ಪರ್ಫ್ಯೂಮ್‌ ಫ್ರೀ


Team Udayavani, Jul 27, 2018, 6:00 AM IST

16.jpg

ಅನೇಕರಿಗೆ ಸುಗಂಧದ್ರವ್ಯವೇ ಬ್ಯೂಟಿಯ ಬಂಡವಾಳ. ಪರ್ಫ್ಯೂಮ್‌ ಪೂಸಿಕೊಳ್ಳದೇ, ಹೊರಗೆ ಕಾಲೇ ಇಡುವುದಿಲ್ಲ. ಹೋದಲ್ಲಿ, ಬಂದಲ್ಲಿ ನಮ್ಮದೇ ಹವಾ ಎನ್ನುವಂತೆ, ತಮ್ಮ ಓಡಾಟಕ್ಕೊಂದು ಸಿಗ್ನೇಚರ್‌ ರೀತಿ ಪರ್ಫ್ಯೂಮ್‌ ಅನ್ನು ಬಳಸುವ “ಬಳ್ಳಿ’ಗಳೇ ಎಲ್ಲೆಡೆ ಕಾಣಸಿಗುತ್ತಾರೆ. ಒಮ್ಮೆ ಸುಳಿದಾಡಿದರೆ ಸಾಕು; ಪಕ್ಕದಲ್ಲಿದ್ದವರ ತಲೆ “ಗಿರ್ರೆ’ನ್ನುವಂತೆ ಮಾಡುವ ಈ ಸುಗಂಧದ್ರವ್ಯಗಳ ಮೋಹಕ ಪರಿಮಳವೂ ಅನೇಕ ಸಲ ಕಿರಿಕಿರಿ ಸೃಷ್ಟಿಸುವುದಿದೆ. ಆ ಪರ್ಫ್ಯೂಮ್‌, ತಮ್ಮ ಚರ್ಮಕ್ಕೆ ಎಷ್ಟೆಲ್ಲ ಹಾನಿ ಮಾಡುತ್ತಿದೆ ಎನ್ನುವ ಸಂಗತಿಯನ್ನೂ ಮರೆತು, ಅವರು ಮಿಂಚುತ್ತಿರುತ್ತಾರೆ. ಅಷ್ಟಕ್ಕೂ, ಲಲನೆಯರಿಗೆ ಘಮ್ಮೆನ್ನಲು ಪರ್ಫ್ಯೂಮೇ ಬೇಕಂತಲೂ ಇಲ್ಲ. “ಪರ್ಫ್ಯೂಮ್‌ ಫ್ರೀ’ ಎನ್ನುವ ಪರಿಕಲ್ಪನೆಯಲ್ಲೂ ಮಿಂಚಬಹುದು ಎಂಬುದು ನಿಮಗೆ ಗೊತ್ತೇ? ಪಪ್ಯೂìಮ್‌ ಪೂಸಿಕೊಂಡರೆ ಹೆಚ್ಚೆಂದರೆ, ನಾಲ್ಕೈದು ತಾಸು ಮಾತ್ರ ಅದರ ಪರಿಮಳವಷ್ಟೇ. ಆದರೆ, ಅದನ್ನು ಪೂಸಿಕೊಳ್ಳದೆಯೂ ದಿನಪೂರ್ತಿ ಪರಿಮಳಯುಕ್ತವಾಗಿರಬಹುದು. ಅದು ಹೇಗೆ ಗೊತ್ತೇ?

ಸೋಪ್‌ ಮತ್ತು ಗುಲಾಬಿ ದಳ
ಸ್ನಾನಕ್ಕೆ 30 ನಿಮಿಷ ಮೊದಲು ನೀರಿನಲ್ಲಿ ಗುಲಾಬಿ ದಳಗಳನ್ನು ನೆನೆಹಾಕಿ, ನಂತರ ಆ ನೀರಿನಿಂದ ಸ್ನಾನ ಮಾಡಿ. ಮಾಮೂಲಿ ಮೈಸೋಪ್‌ಗಿಂತ, ಗಾಢ ಪರಿಮಳಯುಕ್ತ ಸೋಪ್‌ ಅನ್ನು ಬಳಸಿ. ಇವೆರಡರ ಕಾಂಬಿನೇಷನ್‌ ನಿಮ್ಮ  ದೇಹವನ್ನು ಹೆಚ್ಚು ಹೊತ್ತು ಸುಗಂಧದಲ್ಲಿ ಮೀಯುವಂತೆ ಮಾಡುತ್ತದೆ.

