ಜಯದೇವದಲ್ಲಿ ಕಾರ್ಡಿಯಾಕ್‌ ಎಂಆರ್‌ಐ ವಿಭಾಗ


Team Udayavani, Jul 26, 2018, 12:09 PM IST

jayadeva.jpg

ಬೆಂಗಳೂರು: ಬಡ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಕಾರ್ಡಿಯಾಕ್‌ ಎಂಆರ್‌ಐ ವಿಭಾಗ ತೆರೆಯಲಾಗಿದೆ.

ಬುಧವಾರ ಈ ಸೇವೆಗೆ ಚಾಲನೆ ದೊರೆತ್ತಿದ್ದು, ಇನ್ನೂ ಮುಂದೆ ಹೃದ್ರೋಗ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಳ್ಳಲು ಜಯದೇವ ಆಸ್ಪತ್ರೆಗೆ ಆಗಮಿಸಿದವರು ಬೇರೆ ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನಿಂಗ್‌ಗೆ ತೆರಳುವ ಅಗತ್ಯವಿರುವುದಿಲ್ಲ.

ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ತೆರೆಯಲಾಗಿರುವ ಕಾರ್ಡಿಯಾಕ್‌ ಎಂಆರ್‌ಐ ವಿಭಾಗದ ನಿರ್ವಹಣೆ ಹಾಗೂ ಅದರ ಜವಾಬ್ದಾರಿಯನ್ನು ಮ್ಯಾಕ್ಸ್‌ಕೇರ್‌ ಸಂಸ್ಥೆ ಹೊತ್ತಿದೆ. ಇದಕ್ಕೆ ಆಸ್ಪತ್ರೆ ಯಾವುದೇ ಬಂಡವಾಳ ಹೂಡಿಲ್ಲ.

ಎಂಆರ್‌ಐ ವಿಭಾಗದಲ್ಲಿ ಒಟ್ಟು ಎರಡರಿಂದ ಎರಡೂವರೆ ಸಾವಿರ ರೂ.ಗಳಲ್ಲಿ ಮೆದುಳು ಹಾಗೂ ಹೃದಯ ಸ್ಕ್ಯಾನಿಂಗ್‌ ಮಾಡಿಸಿಕೊಳ್ಳಬಹುದು. ಈ ಹಣವನ್ನು ನೀಡಲು ಕಷ್ಟವಾಗುವ ಬಡ ರೋಗಿಗಳಿಗೆ ವೈಯಬಿಲಿಟಿ ಗ್ಯಾಪ್‌ ಫ‌ಂಡಿಂಗ್‌ ಮೂಲಕ ಸ್ಕ್ಯಾನಿಂಗ್‌ ಉಚಿತ ಸೇವೆ ನೀಡಲಾಗುವುದು.

ಖಾಸಗಿ ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗೆ 8 ರಿಂದ 10 ಸಾವಿರ ರೂ.ಗಳ ವರೆಗೆ ಶುಲ್ಕ ವಿಧಿಸಲಾಗುತ್ತದೆ. ಈ ಎಂಆರ್‌ಐ ವಿಭಾಗ ಕೇವಲ ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಮಾತ್ರ ಸೀಮಿತವಲ್ಲ. ಇತರೆ ಆಸ್ಪತ್ರೆಗಳಲ್ಲಿರುವ ರೋಗಿಗಳು ಕೂಡ ಈ ಎಂಆರ್‌ಐ ಸ್ಕ್ಯಾನಿಂಗ್‌ ಸೇವೆ ಪಡೆದುಕೊಳ್ಳಬಹುದಾಗಿದೆ.

ಮೆದುಳು ಹಾಗೂ ಹೃದಯ ಮಾತ್ರವಲ್ಲದೆ ಇತರೆ ಅಂಗಗಳ ಸ್ಕ್ಯಾನಿಂಗ್‌ ಕೂಡ ಈ ಯಂತ್ರ ಮಾಡಲಿದೆ. ಹೃದಯ ಶಸ್ತ್ರಚಿಕಿತ್ಸೆಯಾದ ನಂತರ ಅವರಿಗೆ ಸೂಕ್ತ ರೀತಿಯಲ್ಲಿ ಮುಂದಿನ ಚಿಕಿತ್ಸೆಗಳ ಬಗ್ಗೆ ವಿವರಿಸಲು ಜಯದೇವ ಆಸ್ಪತ್ರೆ ಪಕ್ಕದಲ್ಲಿ ಹೃದ್ರೋಗಗಳ ಪುನವರ್ಸತಿ ಕೇಂದ್ರ ಶೀಘ್ರದಲ್ಲೇ ತೆರೆಯಲಾಗುವುದು.

ಹೃದ್ರೋಗಗಳ ಪುನವರ್ಸತಿ ಕೇಂದ್ರದಲ್ಲಿ ಶಸ್ತ್ರಚಿಕಿತ್ಸೆ ನಂತರ ರೋಗಿಗಳು ಯಾವ ಔಷಧಿಗಳನ್ನು ತೆಗೆದುಕೊಳ್ಳಬೇಕು. ಆಹಾರ ಪದ್ಧತಿ ಹಾಗೂ ಜೀವನಶೈಲಿ ಹೇಗಿರಬೇಕು ಎಂದು ತಿಳಿಸಲಾಗುವುದು.

ವಾಯು ಮಾಲಿನ್ಯದಿಂದ ಹೃದ್ರೋಗ?: ಹೃದ್ರೋಗ ಹಾಗೂ ಶ್ವಾಸಕೋಶ ಸಂಬಂಧಿ ಕಾಯಿಲೆ ಹೆಚ್ಚಾಗಲು ವಾಯು ಮಾಲಿನ್ಯ ಕೂಡ ಒಂದು ಕಾರಣವಾಗಿದೆ. ಹೀಗಾಗಿ ಹೃದ್ರೋಗ ಸಮಸ್ಯೆಗೆ ವಾಯು ಮಾಲಿನ್ಯ ಯಾವ ರೀತಿ ಕಾರಣವಾಗಿದೆ.

ಹೇಗೆ ವಾಯು ಮಾಲಿನ್ಯ ಹೃದಯದ ಮೇಲೆ ಪರಿಣಾಮ ಬಿರುತ್ತಿದೆ ಎಂದು ಅಧ್ಯಯನ ನಡೆಸಲು ಕಳೆದ ತಿಂಗಳು 500 ಜನ ಸಂಚಾರ (ಟ್ರ್ಯಾಫಿಕ್‌) ಪೋಲಿಸರಿಗೆ ಶ್ವಾಸಕೋಶ, ಹೃದಯ ಹಾಗೂ ಮಧುಮೇಹದ ತಪಾಸಣೆ ಮಾಡಲಾಗಿದೆ. ಇದನ್ನು ಅಧ್ಯಯನಕ್ಕೆ ಕಳುಹಿಸಲಾಗಿದೆ.

ಅಲ್ಲದೆ ಮುಂದಿನ ತಿಂಗಳು 500 ಜನ ಅಟೋರಿಕ್ಷಾ ಚಾಲಕರಿಗೂ ಇದೇ ತಪಾಸಣೆ ನಡೆಸಿ ಅಧ್ಯಯನಕ್ಕೆ ಕಳುಹಿಸಲಾಗುವುದು. ಅಧ್ಯಯನದ ವರದಿ ಬಂದ ನಂತರ ಬೆಂಗಳೂರಿನಲ್ಲಿ ಯಾವ ರೀತಿ ವಾಯು ಮಾಲಿನ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ತಿಳಿಸಲಾಗುವುದು ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ತಿಳಿಸಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.