ಅಧಿಕಾರಿ ವರ್ತನೆಗೆ ಬೇಸತ್ತು ಸಭೆಯಲ್ಲೇ ಕಣ್ಣೇರಿಟ್ಟ ಅಧ್ಯಕ್ಷೆ 


Team Udayavani, Jul 29, 2018, 5:12 PM IST

29-july-22.jpg

ಬೀಳಗಿ: ಯಾವುದೇ ಕೆಲಸ ಮಾಡಬೇಕಾದರೂ ಮತ್ತು ಕೆಲಸದ ಬಿಲ್‌ ತೆಗೆಯಬೇಕಾದರೂ ನಾನು ಅಧ್ಯಕ್ಷೆ ಇದ್ದೇನೆ ಎನ್ನುವ ಸೌಜನ್ಯಕ್ಕಾದರೂ ಒಂದು ಮಾತು ಕೇಳದೆ ಪಪಂ ಜೆಇ ಎ.ಎಂ.ಕೊಡಕೇರಿ ತಮ್ಮ ಮನಸ್ಸಿಗೆ ಬಂದಂತೆ ವರ್ತಿಸುತ್ತಾರೆ. ಈ ಕುರಿತು ಮೇಲಧಿಕಾರಿಗಳಿಗೆ ದೂರು ಕೂಡ ನೀಡಿರುವೆ. ಅಧಿಕಾರಿಗಳ ಈ ರೀತಿಯ ವರ್ತನೆ ತಮಗೆ ತುಂಬಾ ಬೇಸರ ತರಿಸಿದೆ ಎಂದು ಪಪಂ ಅಧ್ಯಕ್ಷೆ ಕಸ್ತೂರೆವ್ವ ಮಾದರ ಶನಿವಾರ ನಡೆದ ಪಪಂ ಸಾಮಾನ್ಯ ಸಭೆಯಲ್ಲಿಯೇ ಕಣ್ಣೀರಿಟ್ಟ ಪ್ರಸಂಗ ಜರುಗಿದೆ.

ಅಧ್ಯಕ್ಷೆ ಪಪಂ ಜೆಇ ಅವರನ್ನು ತೀವ್ರ ತರಾಟೆ ಕೂಡ ತೆಗೆದುಕೊಂಡು 2017-18 ನೇ ಸಾಲಿನ 5 ಕೋಟಿ ವಿಶೇಷ ಅನುದಾನದಲ್ಲಿ ಗುತ್ತಿಗೆದಾರರಿಗೆ 1.60 ಕೋಟಿ ಬಿಲ್‌ ಬಟವಡೆ ಮಾಡಿದ್ದಾರೆ. ಆದರೆ, ಗುತ್ತಿಗೆದಾರರಿಗೆ ಈ ಬಿಲ್‌ ಸಂದಾಯ ಮಾಡಬೇಕಾದರೆ ಅಧ್ಯಕ್ಷರ ಗಮನಕ್ಕೆ ತಂದಿಲ್ಲ. 1.60 ಕೋಟಿ ಬಿಲ್‌ ಹಣವನ್ನು ಜೆಇ ಕೊಡಕೇರಿ ಗುತ್ತಿಗೆದಾರರಿಗೆ ನೀಡಿದ್ದಾರೆ. ಅವರು ಬಿಲ್‌ ನೀಡಿರುವುದು ತಪ್ಪು ಎಂದು ನಾನು ವಾದಿಸಲಾರೆ. ಆದರೆ, ಒಂದು ಉನ್ನತ ಹುದ್ದೆಯಲ್ಲಿರುವ ಪಪಂ ಅಧ್ಯಕ್ಷರ ಗಮನಕ್ಕೆ ತರದೆ ಇಷ್ಟೊಂದು ಮೊತ್ತದ ಹಣ ಬಟವಡೆ ಮಾಡುವುದು ಕಾನೂನು ಬಾಹಿರ ಎನ್ನುವುದು ನಮ್ಮ ನಿಲುವು. 

