ದನ ಕಳ್ಳರ ವಿರುದ್ಧ ಮೂರು ಪ್ರಕರಣ: ನಾಲ್ವರ ಬಂಧನ


Team Udayavani, Jul 28, 2018, 10:48 AM IST

nalvara-bandana.jpg

ಮಂಗಳೂರು: ನಗರದ ಪಾಂಡೇಶ್ವರ, ಕಾವೂರು ಮತ್ತು ಮೂಡಬಿದಿರೆ ಪೊಲೀಸ್‌ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಪ್ರತ್ಯೇಕ ದನ ಕಳವು ಪ್ರಕರಣಗಳಿಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಅಮ್ಮೆಮ್ಮಾರ್‌ ನಿವಾಸಿ ಇಮ್ರಾನ್‌ ಯಾನೆ ಕುಟ್ಟ ಇಮ್ರಾನ್‌ (27), ಬಜಪೆ ಶಾಂತಿಗುಡ್ಡೆಯ ಉಮ್ಮರ್‌ ಫಾರೂಕ್‌ (32), ಕಸಬಾ ಬೆಂಗ್ರೆಯ ಅಬ್ದುಲ್‌ ಕಬೀರ್‌ ಯಾನೆ ಪಾರಿವಾಳ ಕಬೀರ್‌ (30) ಮತ್ತು ಎಡಪದವು ಬಡಗ ತೋಡಾರು ನಿವಾಸಿ ಕೆ. ಅಬ್ದುಲ್‌ ಬಶೀರ್‌ ಯಾನೆ ಅರ್ಗ ಬಶೀರ್‌ (42) ಬಂಧಿತರು. ಆರೋಪಿಗಳಿಂದ ಸ್ಕಾರ್ಪಿಯೋ ಮತ್ತು ಇನ್ನೊಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ. 

ಪ್ರಕರಣ 1
ಜೂ.16 ಮತ್ತು 17ರಂದು ಮೂಡುಶೆಡ್ಡೆ ಬೈಲು ನಿವಾಸಿ ಪುರುಷೋತ್ತಮ ಅವರ  ಹಟ್ಟಿಯಿಂದ 2 ದನಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ಇಮ್ರಾನ್‌ ಹಾಗೂ ಫಾರೂಕ್‌ನನ್ನು ಬಂಧಿಸಲಾಗಿದೆ. 

ಆರೋಪಿಗಳ ಇಮ್ರಾನ್‌ ಯಾನೆ ಕುಟ್ಟ ಇಮ್ರಾನ್‌ ವಿರುದ್ಧ ಉಳ್ಳಾಲ, ಕೊಣಾಜೆ, ಬಜಪೆ, ಮಂಗಳೂರು ಗ್ರಾಮಾಂತರ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ ಹಾಗೂ ಕೊಡಗು ಜಿಲ್ಲೆಯ ಕುಶಾಲನಗರ, ಸೋಮವಾರಪೇಟೆ, ಹಾಸನ ಜಿಲ್ಲೆಯ ಸಕಲೇಶಪುರ, ಪೊಲೀಸ್‌ ಠಾಣೆಗಳಲ್ಲಿ ದನಕಳ್ಳತನ ಹಾಗೂ ಕೊಲೆ ಸಹಿತ ಒಟ್ಟು 20 ಪ್ರಕರಣಗಳಿವೆ.

ಫಾರೂಕ್‌ ವಿರುದ್ಧ ಬಜಪೆ, ಬಂಟ್ವಾಳ ನಗರ, ಉಪ್ಪಿನಂಗಡಿ, ವೇಣೂರು, ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ  ಠಾಣೆಗಳಲ್ಲಿ  ದನ ಕಳವು ಸಂಬಂಧಿಸಿ  10 ಪ್ರಕರಣಗಳಿವೆ. 

