ಮಳೆ ಕೊರತೆ ಗಾಯಕ್ಕೆ ಕೀಟ-ರೋಗ ಬಾಧೆ ಬರೆ!


Team Udayavani, Jul 25, 2018, 5:18 PM IST

25-july-21.jpg

ಹುಬ್ಬಳ್ಳಿ: ಮುಂಗಾರು ಪೂರ್ವ ಮಳೆಯಿಂದ ಉತ್ತೇಜಿತಗೊಂಡಿದ್ದ ರೈತ ಸಮುದಾಯ ಉತ್ತಮ ಮುಂಗಾರು ಹಂಗಾಮು ನಿರೀಕ್ಷೆಯೊಂದಿಗೆ ಕೃಷಿ ಕಾಯಕಕ್ಕೆ ಮುಂದಾಗಿದ್ದರು. ಆದರೆ ಜೂನ್‌ ಮತ್ತು ಜುಲೈನಲ್ಲಿ ನಿರೀಕ್ಷೆಗಿಂತ ಕಡಿಮೆ ಮಳೆ ಬಿದ್ದು, ನಿರೀಕ್ಷೆಗೂ ಮೀರಿ ಬಿತ್ತನೆಯಾದ ಬೆಳೆಗಳು ಇದೀಗ ಸಂಕಷ್ಟ ಎದುರಿಸುವಂತಾಗಿದೆ. ಮಳೆ ಕೊರತೆ ಒಂದು ಕಡೆಯಾದರೆ, ಮೋಡ ಕವಿದ ವಾತಾವರಣದಿಂದ ಅಷ್ಟು ಇಷ್ಟು ಬೆಳೆದು ನಿಂತ ಇಲ್ಲವೆ ಬೆಳೆಯುವ ಹಂತದಲ್ಲಿರುವ ಬೆಳೆಗಳಿಗೆ ಕೀಟಬಾಧೆ ಹೆಚ್ಚಿರುವುದು ರೈತರನ್ನು ಚಿಂತೆಗೀಡು ಮಾಡಿದೆ.

ಮೇನಲ್ಲಿ ಹುಬ್ಬಳ್ಳಿ ತಾಲೂಕಿನಲ್ಲಿ 87.8 ಮಿಮೀ ಮಳೆಯಾಗಬೇಕಿತ್ತು. ಆದರೆ 187.4 ಮಿಮೀ ಮಳೆಯಾಗಿತ್ತು. ಹುಬ್ಬಳ್ಳಿ ಹೋಬಳಿಯಲ್ಲಿ 89.7 ಮಿಮೀ ಬದಲು 196.9, ಛಬ್ಬಿ ಹೋಬಳಿಯಲ್ಲಿ 88.4 ಮಿಮೀ ಬದಲಾಗಿ 178.8 ಮಿಮೀ, ಶಿರಗುಪ್ಪಿ ಹೋಬಳಿಯಲ್ಲಿ 87.2 ಮಿಮೀ ಬದಲಾಗಿ 187.1 ಮಿಮೀ ಮಳೆಯಾಗಿತ್ತು.

