ಗಡಿನಾಡ ಕನ್ನಡಿಗರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ: ಜಯಮಾಲಾ


Team Udayavani, Jul 27, 2018, 7:00 AM IST

26ksde5.jpg

ಕಾಸರಗೋಡು: ಕಾಸರಗೋಡಿನ ಸಾಹಿತ್ಯ ವಲಯದ ಕನ್ನಡ ಚಳವಳಿಗಾರರ ಸಮಗ್ರ ಮಾಹಿತಿ ಕಲೆಹಾಕಿ ಕೈಪಿಡಿಯನ್ನು ಹೊರತರುವ ಕಾರ್ಯ ಶ್ಲಾಘನೀಯ ಎಂದು ಬಹುಭಾಷಾ ಚಿತ್ರನಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಅಭಿಪ್ರಾಯಪಟ್ಟರು. 

ಮಂಗಳೂರಿನಲ್ಲಿ ಕೈರಳಿ ಪ್ರಕಾಶನ ಬಿಡುಗಡೆಗೊಳಿಸುವ ಕಾಸರಗೋಡಿನ ಸಾಹಿತಿಗಳ ಮಾಹಿತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೈರಳಿ ಪ್ರಕಾಶನಕ್ಕೆ ಅಭಿನಂದನೆ
ಕಾಸರಗೋಡು ಬಹುಭಾಷೆ, ಸಂಸ್ಕೃತಿ ಗಳ ನೆಲೆವೀಡು. ಕನ್ನಡ ಸಾರಸ್ವತ ಲೋಕವು ಇಲ್ಲಿ ಸಂಪತ್ಸಮೃದ್ಧವಾಗಿದೆ. ಇಲ್ಲಿನ ಕನ್ನಡ ಹೋರಾಟ, ಚಳವಳಿಯು ದೇಶಕ್ಕೇ ಮಾದರಿ. ಆದರೆ ಇಲ್ಲಿನ ಸಾಹಿತಿಗಳ, ಚಳವಳಿಗಾರರ ಸಮಗ್ರ ಮಾಹಿತಿಯ ದಾಖಲೀಕರಣ ಇನ್ನೂ ಆಗಿಲ್ಲ. ಆ ನಿಟ್ಟಿನಲ್ಲಿ   ಸಮಗ್ರ ಮಾಹಿತಿಯ ಕೋಶ ರಚಿಸಲು ಮುಂದಾಗಿರುವ ಕೈರಳಿ ಪ್ರಕಾಶನದ  ಸಾಹಸ ನಿಜಕ್ಕೂ   ಶ್ಲಾಘನೀಯ. ಪ್ರಕಾಶಕರು ಅಭಿನಂದನಾರ್ಹರೆಂದು ಅವರು ಹೇಳಿದರು.

ಕಾಸರಗೋಡಿನ ಕನ್ನಡಿಗರ ಸಮಸ್ಯೆಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದೇನೆ. ಇಲ್ಲಿನ ಸಮಸ್ಯೆ ಪರಿಹಾರಕ್ಕೆ ತನ್ನಿಂದಾದ ಪ್ರಯತ್ನ ನಿರ್ವಹಿಸುವುದಾಗಿಯೂ ಭರವಸೆಯನ್ನಿತ್ತರು. ಈ ಸಂದರ್ಭದಲ್ಲಿ ಕೈರಳಿ ಪ್ರಕಾಶನದ ಎ.ಆರ್‌. ಸುಬ್ಬಯ್ಯಕಟ್ಟೆ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ, ನಿವೃತ್ತ ಪ್ರಾಂಶುಪಾಲ ಪ್ರೊ| ಶ್ರೀನಾಥ್‌, ದ.ಕ.ಜಿಲ್ಲಾ ಸಹಕಾರಿ ಬ್ಯಾಂಕ್‌ ನಿದೆೇìಶಕರಾದ ದೇವಿಪ್ರಸಾದ್‌ ಶೆಟ್ಟಿ, ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ಕೋಶಾಧಿ ಕಾರಿ ರವಿ ನಾಯ್ಕಪು ಮೊದಲಾದವರು ಉಪಸ್ಥಿತರಿದ್ದರು.

ಎಲೆಮರೆಯ ಕಾಯಿಗಳಾಗಿರುವ ಕಾಸರಗೋಡಿನ ಪ್ರತಿಭಾವಂತ ಕನ್ನಡ ಸಾಹಿತಿಗಳ ಪುಸ್ತಕಗಳನ್ನು ಹೊರ ತರುವ ಕೈಂಕರ್ಯ ಕೈರಳಿ ಪ್ರಕಾಶನವು ಮುಂದುವರಿಸಿದೆ. ಇದೀಗ ಎರಡನೇ ಹಂತವಾಗಿ ಕನ್ನಡ ಸಾಹಿತಿಗಳ, ಚಳವಳಿಗಾರರ ಪರಿಶ್ರಮ, ಕಟ್ಟುಪಾಡು, ವಚನ ಬದ್ಧತೆ, ಸಾಧನೆ ಮತ್ತು ಕೊಡುಗೆ ಗಳನ್ನು ಗುರುತಿಸುವ, ಪರಿಚಯಿಸುವ, ದಾಖಲಿಸುವ ಅಭಿಯಾನ ಕೈಗೊಂಡಿದೆ ಎಂದು ಎ.ಆರ್‌. ಸುಬ್ಬಯ್ಯಕಟ್ಟೆ. ಹೇಳಿದರು. 

ಕಾಸರಗೋಡು ವಲಯ ಸಾಹಿತಿಗಳು ಜಯಮಾಲಾ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.