ತಣ್ಣೀರುಪಂತ: 93 ವರ್ಷದ ಶಾಲೆ ಶಿಥಿಲ


Team Udayavani, Jul 27, 2018, 10:53 AM IST

27-july-4.jpg

ಉಪ್ಪಿನಂಗಡಿ : ಗ್ರಾಮೀಣ ಭಾಗದಲ್ಲಿ ಬರೋಬ್ಬರಿ 93 ವರ್ಷ ಹಳೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರ ಕಟ್ಟಡದಲ್ಲಿ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಮಣ್ಣಿನ ಗೋಡೆಯ ಕೋಣೆಯೊಳಗೆ ತಮಗರಿವಿಲ್ಲ ದೆಯೇ ಖುಷಿಯಿಂದ ಮಕ್ಕಳು ನಲಿದಾಡುತ್ತಿದ್ದಾರೆ. ಅಪಾಯದಲ್ಲಿರುವ ಶಾಲಾ ಕಟ್ಟಡದತ್ತ ಸಂಬಂಧಪಟ್ಟವರು ಗಮನ ಹರಿಸದೇ ಇದ್ದಲ್ಲಿ ಯಾವುದೇ ಕ್ಷಣದಲ್ಲಿ ಅವಘಡ ಸಂಭವಿಸುವ ಸಾಧ್ಯತೆ ಇದೆ.

ಈ ಶಾಲೆ ಇರುವುದು ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದಲ್ಲಿ. ಇಲ್ಲಿ 1ರಿಂದ 8ನೇ ತರಗತಿ ವರೆಗಿನ ಒಟ್ಟು 124 ವಿದ್ಯಾರ್ಥಿಗಳು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಕಟ್ಟಡದಲ್ಲಿ 8 ತರಗತಿ ಕೋಣೆಗಳಿದ್ದು, ಈ ಪೈಕಿ 2 ಕೋಣೆಗಳ ಛಾವಣಿ ಮುರಿದು ಬೀಳುವ ಸ್ಥಿತಿಯಲ್ಲಿದೆ. ಶಾಲೆಯ ಆವರಣ ಗೋಡೆ ಸಂಪೂರ್ಣ ಕುಸಿದಿದೆ. ಕೊಠಡಿಯ ಮೇಲೆ ಮರವೊಂದು ವಾಲಿಕೊಂಡಿದೆ.

ಮನವಿಗೂ ಸ್ಪಂದನೆ ಇಲ್ಲ
ಈ ಶಾಲೆಗೆ ಬರುವ ಶಿಕ್ಷಕರೂ ಇಲ್ಲಿರಲು ಹಿಂಜರಿಯುತ್ತಾರೆ. ವರ್ಗಾವಣೆಯಾಗಲಿ ಎಂದು ಬಯಸುತ್ತಾರೆ. ಆದರೆ ಯಾರೂ ಕೂಡ ಬಹಿರಂಗವಾಗಿ ಹೇಳಿಕೊಳ್ಳಲು ಮುಂದೆ ಬರುವುದಿಲ್ಲ. ಸಂಬಂಧಪಟ್ಟವರು ಕಳೆದೈದು ವರ್ಷಗಳಿಂದ ನೂತನ ಕಟ್ಟಡ ನಿರ್ಮಿಸುವಂತೆ ಹತ್ತಾರು ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಗತಿಯಾಗಿಲ್ಲ.