ಮುಂಗಾರು ಪೂರ್ವ ಮಳೆ ಉತ್ತಮವಾಗಿ ಬಿದ್ದಿದ್ದರಿಂದ ಉತ್ತಮ ಮುಂಗಾರು ಹಂಗಾಮು ನಿರೀಕ್ಷೆಯೊಂದಿಗೆ ರೈತರು ನಿರೀಕ್ಷೆಗಿಂತ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದರು. ಆದರೆ, ಮುಂಗಾರು ಆರಂಭದ ನಂತರ ಮಳೆ ಪ್ರಮಾಣ ಕುಗ್ಗಿತು. ಜುಲೈ 24ರ ವರೆಗೆ ವಾಡಿಕೆ ಮಳೆಗೆ ಹೋಲಿಸಿದರೆ ತಾಲೂಕಿನಲ್ಲಿ ಮಳೆ ಪ್ರಮಾಣ ಕೊರತೆಯಾಗಿರುವುದು ಕಂಡುಬಂದಿದೆ. ಹುಬ್ಬಳ್ಳಿ ತಾಲೂಕಿನಲ್ಲಿ ವಾಡಿಕೆಗಿಂತ ಸರಾಸರಿ ಶೇ. 1 ಕಡಿಮೆ ಮಳೆಯಾಗಿದೆ. ಶಿರಗುಪ್ಪಿ ಹೋಬಳಿಯಲ್ಲಿ ಶೇ.16 ಮಳೆ ಕೊರತೆ ಉಂಟಾಗಿದೆ. ಹುಬ್ಬಳ್ಳಿ ಹೋಬಳಿಯಲ್ಲಿ ಶೇ.3 ಹಾಗೂ ಛಬ್ಬಿ ಹೋಬಳಿಯಲ್ಲಿ ಶೇ.19 ಹೆಚ್ಚು ಮಳೆಯಾಗಿದೆ.

ಕೀಟ ಬಾಧೆ: ತಾಲೂಕಿನ ನಗರ ಪ್ರದೇಶದಲ್ಲಿ ಅಲ್ಪ ಮಳೆಯಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಮೋಡ ಕವಿದ ವಾತಾವರಣ ಇರುವುದರಿಂದ ಅಲ್ಲಲ್ಲಿ ಕೀಟಬಾಧೆ ಕಂಡು ಬಂದಿದೆ. ಅತೀ ಹೆಚ್ಚು ಬಿತ್ತನೆಯಾಗಿರುವ ಹೆಸರು ಬೆಳೆಗೆ ಬೂದಿ ರೋಗ ಹರಡುತ್ತಿದ್ದರೆ, ಶೇಂಗಾ ಬೆಳೆಗೆ ರಸ ಹೀರುವ ಕೀಟದ ಬಾಧೆ ಆರಂಭವಾಗಿದೆ.

ಕೀಟ-ರೋಗ ನಿಯಂತ್ರಣಕ್ಕೆ ಬೇಕಾದ ಕ್ರಮಗಳ ಕುರಿತಾಗಿ ಕೃಷಿ ಇಲಾಖೆ ಅಗತ್ಯ ಮಾಹಿತಿ ನೀಡುತ್ತಿದೆ. ತಾಲೂಕಿನ 50580 ಹೆಕ್ಟೇರ್‌ ಸಾಗುವಳಿ ಪ್ರದೇಶದಲ್ಲಿ ಈ ಬಾರಿ ಸುಮಾರು 32,636 ಹೆಕ್ಟೇರ್‌ ಪ್ರದೇಶದಲ್ಲಿ ಮುಂಗಾರು ಹಂಗಾಮು ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ ನಿರೀಕ್ಷಿತ ಗುರಿ ಮೀರಿ ಸುಮಾರು 37,247 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ಬಿತ್ತನೆ ಪ್ರಮಾಣ: ಸುಮಾರು 11,166 ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು ಬಿತ್ತನೆ ಮಾಡಲಾಗಿದ್ದು, 9250 ಹೆಕ್ಟೇರ್‌ ಪ್ರದೇಶದಲ್ಲಿ ಸೋಯಾಬೀನ್‌, 4350 ಹೆಕ್ಟೇರ್‌ ಪ್ರದೇಶದಲ್ಲಿ ಬಿ.ಟಿ. ಹತ್ತಿ, 4134 ಹೆಕ್ಟೇರ್‌ ಪ್ರದೇಶದಲ್ಲಿ ಗೋವಿನ ಜೋಳ, 784 ಹೆಕ್ಟೇರ್‌ನಲ್ಲಿ ಉದ್ದು, 321 ಹೆಕ್ಟೇರ್‌ನಲ್ಲಿ ತೊಗರಿ, 116 ಹೆಕ್ಟೇರ್‌ ಪ್ರದೇಶದಲ್ಲಿ ಕಬ್ಬು, 97 ಹೆಕ್ಟೇರ್‌ನಲ್ಲಿ ಸಿರಿಧಾನ್ಯ, 95 ಹೆಕ್ಟೇರ್‌ನಲ್ಲಿ ಭತ್ತ, 85 ಹೆಕ್ಟೇರ್‌ನಲ್ಲಿ ಜೋಳ, 51 ಹೆಕ್ಟೇರ್‌ ಪ್ರದೇಶದಲ್ಲಿ ಗುರೆಳ್ಳು, 44 ಹೆಕ್ಟೇರ್‌ ಪ್ರದೇಶದಲ್ಲಿ ಎಳ್ಳು ಬಿತ್ತನೆ ಮಾಡಲಾಗಿದೆ.

