ಚಂದ್ರಗ್ರಹಣ ವೀಕ್ಷಣೆಗೆ ತೆರೆದುಕೊಳ್ಳಲಿದೆ ತಾರಾಲಯ


Team Udayavani, Jul 26, 2018, 12:12 PM IST

chandragrahana.jpg

ಬೆಂಗಳೂರು: ಭೂಮಿ ಹಾಗೂ ಚಂದ್ರ ಗ್ರಹಗಳ ನಡುವಿನ ನೆರಳಿನಾಟದಿಂದಾಗಿ ಪ್ರಸಕ್ತ ವರ್ಷ ಎರಡನೇ ಬಾರಿ, ಜು.27, 28ರಂದು ಚಂದ್ರಗ್ರಹಣ ಸಂಭವಿಸಲಿದ್ದು, ಗ್ರಹಣ ವೀಕ್ಷಣೆಗೆ ನಗರದ ಜವಾಹರ್‌ ಲಾಲ್‌ ನೆಹರು ತಾರಾಲಯದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.  

ಚಂದ್ರಗ್ರಹಣ ವೀಕ್ಷಿಸಲು ನೆಹರು ತಾರಾಲಯಕ್ಕೆ ಭೇಟಿ ನೀಡುವ ಸಾರ್ವಜನಿಕರಿಗಾಗಿ ತಾರಾಲಯದ ಆವರಣದಲ್ಲಿ ದೂರದರ್ಶಕ ಹಾಗೂ ದುರ್ಬೀನು ಅಳವಡಿಸಲು ಸಿದ್ಧತೆ ನಡೆಸಲಾಗಿದೆ. ಆದರೆ, ಪೂರಕ ವಾತಾವರಣವಿದ್ದರೆ ಮಾತ್ರ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುವುದು. ಇಲ್ಲದಿದ್ದರೆ ಪ್ರೊಜೆಕ್ಟರ್‌ ಮೂಲಕ ನೇರ ಪ್ರಸಾರ ಮಾಡಲಾಗುವುದು ಎಂದು ತಾರಾಲಯದ ಅಧಿಕಾರಿಗಳು ತಿಳಿಸಿದ್ದಾರೆ. 

ಮಂಗಳನಿಗೆ ಮತ್ತಷ್ಟು ಪ್ರಕಾಶ: ಜು.27ರಂದು ಭೂಮಿ ಹಾಗೂ ಮಂಗಳ ಗ್ರಹಗಳು ತಮ್ಮ ಕಕ್ಷೆಗಳಲ್ಲಿ ಸುತ್ತುವ ಸಂದರ್ಭದಲ್ಲಿ ಒಂದು ಕಡೆ ಹತ್ತಿರವಾಗಲಿವೆ. ಪರಿಣಾಮ ಸದಾ ತನ್ನ ಕೆಂಪು ಬಣ್ಣದಿಂದ ಪ್ರಕಾಶಿಸುವ ಮಂಗಳ ಗ್ರಹವು ಮತ್ತಷ್ಟು ಪ್ರಕಾಶಮಾನವಾಗಿ ಹೊಳೆಯಲಿರುವುದು ವಿಶೇಷ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ವಿವಿಧೆಡೆ ವಿಜ್ಞಾನ ಸಂಬಂಧಿತ ಸಂಘ, ಸಂಸ್ಥೆಗಳು, ವಿಜ್ಞಾನ ಕೂಟಗಳು “ಲೈವ್‌ ಟೆಲಿಕಾಸ್ಟ್‌’ ವೀಕ್ಷಣೆಗೆ ಸಜ್ಜಾಗಿದ್ದಾರೆ.

ಪ್ರತ್ಯೇಕ ಕಕ್ಷೆಗಳಲ್ಲಿ ಸುತ್ತುವ ಸೂರ್ಯ, ಭೂಮಿ ಹಾಗೂ ಚಂದ್ರ ಕಕ್ಷೆಯ ಒಂದೇ ಭಾಗದಲ್ಲಿ ಎದುರಾದಾಗ ಭೂಮಿಯ ನೆರಳು ಚಂದ್ರನ ಮೇಲೆ ಬಿದ್ದು ಚಂದ್ರಗ್ರಹಣ ಉಂಟಾಗುತ್ತದೆ. ಸಾಮಾನ್ಯವಾಗಿ ಹುಣ್ಣಿಮೆಯ ದಿನದಂದು ಚಂದ್ರಗ್ರಹಣ ಸಂಭವಿಸುವುದರಿಂದ ಪೂರ್ಣಚಂದ್ರ ಗ್ರಹಣವಾಗುತ್ತದೆ. ಈ ವೇಳೆ ಚಂದ್ರ ಸಂಪೂರ್ಣ ಕೆಂಪಾಗಲಿದ್ದಾನೆ. 

