ಗ್ರಾ.ಪಂ. ತೆರಿಗೆ ಸಂಗ್ರಹ: ದ.ಕ. ರಾಜ್ಯಕ್ಕೆ ಪ್ರಥಮ


Team Udayavani, Jul 30, 2018, 11:43 AM IST

tax1.jpg

ಮಂಗಳೂರು: ವಿದ್ಯುತ್‌ ಬಿಲ್‌ ಪಾವತಿಯಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆ ಗ್ರಾ. ಪಂ. ತೆರಿಗೆ ಸಂಗ್ರಹಣೆಯಲ್ಲಿಯೂ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಜಿಲ್ಲಾ ವ್ಯಾಪ್ತಿಯ ಗ್ರಾ. ಪಂ.ಗಳು ತೆರಿಗೆ ಸಂಗ್ರಹದಲ್ಲಿ ಶೇ.68.34ರಷ್ಟು ಗುರಿ ಸಾಧಿಸಿ ರಾಜ್ಯಕ್ಕೆ ಮಾದರಿ ಎನಿಸಿವೆ. ಶೇ.65.44ರಷ್ಟು ತೆರಿಗೆ ಸಂಗ್ರಹಿಸಿ ಉತ್ತರ ಕನ್ನಡ ಜಿಲ್ಲೆ ದ್ವಿತೀಯ ಹಾಗೂ ಶೇ.51.04ರಷ್ಟು ತೆರಿಗೆ ಸಂಗ್ರಹಿಸಿ ಉಡುಪಿ ಜಿಲ್ಲೆ ತೃತೀಯ ಸ್ಥಾನದಲ್ಲಿವೆ. ರಾಜ್ಯದಲ್ಲಿ ತೆರಿಗೆ ವಸೂಲಿ ಮಾಡಿ ಆರ್ಥಿಕ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಗ್ರಾ. ಪಂ.ಗಳು ಅಸಡ್ಡೆ ತೋರುತ್ತಿರುವ ಆರೋಪ ಕೇಳಿ ಬರುತ್ತಿರುವಾಗಲೇ ಕರಾವಳಿ ಭಾಗದಲ್ಲಿ ಗ್ರಾ.ಪಂ. ತೆರಿಗೆ ಸಂಗ್ರಹ ದಾಖಲೆ ಮಟ್ಟದಲ್ಲಿ ಸಂಗ್ರಹವಾಗಿರುವುದು ವಿಶೇಷ. 

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಕಾಯ್ದೆ 1993 ಯ‌ನ್ವಯ ಗ್ರಾ. ಪಂ.ಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಕೃಷಿಯೇತರ ಆಸ್ತಿಗಳ ಮೇಲೆ ತೆರಿಗೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಗ್ರಾ.ಪಂ.ಗಳು ತಮ್ಮ ಸ್ವಂತ ಸಂಪನ್ಮೂಲಗಳನ್ನು ಕ್ರೋಡೀಕರಿಸಿ  ಸ್ವಾವಲಂಬಿಗಳಾಗಬೇಕು ಎಂಬುದು ಸರಕಾರದ ಆಶಯ. ಆದರೆ ಹೆಚ್ಚಿನ ಗ್ರಾ.ಪಂ.ಗಳು ತಮಗೆ ನೀಡಲಾದ ಅಧಿಕಾರವನ್ನು ಸಮರ್ಪಕವಾಗಿ ಬಳಸಿಕೊಳ್ಳದೆ ತೆರಿಗೆ ನಿರ್ಧರಣೆ, ಪರಿಷ್ಕರಣೆ ಹಾಗೂ ವಸೂಲಾತಿಯಲ್ಲಿ ನಿರ್ಲಕ್ಷ್ಯವಹಿಸಿದ್ದವು. 

ದ. ಕನ್ನಡ ಜಿಲ್ಲೆಯ ಒಟ್ಟು 230 ಗ್ರಾ. ಪಂ.ಗಳಿಂದ 2017-18ರಲ್ಲಿ 26.59 ಕೋ.ರೂ ತೆರಿಗೆ ಸಂಗ್ರಹವಾಗಿದ್ದು 12.31 ಕೋ.ರೂ ಸಂಗ್ರಹಕ್ಕೆ ಬಾಕಿ ಇದೆ. ಉಡುಪಿಯಲ್ಲಿ 15.36 ಕೋ.ರೂ. ಸಂಗ್ರಹವಾಗಿದ್ದು, 14.73 ಕೋ. ರೂ. ಬಾಕಿ ಇದೆ. ಇದು ಉಳಿದ ಜಿಲ್ಲೆಗಳಿಗಿಂತ ಹೆಚ್ಚು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆ ತಿಳಿಸಿದೆ. 