ಇಲಾಖೆಯಿಂದ ಬೀಜ ವಿತರಣೆ: ಕೃಷಿ ಇಲಾಖೆಯಿಂದ ಈಗಾಗಲೇ ಬಿತ್ತನೆ ಬೀಜ ವಿತರಣೆ ಮಾಡಲಾಗಿದ್ದು, 5340 ಕ್ವಿಂಟಲ್‌ ಸೋಯಾಬೀನ್‌, 713 ಕ್ವಿಂಟಲ್‌ ಶೇಂಗಾ, 328 ಕ್ವಿಂಟಲ್‌ ಹೆಸರು, 228 ಕ್ವಿಂಟಲ್‌ ಮುಸುಕಿನ ಜೋಳ, 101 ಕ್ವಿಂಟಲ್‌ ಉದ್ದು, 14 ಕ್ವಿಂಟಲ್‌ ತೊಗರಿ ಬೀಜಗಳನ್ನು ವಿತರಣೆ ಮಾಡಲಾಗಿದೆ.

ನಿರೀಕ್ಷಿತ ಮಳೆ ಇಲ್ಲದೆ ಬಿತ್ತನೆ ಮಾಡಿದ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಪರದಾಡುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಸತತ ಬರದಿಂದ ಕಂಗೆಟ್ಟಿರುವ ಕೃಷಿಕರು ಈ ಬಾರಿಯ ಮುಂಗಾರಿನಲ್ಲಿ ಉತ್ತಮ ಫ‌ಸಲಿನ ನಿರೀಕ್ಷೆ ಹೊಂದಿದ್ದರು. ಆದರೆ ಎರಡು ತಿಂಗಳ ಮಳೆ ಕೊರತೆ ಮತ್ತೂಮ್ಮೆ ಬರದ ಛಾಯೆಯ ಆತಂಕ ಸೃಷ್ಟಿಸಿದೆ. ವಾರದೊಳಗೆ ಮಳೆ ಬೀಳದಿದ್ದರೆ ಬೆಳೆ ಹಾನಿಗೀಡಾಗಲಿದೆ ಎಂಬ ಅಳಲು ರೈತರದ್ದಾಗಿದೆ.

ಮೋಡ ಕವಿದ ವಾತಾವರಣವಿದ್ದು, ಇದರಿಂದ ಕೆಲವೊಂದು ಪ್ರದೇಶಗಳಲ್ಲಿ ಬೆಳೆಗೆ ಕೀಟಬಾಧೆ ಕಂಡು ಬರುತ್ತಿದೆ. ಹೆಸರು ಬೆಳೆಗೆ ಬೂದಿ ರೋಗ, ಶೇಂಗಾದಲ್ಲಿ ರಸ ಹೀರುವ ಕೀಟದ ರೋಗ ಕಂಡು ಬರುತ್ತಿದ್ದು ರೈತರು ಅಗತ್ಯ ಕ್ರಮಕ್ಕೆ ಮುಂದಾಗಬೇಕು. ಇದಕ್ಕೆ ಬೇಕಾದ ಕ್ರಿಮಿನಾಶಕ ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನು ಇದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು.
ರಾಜಶೇಖರ ಅನಗೌಡರ,
ಸಹಾಯಕ ಕೃಷಿ ನಿರ್ದೇಶಕ

ಬಸವರಾಜ ಹೂಗಾರ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.