ಒಂದೇ ವರ್ಷದಲ್ಲಿ ಎರಡನೇ ಬಾರಿ ಸಂಭವಿಸುತ್ತಿರುವ ಚಂದ್ರಗ್ರಹಣ ಇದಾಗಿದ್ದು, ಈ ಮೊದಲು ಜ.31ರಂದು ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿ ಗ್ರಹಣ ದೃಶ್ಯ ಕಾಣಿಸಿಕೊಂಡಿತ್ತು. ಆದರೆ, ಜು.27ರಂದು ಸಂಭವಿಸಲಿರುವ ಗ್ರಹಣವು ಬರೊಬ್ಬರಿ 103 ನಿಮಿಷ ಇರಲಿದ್ದು, ಈ ಸಂದರ್ಭದಲ್ಲಿ ಚಂದ್ರ ಸಂಪೂರ್ಣ ಕೆಂಪುವಾಗುವುದನ್ನು ನೋಡಲು ಮನಮೋಹಕವಾಗಿರುತ್ತದೆ ಎಂಬುದು ವಿಜ್ಞಾನಿಗಳ ಮಾತು.

ಜು.27ರ ರಾತ್ರಿ 11.54ಕ್ಕೆ ಚಂದ್ರಗ್ರಹಣ ಆರಂಭವಾಗಲಿದ್ದು, ಮಧ್ಯರಾತ್ರಿ 1 ಗಂಟೆ ಹೊತ್ತಿಗೆ ಸಂಪೂರ್ಣ ಗ್ರಹಣದ ಹಂತ ತಲುಪಲಿದೆ. 1 ಗಂಟೆಯಿಂದ ನಸುಕಿನ 2.43ರವರೆಗೆ ಚಂದ್ರ ಸಂಪೂರ್ಣವಾಗಿ ರಕ್ತದ ಬಣ್ಣದಲ್ಲಿ ಗೋಚರಿಸಲಿದ್ದು, ಜು.28ರ ನಸುಕಿನ 3.49 ಗಂಟೆಗೆ ಗ್ರಹಣ ಬಿಡಲಿದೆ ಎಂದು ಜವಾಹರ್‌ಲಾಲ್‌ ನೆಹರು ತಾರಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಎರಡು ವರ್ಷ ಕಾಯಬೇಕು: ಸಾಮಾನ್ಯವಾಗಿ ಸೂರ್ಯ ಹಾಗೂ ಚಂದ್ರ ಗ್ರಹಣಗಳು ಪ್ರತಿ ವರ್ಷ ಸಂಭವಿಸುತ್ತಿರುತ್ತವೆ. ಆದರೆ, ಒಂದೊಂದು ದೇಶದಲ್ಲಿ ಅದು ಕಾಣಸಿಗುವುದಿಲ್ಲ. ಭಾರತದಲ್ಲಿ ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಚಂದ್ರಗ್ರಹಣ ಸಂಭವಿಸುತ್ತಿದೆ. ಆದರೆ, ಇದರ ನಂತರದಲ್ಲಿ ಮತ್ತೆ ಎರಡು ವರ್ಷ ಭಾರತದಲ್ಲಿ ಚಂದ್ರಗ್ರಹಣ ಕಾಣಸಿಗುವುದಿಲ್ಲ ಎಂಬುದು ವಿಜ್ಞಾನಿಗಳ ಅಭಿಪ್ರಾಯ.

ಸೂರ್ಯಗ್ರಹಣವನ್ನು ಬರಿಗಣ್ಣಿನಿಂದ ವೀಕ್ಷಿಸಿದರೆ ಕಣ್ಣಿಗೆ ಹಾನಿಯಾಗುತ್ತದೆ. ಆದರೆ, ಜು.27ರ ಗ್ರಹಣವನ್ನು ಬರಿಗಣ್ಣಿನಿಂದಲೇ ನೋಡಬಹುದು. ಚಂದ್ರಗ್ರಹಣದ ದಿನ ಕೆಂಪು ಬಣ್ಣದ ಚಂದ್ರ ಹಾಗೂ ಅದರ ಕೆಳಗೆ ಕೆಂಪು ಬಣ್ಣದ ಮಂಗಳ ಗ್ರಹ ಪ್ರಕಾಶಮಾನವಾಗಿ ಬೆಳಗಲಿರುವುದು ಈ ಬಾರಿಯ ವಿಶೇಷ.
-ಪ್ರಮೋದ್‌ ಜಿ. ಗಲಗಲಿ, ನಿರ್ದೇಶಕ, ನೆಹರು ತಾರಾಲಯ

* ವೆಂ.ಸುನೀಲ್‌ ಕುಮಾರ್‌

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.