ಬಾಳಿಗೆ ಬೆಳಕು ನೀಡುವ ಶಕ್ತಿ ಗುರು


Team Udayavani, Jul 28, 2018, 11:07 AM IST

dvg-3.jpg

ಹರಿಹರ: ನಗರ ಹೊರವಲಯದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ ಹಾಗೂ ನಗರದ ಪಟೇಲ್‌ ಬಡಾವಣೆಯಲ್ಲಿರುವ ಸಾಯಿ ಮಂದಿರದಲ್ಲಿ ಶುಕ್ರವಾರ ಗುರುಪೌರ್ಣಿಮೆ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಪಂಚಮಸಾಲಿ ಪೀಠದಲ್ಲಿ ಬೆಳಗ್ಗೆಯಿಂದಲೆ ಹೋಮ, ಹವನ ಇತ್ಯಾದಿ ಕಾರ್ಯಕ್ರಮಗಳು ವಚನಾನಂದ ಶ್ರೀಗಳ ಸಾನ್ನಿಧ್ಯದಲ್ಲಿ ನೆರವೇರಿದವು. ನಂತರ ಪ್ರವಚನ ನೀಡಿದ ಶ್ರೀಗಳು, ಗುರು ಪ್ರತಿಯೊಬ್ಬರ ಬಾಳಿನಲ್ಲಿ ಬೆಳಕು ನೀಡುವ ಶಕ್ತಿಯಾಗಿದ್ದಾನೆ. ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಸೇರಿದಂತೆ ಬದುಕಿನ ವಿವಿಧ ಕ್ಷೇತ್ರಗಳಲ್ಲಿ ಗುರುವಿನ ಅನುಗ್ರಹ ಮುಖ್ಯ. ನಿರ್ಮಲ ಮನಸ್ಸು, ಜ್ಞಾನದ ಭಂಡಾರವಾಗಿರುವ ಗುರು ಸಿಗುವುದು ಅದೃಷ್ಟವೇ ಸರಿ. ಸರಿಯಾದ ಗುರು ಸಿಕ್ಕರೆ ಶಿಷ್ಯನ ಬದುಕು ಬಂಗಾರವಾಗುತ್ತದೆ ಎಂದರು. 

ಭಕ್ತರು ಶ್ರೀಗಳಿಗೆ ಪುಷ್ಪಾರ್ಚನೆ ಮಾಡಿ ಆಶೀರ್ವಾದ ಪಡೆದರು. ಪೀಠದ ಪ್ರಧಾನ ಕಾರ್ಯದರ್ಶಿ ಬಿ.ಸಿ. ಉಮಾಪತಿ, ಹದಡಿ ನಟರಾಜ್‌, ಚಂದ್ರಶೇಖರ್‌ ಪೂಜಾರ್‌, ದೊಡ್ಡಪ್ಪ, ಕರಿಬಸಪ್ಪ ಗುತ್ತೂರು ಇತರರಿದ್ದರು.

ಸಾಯಿ ಮಂದಿರ: ನಗರದ ಪಟೇಲ್‌ ಬಡಾವಣೆಯಲ್ಲಿನ ಸಾಯಿ ಮಂದಿರದಲ್ಲಿ ನೂರಾರು ಭಕ್ತರು ದೇವರ ದರ್ಶನ ಪಡೆದರು. ಬೆಳಿಗ್ಗೆ ಕ್ಷೀರಾಭಿಷೇಕ, ಸಾಮೂಹಿಕ ಸತ್ಯನಾರಾಯಣ ಪೂಜೆ, ಹೋಮ, ವಿಶೇಷ ಪೂಜೆ ನಂತರ ಅನ್ನಸಂತರ್ಪಣೆ ನಡೆಯಿತು. ನಂತರ ವಚನಾನಂದ ಶ್ರೀಗಳು ಪ್ರವಚನ ನೀಡಿದರು. ದೇವಸ್ಥಾನ ಸಮಿತಿಯ ಶಂಕರ್‌ ಖಟಾವ್‌ಕರ್‌, ಬಸವರಾಜ್‌ ಪಟೇಲ್‌, ಹನುಮಂತರಾವ್‌ ಸುರ್ವೆ, ವಾಗೀಶ್‌ ಪಟೇಲ್‌, ಚಂದ್ರಶೇಖರ್‌ ಸರಪದ್‌, ಲಿಂಗರಾಜ್‌ ಪಟೇಲ್‌, ಭೀಮಣ್ಣ ಐರಣಿ, ಮಹದೇವಪ್ಪ ಸರಪದ್‌, ಎಸ್‌.ಎಸ್‌. ಸಂಗನಾಳಮಠ, ಚಳಗೇರಿ ಇತರರಿದ್ದರು.

