ಸಾಹಿತಿ ಪ್ರೊ.ಶಿವರಾಮು ಕಾಡನಕುಪ್ಪೆ ನಿಧನ


Team Udayavani, Jul 27, 2018, 12:35 PM IST

m2-sahitio.jpg

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸಾಹಿತಿ ಪ್ರೊ.ಶಿವರಾಮು ಕಾಡನಕುಪ್ಪೆ (65) ಗುರುವಾರ ಬೆಳಗ್ಗೆ ಮೈಸೂರಿನ ಕುವೆಂಪುನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದರು. 

ಅವರ ಇಚ್ಚೆಯಂತೆ ದೇಹವನ್ನು ಜೆಎಸ್‌ಎಸ್‌ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಯಿತು. ಪುತ್ರಿ ಡಾ.ಸುಶಿ ಕಾಡನಕುಪ್ಪೆ, ಪುತ್ರ ನೇಸರ ಕಾಡನಕುಪ್ಪೆ, ಸೊಸೆ ಮೇಘಾ ಕಾಡನಕುಪ್ಪೆ, ಮೊಮ್ಮಗ ಅಕ್ಷರ ಕಾಡನಕುಪ್ಪೆ ಅವರನ್ನು ಅಗಲಿದ್ದಾರೆ.

ಕವಿ, ಕಾದಂಬರಿಕಾರ, ವಿಮರ್ಶಕರಾಗಿ ಹೆಸರು ಮಾಡಿದ್ದ ಪ್ರೊ.ಶಿವರಾಮು ಕಾಡನಕುಪ್ಪೆ, ರಾಮನಗರ ಜಿಲ್ಲೆ ಕಾಡನಕುಪ್ಪೆ ಗ್ರಾಮದ ಶಿವಮ್ಮ-ಶಿವಲಿಂಗೇಗೌಡ ದಂಪತಿಯ ಮೊದಲ ಪುತ್ರನಾಗಿ 1953 ಆಗಸ್ಟ್‌ 9ರಂದು ಜನಿಸಿದರು. 36 ವರ್ಷಗಳ ಕಾಲ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ಮೈಸೂರಿನ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿದ್ದರು.

2003ರಲ್ಲಿ ಮೈಸೂರು ವಿವಿ ಶಿಕ್ಷಣ ಮಂಡಳಿ ಸದಸ್ಯರಾಗಿ, 2006-09ರ ಅವಧಿಯಲ್ಲಿ ಸಿಂಡಿಕೇಟ್‌ ಸದಸ್ಯರಾಗಿ, 2003-05ರವರೆಗೆ ಮೈಸೂರು ವಿವಿ ಪರೀಕ್ಷಾ ಅಕ್ರಮ ಮತ್ತು ಲೋಪಗಳ ವಿಚಾರಣಾ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ವಸುಂಧರೆಗೆ ಸಿಂಗಾರಿಗೌಡ ಪ್ರಶಸ್ತಿ: 1976ರಲ್ಲಿ ಇವರ ಮೊದಲ ಕೃತಿ ಸಮನ್ವಯ-ವಿಮಶಾì ಪ್ರಬಂಧಗಳ ಸಂಗ್ರಹ ಪ್ರಕಟಗೊಂಡಿದೆ. ಇವರ ಸಮನ್ವಯ, ಸಾಮಾಜಿಕ ನೆಲೆ, ಕುವೆಂಪು ಸಾಹಿತ್ಯ ಮತ್ತು ವಿಚಾರ-ವಿಮಶಾìಕೃತಿಗಳು, ಕುಕ್ಕರಹಳ್ಳಿ-ಸಾಮಾಜಿಕ ಅಧ್ಯಯನ, ವಸುಂಧರೆ ಕಾದಂಬರಿ, ನೀಲಿ ಸಂದ್ರಮ ಕವನ ಸಂಕಲನಗಳು ಪ್ರಸಿದ್ಧಿಪಡೆದಿವೆ.

ವಸುಂಧರೆ ಕಾದಂಬರಿಗೆ ಮಂಡ್ಯದ ಕರ್ನಾಟಕ ಸಂಘದ ಸಿಂಗಾರಿಗೌಡ ಪ್ರಶಸ್ತಿ ದೊರೆತಿದೆ. ಮಂಡ್ಯ ಕರ್ನಾಟಕ ಸಂಘದ ಸಾಹಿತ್ಯ ಮಾಸಿಕ ಅಭಿವ್ಯಕ್ತಿಯಲ್ಲಿ ಅಂಕಣಕಾರರಾಗಿರುವ ಇವರು ತಮ್ಮ ಆಸ್ಪತ್ರೆಯ ಅನುಭವಗಳ ಕುರಿತು 2015ರಲ್ಲಿ ಆಸ್ಪತ್ರೆಯಲ್ಲಿ ಐವತ್ತನಾಲ್ಕು ದಿನಗಳು ಕೃತಿ ಬರೆದಿದ್ದಾರೆ.

ಆಧುನಿಕ ಕನ್ನಡ ಕಥೆಗಳು, ಶಿವರಾಮ ಕಾರಂತ ಹತ್ತು ಅಧ್ಯಯನಗಳು, ವಿನಾಯಕ ಒಂದು ಅಧ್ಯಯನ, ಕನ್ನಡ ಪ್ರಬಂಧಗಳು, ಹಾಮಾನ ಸಾಹಿತ್ಯ ಪರಿಚಯ, ಆಧುನಿಕ ಕನ್ನಡ ಕಾವ್ಯ ಇತ್ಯಾದಿ 8 ಸಾಹಿತ್ಯ ಕೃತಿಗಳನ್ನು ಸಂಪಾದಿಸಿದ್ದಾರೆ.

2001ರಿಂದ 03ರವರೆಗೆ ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯ, ಕನ್ನಡ ಪುಸ್ತಕ ಪ್ರಾಧಿಕಾರದ ಆಯ್ಕೆ ಮಂಡಳಿ ಸದಸ್ಯ, ಪಂಪ ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 1977-78ರಲ್ಲಿ ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟದಲ್ಲಿ ಭಾಗಿ, ಕನ್ನಡ ಭಾಷಾ ಚಳವಳಿ, ರೈತ ಚಳವಳಿ, ದಲಿತ ಚಳವಳಿಗಳನ್ನು ರೂಪಿಸಿದವರಲ್ಲಿ ಒಬ್ಬರಾಗಿದ್ದಾರೆ.

ಟಾಪ್ ನ್ಯೂಸ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.