ಲೋಶನ್‌ ಅಥವಾ ಮಾಯಿಶ್ಚರೈಸರ್‌
ಲೋಶನ್‌ ಇಲ್ಲವೇ ಮಾಯಿಶ್ಚರೈಸರ್‌ ಕೂಡ ಸುಗಂಧದ್ರವ್ಯಕ್ಕೆ ಪರ್ಯಾಯ ವಸ್ತುಗಳೇ ಆಗಿವೆ. ಆದರೆ, ಹಾಗೆ ಪರಿಮಳ ನೀಡುವ ಎಲ್ಲ ಲೋಶನ್‌ಗಳೂ ನಿಮ್ಮ ಚರ್ಮಕ್ಕೆ ಆಗಿಬರುತ್ತವೆ ಎಂದು ಹೇಳಲಾಗದು. ನಿಮ್ಮ ಚರ್ಮದ ಗುಣಕ್ಕೆ ಹೊಂದಿಕೊಳ್ಳುವಂಥ ಪರಿಮಳಯುಕ್ತ ಲೋಶನ್‌ಗೆ ಆದ್ಯತೆ ನೀಡಿ.

ನೈಲ್‌ ಪಾಲಿಶ್‌
 ಕೈಬೆರಳಲ್ಲೂ ಹೂವಿನ ಪರಿಮಳವನ್ನು ಹುದುಗಿಸಬಹುದು. ಇಂಥ ಪರಿಮಳದ ಮ್ಯಾಜಿಕ್‌ ಅನ್ನು ಸೃಷ್ಟಿಸಬಲ್ಲಂಥ ಸುಗಂಧಯುಕ್ತ ನೈಲ್‌ಪಾಲಿಶ್‌ಗಳು ಈಗ ಟ್ರೆಂಡ್‌ ಆಗಿವೆ. ಮೈಗೆ ಸುಗಂಧ ಪೂಸಿಕೊಂಡಂತೆ ಅನುಮಾನ ಹುಟ್ಟಿಸಬಲ್ಲ ಇವು 20ಕ್ಕೂ ಅಧಿಕ ಪರಿಮಳಗಳಲ್ಲಿ ಲಭ್ಯ.

ಟೋನರ್‌ಗಳು
 ಟೋನರ್‌ಗಳನ್ನು ಮುಖಕ್ಕೆ ಮಾತ್ರವೇ ಹಚ್ಚಿಕೊಳ್ಳಬಹುದಾ ದರೂ, ಪರ್ಫ್ಯೂಮ್‌ಗಿಂತ ಇವು ಉತ್ತಮ. ಇವುಗಳ ಪರಿಮಳವು ಮೂಗಿಗೆ ರಾಚುವುದೂ ಇಲ್ಲ. ನಿತ್ಯವೂ ಕಚೇರಿಯಲ್ಲಿ ದುಡಿಯುವವರು, ದಿನಕ್ಕೊಂದು ಟೋನರ್‌ಗಳನ್ನು ಹಚ್ಚಿಕೊಂಡು ಸಂಭ್ರಮಿಸಬಹುದು. ಈಗ ಬಗೆಬಗೆಯ ಟೋನರ್‌ಗಳೂ ಮಾರುಕಟ್ಟೆಯಲ್ಲಿವೆ.

ಹೇರ್‌ಸ್ಪ್ರೇ 
 ಶ್ಯಾಂಪೂ ಇಲ್ಲವೇ ಕಂಡೀಶನರ್‌ಗಳನ್ನೂ ಪರ್ಫ್ಯೂಮ್‌ ಬದಲಿಗೆ ಬಳಸಬಹುದು. ಆದರೆ, ಇವನ್ನು ನಿತ್ಯವೂ ಬಳಸಲಾಗುವುದಿಲ್ಲ ಎಂಬುದೇ ಒಂದು ಚಿಂತೆ. ಇವುಗಳ ಬದಲಿಗೆ ತಲೆಕೂದಲಿಗೆ ಪರಿಮಳಯುಕ್ತ ಹೇರ್‌ಸ್ಪ್ರೆàಗಳನ್ನು ಉಪಯೋಗಿಸಬಹುದು. ಇವುಗಳ ಪರಿಮಳವು ಅತ್ಯಂತ ಮಧುರ.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.