2 ಕೊಠಡಿಗಳಿಗೆ ಬೀಗ!
ಈ ಶಾಲಾ ಕಟ್ಟಡಕ್ಕೆ ಸಂಬಂಧಿಸಿದಂತೆ 2 ವರ್ಷಗಳ ಹಿಂದೆಯೇ ಗ್ರಾಮಸ್ಥರು ಶಿಕ್ಷಣ ಇಲಾಖೆಯನ್ನು ತರಾಟೆ ತೆಗೆದುಕೊಂಡಿದ್ದರು. ಆನಂತರದಲ್ಲಿ ಆಗಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಣ ಸಂಯೋಜಕರನ್ನು ಕಳುಹಿಸಿದ್ದರು. ಅವರು ಪರಿಶೀಲನೆ ನಡೆಸಿ ಕಟ್ಟಡದ 2 ಕೊಠಡಿಗಳಿಗೆ ಬೀಗ ಹಾಕಿ ಸಿದ್ದು, ಉಳಿದ 6 ಕೊಠಡಿಗಳಲ್ಲಿ ಮಾತ್ರ ಪಾಠ ಮಾಡುವಂತೆ ಸೂಚಿಸಿದ್ದರು. ಆದರೆ ಇಲ್ಲಿ ತೀರಾ ಅಪಾಯದಲ್ಲಿರುವ 2 ಕೊಠಡಿಗಳಿಗೆ ಹೊಂದಿಕೊಂಡೇ ಇತರ ಕೊಠಡಿಗಳಿದೆ. ಆ ಕೋಣೆಗಳ ಛಾವಣಿ ಮುರಿದರೆ ಇತರ 6 ಕೋಣೆಗಳಿಗೂ ಅದರ ಪರಿಣಾಮ ಬೀರುತ್ತದೆ.

ಬಂದ ಅನುದಾನ ವರ್ಗಾವಣೆ
ಎರಡು ವರ್ಷಗಳ ಹಿಂದೆ ಮಾಜಿ ಶಾಸಕ ವಸಂತ ಬಂಗೇರ ಅವರು ಮಕ್ಕಳಿಗೆ ಸೈಕಲ್‌ ವಿತರಣೆಗೆಂದು ಈ ಶಾಲೆಗೆ ಬಂದವರು ಕೋಣೆಗಳ ದುಃಸ್ಥಿತಿಯನ್ನು ಕಂಡಿ ದ್ದಾರೆ. ತತ್‌ ಕ್ಷಣವೇ ಜಿ.ಪಂ. ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲನೆ ಮಾಡಿಸಿದ್ದಾರೆ. 12 ಲಕ್ಷ ರೂ. ವೆಚ್ಚದಲ್ಲಿ ಶಾಲೆಗೆ ನೂತನ ಕಟ್ಟಡ ನಿರ್ಮಿಸುವ ಭರವಸೆಯನ್ನೂ ಶಾಸಕರು ನೀಡಿದ್ದರು. ಕಟ್ಟಡದ ರಿಪೇರಿಗೆ 4 ಲಕ್ಷ ರೂ. ಅನುದಾನ ಒದಗಿಸಿಕೊಡುವಂತೆ ಶಾಲಾ ಮುಖ್ಯ ಶಿಕ್ಷಕರು ಬೇಡಿಕೆ ಇಟ್ಟಿದ್ದರು. ಆನಂತರದಲ್ಲಿ 12 ಲಕ್ಷ ರೂ. ಅನುದಾನ ಮಂಜೂರಾಗಿದ್ದರೂ, ಅದು ಪುತ್ತಿಲ ಗ್ರಾಮದ ಹೇರಾಜೆ ಶಾಲೆಗೆ ವರ್ಗಾವಣೆಗೊಂಡಿತ್ತು. ಶಾಲೆಯ ಸ್ಥಿತಿ ಗಂಭೀರವಾಗಿದ್ದರೂ, ಕ್ಷೇತ್ರ ಶಿಕ್ಷಣಾಕಾರಿಗಳು ಖುದ್ದು ಪರಿಶೀಲನೆ ನಡೆಸಿಲ್ಲದಿರುವುದು ಖೇದಕರ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಮಾಹಿತಿ ಬಂದಿಲ್ಲ
ತಣ್ಣೀರುಪಂತ ಸರಕಾರಿ ಶಾಲೆ ಅಪಾಯದ ಸ್ಥಿತಿಯಲ್ಲಿರುವ ಕುರಿತು ಯಾವುದೇ ಮಾಹಿತಿ ಈವರೆಗೆ ಬಂದಿಲ್ಲ. ಒಂದೊಮ್ಮೆ ಮನವಿ ಬಂದರೆ ಮೇಲಧಿಕಾರಿಗಳ ಮೂಲಕ ಸರಕಾರದ ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗುವುದು.
– ಗುರುಪ್ರಸಾದ್‌
 ಕ್ಷೇತ್ರ ಶಿಕ್ಷಣಾಧಿಕಾರಿ, ಬೆಳ್ತಂಗಡಿ

ಎಂ.ಎಸ್‌. ಭಟ್‌

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.