ಪ್ರಕರಣ 2
ಪಾಂಡೇಶ್ವರ ಗೂಡ್ಸ್‌ ಶೆಡ್‌ ಬಳಿ ಮೇಯುತ್ತಿದ್ದ 2 ದನ ಹಾಗೂ ಕರುವನ್ನು ಕಳವು ಮಾಡಿದ ಪ್ರಕರಣ ಕುರಿತಂತೆ  ಆರೋಪಿ ಕಸಬಾ ಬೆಂಗ್ರೆಯ ಅಬ್ದುಲ್‌ ಕಬೀರ್‌ ಯಾನೆ ಪಾರಿವಾಳ ಕಬೀರ್‌ (30) ಬಂಧಿತನಾಗಿದ್ದಾನೆ. 

ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ದನಗಳು ಮತ್ತು ಕರುವನ್ನು ಜು.5ರಂದು ಮೇಯಲು ಬಿಟ್ಟಿದ್ದು, ಕಳ್ಳರು ಅಲ್ಲಿಂದಲೇ ಕದ್ದೊಯ್ದಿದ್ದರು. 

ಕಬೀರ್‌ನಿಂದ ದನ ಕಳ್ಳತನ ಮಾಡಲು ಉಪಯೋಗಿಸಿದ ಮಾರುತಿ ರಿಟ್ಜ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈತನ ವಿರುದ್ಧ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ದರೋಡೆ ಪ್ರಕರಣ, ಬಜಪೆ ಪೊಲೀಸ್‌ ಠಾಣೆಯಲ್ಲಿ ದನಕಳ್ಳತನ ಪ್ರಕರಣ, ಉಳ್ಳಾಲ ಹಾಗೂ ಉಪ್ಪಿನಂಗಡಿ ಪೊಲೀಸ್‌ ಠಾಣೆಗಳಲ್ಲಿ ಮೊಬೈಲ್‌ ಕಳ್ಳತನ ಹಾಗೂ ಇತರ ಪ್ರಕರಣಗಳಿವೆ.

ಈತ  ಕೆಲವು ಪ್ರಕರಣಗಳಲ್ಲಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿದ್ದು,  ಈತನ ವಿರುದ್ಧ ವಾರಂಟ್‌ ಹೊರಡಿಸಲಾಗಿತ್ತು.

ಪ್ರಕರಣ 3
ಮೂಡಬಿದಿರೆ ಠಾಣಾ ವ್ಯಾಪ್ತಿಯ ಮೂರು ಕಡೆಗಳಲ್ಲಿ ನಡೆದ ದನಕಳವು ಪ್ರಕರಣಕ್ಕೆ ಸಂಬಂಧಿಸಿ ಎಡಪದವು ಬಡಗ ತೋಡಾರು ನಿವಾಸಿ ಕೆ. ಅಬ್ದುಲ್‌ ಬಶೀರ್‌ ಯಾನೆ ಅರ್ಗ ಬಶೀರ್‌ (42)ನನ್ನು ಬಂಧಿಸಲಾಗಿದೆ.

ಈತನ ಮೇಲೆ 2017ರಲ್ಲಿ  ಮೂಡ ಬಿದಿರೆ ರಿಂಗ್‌ರೋಡ್‌, ಒಂಟಿಕಟ್ಟೆ, ಬೊಗ್ರುಗುಡ್ಡೆ ಹಟ್ಟಿಯೊಂದರಿಂದ ದನಕಳವು ಪ್ರಕರಣ ಮಾತ್ರವಲ್ಲದೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು.

ಈತನನ್ನು ಸಿಸಿಬಿ ಪೊಲೀಸರು ತೋಡಾರು ಬಳಿಯಿಂದ ವಶಕ್ಕೆ ಪಡೆದು ಮೂಡಬಿದಿರೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಆರೋಪಿಗಳು ಇನ್ನೂ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ವಿಚಾರಣೆ ವೇಳೆ ತಿಳಿದು ಬಂದಿದೆ. ಇನ್ನೂ ಹಲವು ಆರೋಪಿಗಳ‌ನ್ನು ಶೀಘ್ರವಾಗಿ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.