ಬೆಳೆ ಕಟಾವಿಗೆ ಮುನ್ನವೇ ಖರೀದಿ ಕೇಂದ್ರ
Team Udayavani, Jul 29, 2018, 7:40 AM IST
ಬೆಂಗಳೂರು: ಬೆಂಬಲ ಬೆಲೆ ಮೂಲಕ ಖರೀದಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಉತ್ಪನ್ನಗಳನ್ನು ಖರೀದಿಸಲು ಬೆಳೆ ಕಟಾವಿಗೆ ಮುನ್ನವೇ ಖರೀದಿ ಕೇಂದ್ರಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ.
ಇದುವರೆಗೆ ಕಟಾವು ಮುಗಿದು 15 ದಿನಗಳ ನಂತರ ಬೆಂಬಲ ಬೆಲೆ ಮೂಲಕ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುತ್ತಿತ್ತು. ಇದರಿಂದ ಮಾರುಕಟ್ಟೆಯಲ್ಲಿ ಬೆಲೆ ಕುಸಿದು ಸಾಕಷ್ಟು ರೈತರು ನಷ್ಟ ಅನುಭವಿಸುತ್ತಿದ್ದರು. ಇದನ್ನು ತಪ್ಪಿಸುವ ಉದ್ದೇಶದಿಂದ ಬೆಳೆ ಕಟಾವು ಆರಂಭಕ್ಕೆ 15 ದಿನ ಮುನ್ನವೇ ಖರೀದಿ ಕೇಂದ್ರಗಳನ್ನು ತೆರೆಯುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದರು.
ಈ ನಿಟ್ಟಿನಲ್ಲಿ ಈಗಾಗಲೇ ಜಿಲ್ಲೆಗಳಲ್ಲಿ ರೈತರ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಬಳಿಕ ಕೇಂದ್ರದ ನಾಫೆಡ್ ಜತೆ ಚರ್ಚಿಸಿ ಖರೀದಿ ಕೇಂದ್ರ ಆರಂಭಿಸಲಾಗುವುದು ಎಂದರು.