಗುಣಾತ್ಮಕ ಶಿಕ್ಷಣಕ್ಕಾಗಿ ಹೊಸ ಚಿಂತನೆಯ ಅನೇಕ ಯೋಜನೆ-ಯೋಚನೆಗಳನ್ನು ಅಳವಡಿಸಲಾಗಿದ್ದು, ಇದಕ್ಕೆ ಪೂರಕವಾಗಿ ಶಿಕ್ಷಣಾಧಿಕಾರಿಗಳು ಕ್ರಿಯಾಶೀಲ ಕರ್ತವ್ಯ ದೊಂದಿಗೆ ಬದಲಾವಣೆಗೆ ತೆರೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ವಾಯವ್ಯ ಕರ್ನಾಟಕ ವಲಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ನಿರ್ದೇಶಕ ಎನ್.ಎಸ್. ಕುಮಾರ, ಸಿಸ್ಲೆಪ್- ಕರ್ನಾಟಕ ಸಂಸ್ಥೆಯ ನಿರ್ದೇಶಕ ಬಿ.ಎಸ್. ರಘುವೀರ, ಜಂಟಿ ನಿರ್ದೇಶಕ ಡಾ| ಬಿ.ಕೆ.ಎಸ್.ವರ್ಧನ್, ಉಪನಿರ್ದೇಶಕ ಮೃತ್ಯುಂಜಯ ಕುಂದಗೋಳ, ಹಿರಿಯ ಸಹಾಯಕ ನಿರ್ದೇಶಕ ಅರ್ಜುನ ಕಂಬೋಗಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