ಬದುಕಿಗೆ ಸನ್ಮಾರ್ಗ ತೋರುವ ಗುರು
ಹೊನ್ನಾಳಿ: ಬದುಕಿಗೆ ಸನ್ಮಾರ್ಗವನ್ನು ದಯಪಾಲಿಸುವ ಹಾಗೂ ಶಿಷ್ಯನ ಬದುಕಿಗೆ ಬೆಳಕನ್ನು ಚೆಲ್ಲುವಂತೆ ಮಾಡುವ ಗುರುವಿಗೆ ಗುರುಪೌರ್ಣಿಮೆಯಂದು ಗುರುವಂದನೆ ಸಲ್ಲಿಸುವುದು ಪ್ರತಿ ಶಿಷ್ಯನ ಕರ್ತವ್ಯವಾಗಿದೆ ಎಂದು ಹಿರೇಕಲ್ಮಠದ ಡಾ| ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. 

ಗುರುಪೌರ್ಣಿಮೆ ಅಂಗವಾಗಿ ಪಟ್ಟಣದ ಶ್ರೀಹಳದಮ್ಮದೇವಿ ಬಾಲಕಿಯರ ಹಾಗೂ ಅಕ್ಕಮಹಾದೇವಿ ಅಂಗ್ಲ ಮಾಧ್ಯಮ ಶಾಲೆಗಳ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಗುರುವಂದನೆ ಹಾಗೂ ಡಾಕ್ಟರೇಟ್‌ ಪದವಿಗೆ ಭಾಜನರಾದ ಶ್ರೀಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.

ತಮಗೆ ಮಾರ್ಗದರ್ಶನ ನೀಡುತ್ತಾ ಬಂದಿದ್ದ ಶ್ರೀ ಒಡೆಯರ್‌ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿಯವರನ್ನು ಸ್ಮರಿಸಿಕೊಂಡು, ತಮ್ಮ ಬದುಕಿನ ಪಯಣ ಕುರಿತು ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ಜೀವನದಲ್ಲಿ ಗುರುವಿನ ಮಾರ್ಗದರ್ಶನದಲ್ಲಿ ಗುರಿ ಸಾಧನೆ ಮಾಡಬೇಕು. ಜೀವನದಲ್ಲಿ ಸೋಲುಗಳು ಸಹಜ. ಆದರೆ ಛಲಬಿಡದೆ ಸಾಧನೆ ಮಾಡಿದಾಗ ಮಾತ್ರ ಸಫಲತೆ ನಮ್ಮದಾಗುತ್ತದೆ ಎಂದು ಹೇಳಿದರು. ಶ್ರೀಮಠದ ವಿದ್ಯಾಪೀಠದ ಆಡಳಿತಾಧಿ ಕಾರಿ ಡಾ| ಜಯಪ್ಪ ಮಾತನಾಡಿ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ನಿರಂತರ ಸಾಧನೆಯಿಂದ ಮನುಷ್ಯ ತಾನು ಅಂದುಕೊಂಡಿದ್ದನ್ನು ಸಾಧಿ ಸಬಹುದಾಗಿದೆ ಎಂದು ಹೇಳಿದರು.

ನಿವೃತ್ತ ಮುಖ್ಯ ಶಿಕ್ಷಕ ಎಂ.ಪಿ.ಎಂ. ವಿಜಯಾನಂದಕುಮಾರಸ್ವಾಮಿ, ಅಕ್ಕಮಹಾದೇವಿ ಅಂಗ್ಲಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಶಂಕರಸ್ವಾಮಿ, ಸಂಗೀತ ಶಿಕ್ಷಕಿ ಶಾಂತಾದೇವಿ ಹಿರೇಮಠ, ಶಿಕ್ಷಕ ಎಂ.ವಿ. ಮೃತ್ಯುಂಜಯ ಮಾತನಾಡಿದರು. ಶ್ರೀಹಳದಮ್ಮ ದೇವಿ
ಬಾಲಕಿಯರ ಪ್ರೌಢಶಾಲಾ ಮುಖ್ಯ ಶಿಕ್ಷಕ ಪಿ.ಎಂ. ಸಿದ್ದಯ್ಯ ಅಧ್ಯಕ್ಷತೆ ವಹಿಸಿದ್ದರು. ಶಾಲೆಗಳ ಶಿಕ್ಷರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಉಭಯ ಶಾಲೆಗಳಿಂದ ಸ್ವಾಮೀಜಿಯವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.