ಹೆಝಲ್‌ ದೇಹ ಸ್ವದೇಶಕ್ಕೆ: ಕೇಂದ್ರ ಸರಕಾರದ ಯತ್ನ


Team Udayavani, Jul 29, 2018, 9:34 AM IST

hazel.jpg

ಶಿರ್ವ: ಸೌದಿ ಅರೇಬಿಯಾದಲ್ಲಿ ಮೃತರಾದ ಕುತ್ಯಾರಿನ ನರ್ಸ್‌ ಹೆಝಲ್‌ ಮೃತದೇಹವನ್ನು ಶೀಘ್ರ ಹುಟ್ಟೂರಿಗೆ ತರಿಸಲು ಕೇಂದ್ರ ಸರಕಾರ ರಾಜತಾಂತ್ರಿಕ ಯತ್ನ ಆರಂಭಿಸಿದೆ. ಇತ್ತ ರಾಜ್ಯ ಎನ್‌ಆರ್‌ಐ ಫೋರಂ ಕೂಡ ತನ್ನದೇ ಯತ್ನಗಳನ್ನು ಆರಂಭಿಸಿದೆ. 
ಅನಂತ್‌, ಸುಷ್ಮಾಗೆ ಮನವಿ ಹೆಝಲ್‌ ಕುಟುಂಬಿಕರು ಈಗಾಗಲೇ ಬಿಜೆಪಿಯ ನವೀನ್‌ ಶೆಟ್ಟಿಯವರ ಮೂಲಕ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ. ಉಡುಪಿ ಸಂಸದರ ಕಚೇರಿಯಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರಿಗೂ ಮಾಹಿತಿ ರವಾನಿಸಲಾಗಿದೆ. ಏತನ್ಮಧ್ಯೆ ಜಿಲ್ಲಾ ಬಿಜೆಪಿ ಪ್ರಮುಖರೂ ದಿಲ್ಲಿಯಲ್ಲಿ ಕೇಂದ್ರ ಸಚಿವ ಅನಂತ ಕುಮಾರ್‌ ಅವರ ಗಮನಕ್ಕೆ ತಂದಿದ್ದು ಸುಷ್ಮಾ ಸ್ವರಾಜ್‌ ಅವರನ್ನು ಭೇಟಿ ಮಾಡಿ ಸೌದಿ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ. ಸೌದಿಯಲ್ಲಿ ವಾರಾಂತ್ಯ ರಜೆ ಇರುವುದರಿಂದ ಪ್ರತಿಕ್ರಿಯೆ ಬರಬೇಕಿದೆ.  

ಮಾನವ ಹಕ್ಕು ಮಾಹಿತಿ…
ಉಡುಪಿ ಜಿಲ್ಲಾಧಿಕಾರಿಗಳು ಮಾನವ ಹಕ್ಕು ಹೋರಾಟಗಾರರಾದ ರವೀಂದ್ರನಾಥ ಶ್ಯಾನುಭೋಗ್‌ ಅವರೊಂದಿಗೆ ಪ್ರಕರಣದ ಬಗ್ಗೆ ಚರ್ಚಿಸಿ ಮಾಹಿತಿ ಬಯಸಿದ್ದಾರೆ. ಶಿರ್ವ ಆರೋಗ್ಯ ಮಾತೆ ಚರ್ಚಿನ ಧರ್ಮಗುರು ರೆ|ಫಾ| ಡೆನ್ನಿಸ್‌ ಡೇಸಾ ಅವರೂ ಹೆಝಲ್‌ ಮನೆಗೆ ತೆರಳಿ ಮಾನವ ಹಕ್ಕು ಹೋರಾಟಗಾರರಿಗೆ ಮಾಹಿತಿ ನೀಡಿದ್ದಾರೆ.

ಸಿಎಂ ಸ್ಪಂದನೆ 
ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಘಟನೆಯನ್ನು ಸಿಎಂ ಕುಮಾರಸ್ವಾಮಿ ಗಮನಕ್ಕೆ ತಂದಿದ್ದಾರೆ. ಕೂಡಲೇ ಸ್ಪಂದಿಸಿದ ಅವರು ಕೇಂದ್ರ ಸರಕಾರ, ಎನ್‌ಆರ್‌ಐ ಫೋರಂನ ಅಧಿಕೃತರೊಂದಿಗೆ ವ್ಯವಹರಿಸಿದ್ದಾರೆ ಎಂದು ಐವನ್‌ ಉದಯವಾಣಿಗೆ ತಿಳಿಸಿದ್ದಾರೆ.

ನೆರವಿಗೆ ಬಂದ ಎನ್‌ಆರ್‌ಐ ಫೋರಂ
ಕರ್ನಾಟಕ ಎನ್‌ಆರ್‌ಐ ಫೋರಂ ನರ್ಸ್‌ ಶವ ರವಾನೆ ಪ್ರಕ್ರಿಯೆಯಲ್ಲಿ ನೆರವಿನ ಹಸ್ತ ಚಾಚಿದೆ. ಸೌದಿ ರಾಯಭಾರ ಕಚೇರಿಗೆ ಪತ್ರ ಬರೆದಿರುವ ಫೋರಂನ ಸದಸ್ಯ ಕಾರ್ಯದರ್ಶಿ ಡಾ| ಕೆ. ಮುರಳೀಧರ ಅವರು ಶೀಘ್ರ ಕ್ರಮಕ್ಕೆ ಕೋರಿದ್ದಾರೆ. ಜತೆಗೆ ಸಂತ್ರಸ್ತ ಕುಟುಂಬಕ್ಕೆ 50000 ರೂ. ಪರಿಹಾರ ಧನವನ್ನು ಫೋರಂ ಮಂಜೂರು ಮಾಡಿದೆ.

ಮುಚ್ಚಿಹೋಗದಿರಲಿ ನಿಗೂಢ ಸಾವು
ವಿದೇಶಿ ನೆಲದಲ್ಲಿ  ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿರುವ ಪ್ರಕರಣಗಳನ್ನು ಆತ್ಮಹತ್ಯೆಯ ತಲೆಬರೆಹ ನೀಡಿ ಮುಚ್ಚಿಹಾಕುವ ಬಗ್ಗೆ ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗಿದೆ. ವಿದೇಶಿ ಸರಕಾರಗಳು ತಮ್ಮ ಘನತೆಗೆ ಕುಂದಾಗುವುದನ್ನು ತಪ್ಪಿಸಲು  ಪ್ರಕರಣ ತಿರುಚುವ ಸಾಧ್ಯತೆ ಬಗ್ಗೆ  ಕೇಳಿಬರುತ್ತಿವೆ. ಈ ಸರಕಾರಗಳು ನೀಡಿದ ತನಿಖಾ ವರದಿ ಒಪ್ಪಿಕೊಳ್ಳಲೇ ಬೇಕಾದ ಅನಿವಾರ್ಯವೂ ಇದೆ. ಈ ಹಿಂದೆ ಲಂಡನ್‌ನಲ್ಲಿ  ನಡೆದ ನರ್ಸ್‌ ಜೆಸಿಂತಾ ಸಾವು ಕೂಡ ನಿಗೂಢವಾಗಿತ್ತು.

ಟಾಪ್ ನ್ಯೂಸ್

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.