ಈ ಕುರಿತು ಈಗಾಗಲೇ ಸೂಕ್ತ ತನಿಖೆ ಕೈಗೊಳ್ಳುವಂತೆ ಬಾಗಲಕೋಟೆಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್‌ ಇನ್ಸಪೆಕ್ಟರ್‌ ಅವರಿಗೆ ದೂರು ಸಲ್ಲಿಸಿದ್ದೇನೆ. ಎಸ್‌ಸಿ ವರ್ಗಕ್ಕೆ ಸೇರಿದ ಮಹಿಳೆ ಎನ್ನುವ ಕಾರಣಕ್ಕೆ ಪಪಂ ಕಿರಿಯ ಅಭಿಯಂತರ ಈ ರೀತಿ ಬೇಕು ಅಂತಲೇ ನಮ್ಮ ಹುದ್ದೆಗೆ ಗೌರವ ನೀಡದೆ ಅವಮಾನಿಸುತ್ತಿದ್ದಾರೆ ಎಂದು ಕೂಡ ದೂರಿನಲ್ಲಿ ಉಲ್ಲೇಖೀಸಿರುವೆ ಎಂದು ಅಧ್ಯಕ್ಷೆ ಕಸ್ತೂರೆವ್ವ ಮಾದರ ಸಭೆಯ ಗಮನಕ್ಕೆ ತಂದರು. ಅಧ್ಯಕ್ಷೆ ಕಸ್ತೂರೆವ್ವ ಮಾದರ ಕಣ್ಣೀರು ಹಾಕುತ್ತ ಜೆಇ ಅವರ ವಿರುದ್ಧ ಹರಿಹಾಯ್ದರು. ಈ ಪ್ರಸಂಗವನ್ನು ಕಂಡ ಸಭೆಯಲ್ಲಿನ ಎಲ್ಲ ಸದಸ್ಯರೂ ಅಧ್ಯಕ್ಷೆ ಕಸ್ತೂರೆವ್ವ ಮಾದರ ಅವರಿಗೆ ಕಣ್ಣೀರು ಏಕೆ ಹಾಕುತ್ತೀರಿ ಸುಮ್ಮನಿರಿ ಎಂದು ಸಮಾಧಾನ ಪಡಿಸಿದರು. ಈ ಕುರಿತು ಪಪಂ ಜೆಇ ಎ.ಎಂ.ಕೊಡಕೇರಿ ಯಾವುದೇ ಪ್ರತಿಕ್ರಿಯೆ ನೀಡದೆ ಜಾರಿಕೊಂಡ ನಡೆ ಅಧ್ಯಕ್ಷರ ಆಕ್ರೋಶ ಹಾಗೂ ಆರೋಪಕ್ಕೆ ಪುಷ್ಟಿ ನೀಡಿತು. ಸಭೆಯಲ್ಲಿ ಯಾವುದೇ ಮಹತ್ವದ ಚರ್ಚೆ ನಡೆಯಲಿಲ್ಲ. ಪ್ರಸಕ್ತ ಸಾಲಿನ ಜಮೆ-ಖರ್ಚು ವಿವರವನ್ನು ಸಭೆಯಲ್ಲಿ ಸಾದರ ಪಡಿಸಲಾಯಿತು.

ಉಪಾಧ್ಯಕ್ಷೆ ಇಂದ್ರವ್ವ ಕೌಲಗಿ, ಮುಖ್ಯಾಧಿಕಾರಿ ದೇವೇಂದ್ರ ಧನಪಾಲ, ಸದಸ್ಯರಾದ ಗುರಪ್ಪ ಮೋದಿ, ಸಂಗಪ್ಪ ಕಟಗೇರಿ, ಪಡಿಯಪ್ಪ ಕರಿಗಾರ, ಅಬ್ದುಲ್‌ ರೆಹಮಾನ್‌ ಬಾಗವಾನ್‌, ಕವಿತಾ ಬಾಗೇವಾಡಿ ಇತರರು ಇದ್ದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.