ಕೌಶಲ ವೃದ್ಧಿಗೆ ಪ್ರತಿಭಾ ಕಾರಂಜಿ ಪೂರಕ
Team Udayavani, Jul 27, 2018, 4:19 PM IST
ಅಳ್ನಾವರ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಗುರುತಿಸಿ ಪರಿಪೂರ್ಣತೆಯತ್ತ ಸಾಗುವಂತೆ ಮಾಡಲು ಹಾಗೂ ಅವರ ವ್ಯಕ್ತಿತ್ವ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಿಂಗಪ್ಪ ಘಾಟಿನ್ ಹೇಳಿದರು.
ಪಟ್ಟಣದಲ್ಲಿ ಗುರುವಾರ ನಡೆದ ಅಳ್ನಾವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಲು ಇದು ಸೂಕ್ತ ವೇದಿಕೆಯಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರಿಂದ ಮಕ್ಕಳ ಸಂವೇದನಶೀಲತೆ, ಆತ್ಮವಿಶ್ವಾಸ, ಬುದ್ಧಿಶಕ್ತಿ ಅನಾವರಣಗೊಳ್ಳುತ್ತದೆ. ಇದರಿಂದ ಸಮಾಜದ ಪರಿವರ್ತನೆ ಮಾಡಲು ಯುವ ಮನಸ್ಸುಗಳಿಗೆ ಪ್ರೋತ್ಸಾಹ ನೀಡಿದಂತೆ ಆಗುತ್ತದೆ ಎಂದರು.
ಅಳ್ನಾವರ, ಕಾಶೇನಟ್ಟಿ, ಬೆಣಚಿ, ಕಡಬಗಟ್ಟಿ, ಹುಲಿಕೇರಿ ಶಾಲೆಗಳ ಸುಮಾರು 300 ಸ್ಪರ್ಧಾಳುಗಳು ಭಾಗಿಯಾಗಿದ್ದರು. 30ಕ್ಕೂ ಹೆಚ್ಚು ಸ್ಪರ್ಧೆಗಳು ನಡೆದವು. ಎಕ್ಸೆಲ್ ಲೈಫ್ ಇನ್ಸುರೆನ್ಸ್ ಕಂಪನಿಯ ಧಾರವಾಡ ಶಾಖೆ ಮುಖ್ಯಸ್ಥ ಆನಂದಸಿಂಗ್ ರಜಪೂತ ಸ್ಪರ್ಧಾ ವಿಜೇತರ ಬಹುಮಾನಗಳ ಪ್ರಾಯೋಜಕತ್ವ ವಹಿಸಿದ್ದರು. ಪಪಂ ಅಧ್ಯಕ್ಷೆ ಭಾಗ್ಯವತಿ ಕುರುಬರ, ಉಪಾಧ್ಯಕ್ಷ ಕಿರಣ ಗಡಕರ, ಎಸ್ ಡಿಎಂಸಿ ಅಧ್ಯಕ್ಷ ಉಸ್ಮಾನ ಬಾತಖಂಡಿ, ರೊಜಾರಿಯೊ ಫರ್ನಾಂಡಿಸ್, ಮಂಜುಳಾ ಮೇದಾರ, ಅನಪೂರ್ಣಾ ಹಿರೇಮಠ, ಬಿಆರ್ಸಿ ಎಸ್.ಸಿ. ಅಂಗಡಿ, ಚಿನ್ನಮ್ಮ ಬಾಗಲಕೋಟಿ, ಆರ್.ವಿ. ಪಂಚಾಳ, ಎಚ್.ಎಸ್. ಬಡಿಗೇರ, ಎಂ.ಐ. ದಿವಟಗಿ, ಪುಂಡಲೀಕ ಪಾರದಿ, ದೀಪಾ ಲಾಡ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!