ಕಲಬುರಗಿಗೆ ಕೊನೆಯ ಸ್ಥಾನ 
ಕಲಬುರಗಿ ಜಿಲ್ಲೆಯ 264 ಗ್ರಾ.ಪಂ. ಗಳಿಂದ 9.17 ಕೋ.ರೂ. ನಿರೀಕ್ಷೆ ಇರಿಸಲಾಗಿದ್ದು, ಸಂಗ್ರಹವಾಗಿರುವುದು 12.89 ಲಕ್ಷ ರೂ. ಮಾತ್ರ. ಬೀದರ್‌ ಜಿಲ್ಲೆಯ 185 ಗ್ರಾ.ಪಂ.ಗಳಿಂದ 5.94 ಕೋ.ರೂ ಸಂಗ್ರಹವಾಗಬೇಕಿದ್ದರೂ ಕೇವಲ 55.96 ಲಕ್ಷ ರೂ. ಸಂಗ್ರಹವಾಗಿದೆ. ಯಾದಗಿರಿಯಲ್ಲಿ 123 ಗ್ರಾ.ಪಂ.ಗಳಿಂದ 3.55 ಕೋ.ರೂ. ನಿರೀಕ್ಷೆಯಲ್ಲಿ 76.93 ಲಕ್ಷ ರೂ. ಮಾತ್ರ ಸಂಗ್ರಹವಾಗಿದೆ. 

ತೆರಿಗೆ ಪರಿಷ್ಕರಣೆ ಕುಸಿತ 
ರಾಜ್ಯದಲ್ಲಿ ಒಟ್ಟು 6,024 ಗ್ರಾ. ಪಂ.ಗಳು ಕಾರ್ಯನಿರ್ವಹಿಸುತ್ತಿವೆ. ತೆರಿಗೆ ಸಂಗ್ರಹಣೆಗೆ ವಿಶೇಷ ಒತ್ತು ನೀಡುವುದಕ್ಕಾಗಿ ತೆರಿಗೆ ಪರಿಷ್ಕರಣೆಗೆ ಗ್ರಾ.ಪಂ.ಗಳಿಗೆ ಅಧಿಕಾರ ನೀಡಲಾಗಿತ್ತು. ಆದರೆ ಬಹುತೇಕ ಗ್ರಾ.ಪಂ.ಗಳು ಈ ಅಧಿಕಾರವನ್ನೂ ಬಳಸಿಕೊಂಡಿಲ್ಲ ಎಂಬ ಆರೋಪವಿದೆ. 2015ನೇ ಸಾಲಿನಲ್ಲಿ ತಿದ್ದುಪಡಿ ತಂದಿದ್ದರೂ 1,421 ಗ್ರಾ.ಪಂ.ಗಳು ಮಾತ್ರ ತೆರಿಗೆ ಪರಿಷ್ಕರಣೆ ಮಾಡಿವೆ. ದ.ಕ. ಜಿಲ್ಲೆಯ 96, ಉ.ಕ. ಜಿಲ್ಲೆಯ 128, ಉಡುಪಿ ಜಿಲ್ಲೆಯ 88, ಬೆಂಗಳೂರು ನಗರದ 71, ಕೊಡಗು ಜಿಲ್ಲೆಯ 37 ಗ್ರಾ.ಪಂ.ಗಳು ತೆರಿಗೆ ಪರಿಷ್ಕರಣೆಯನ್ನು ಕಳೆದ 4 ವರ್ಷಗಳಲ್ಲಿ ಮಾಡಲೇ ಇಲ್ಲ. ಬೆಳಗಾವಿಯ 417, ತುಮಕೂರಿನ 273, ಮಂಡ್ಯದ 216, ಕಲಬುರಗಿಯ 211 ಗ್ರಾ.ಪಂ.ಗಳು ಕೂಡ ತೆರಿಗೆ ಪರಿಷ್ಕರಣೆ ಮಾಡಿಲ್ಲ.

*ದಿನೇಶ್‌ ಇರಾ

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.