ಜಂಕ್‌ಫ‌ುಡ್‌ನಿಂದ ಮಾನವ ಸಂಕುಲ ನಿರ್ನಾಮ


Team Udayavani, Jul 30, 2018, 12:17 PM IST

junk-food.jpg

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆಹಾರ ಪದ್ಧತಿ ಸಂಪೂರ್ಣ ಬದಲಾಗಿದ್ದು, ಜಂಕ್‌ಫ‌ುಡ್‌ ಮಾನವ ಸಂಕುಲವನ್ನು ನಿರ್ನಾಮ ಮಾಡುತ್ತಿದೆ ಎಂದು ಲೇಖಕ ನಾ.ಸೋಮೇಶ್ವರ ತಿಳಿಸಿದ್ದಾರೆ.

ನವ ಕರ್ನಾಟಕ ಪ್ರಕಾಶನ ಹಾಗೂ ಇಜ್ಞಾನ ಟ್ರಸ್ಟ್‌ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಭಾನುವಾರ ಆಯೋಜಿಸಿದ್ದ “ಕನ್ನಡ ನೆಲ-ಜಲ: ನಾಳಿನ ಅರಿವು’ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ಪೀಳಿಗೆಯ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಸಾಕಷ್ಟು ವ್ಯತ್ಯಾಸಗಳಾಗಿದೆ.

ಸಿರಿಧಾನ್ಯಗಳ ಜಾಗವನ್ನು ಜಂಕ್‌ಫ‌ುಡ್‌ ಆವರಿಸಿದ್ದು, ಜಂಕ್‌ಫ‌ುಡ್‌ಗಳಲ್ಲಿ ಯಾವ ಪೌಷ್ಠಿಕಾಂಶವಾಗಲಿ, ನಾರಿನ ಅಂಶವಾಗಲಿ ಇರುವುದಿಲ್ಲ. ಆದರೂ ಜನ ಅದಕ್ಕೆ ಮುಗಿಬಿದ್ದು ಸೇವಿಸುತ್ತಿದ್ದಾರೆ. ಈ ಬದಲಾವಣೆಯಿಂದ ಮಾನವನ ಜೀವಿತಾವಧಿ ಕಡಿಮೆಯಾಗುತ್ತಿದೆ ಎಂದು ಹೇಳಿದರು.

ಸಾಕಷ್ಟು ಆಹಾರ ತಯಾರಿಕಾ ಕಂಪನಿಗಳು ವಿಷಪೂರಿತ ಜಂಕ್‌ಫ‌ುಡ್‌ಗಳನ್ನು ತಯಾರಿಸುತ್ತಿವೆ. ಇವುಗಳಿಂದ ಭಾರತೀಯ ಸಂಸ್ಕೃತಿಯ ಹಾಗೂ ಆಹಾರ ಪದ್ಧತಿ ನಿರ್ನಾಮವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಮಾಜಿ ಕಾರ್ಯಕಾರಿ ಅಧ್ಯಕ್ಷ ವೈ.ಬಿ.ರಾಮಕೃಷ್ಣ ಮಾತನಾಡಿ, ಕೆಲವು ದಶಕಗಳಿಂದ ಇಂಧನ ಮೂಲಗಳು ಕ್ಷೀಣವಾಗುತ್ತಿದ್ದು, ಬಳಕೆಯ ಪ್ರಮಾಣ ಮಾತ್ರ ಹೆಚ್ಚುತ್ತಿದೆ.

ಪ್ರಕೃತಿ ಹಾಗೂ ಮನುಷ್ಯರಿಗೆ ಮಾರಕವಾಗದ ಸುಸ್ಥಿರ ಮಾದರಿಯಲ್ಲಿ ಜೈವಿಕ ಇಂಧನ ಉತ್ಪಾದನೆಗೆ ಮುಂದಾದರೆ ಗ್ರಾಮೀಣ ಸಮುದಾಯಕ್ಕೆ ಶುದ್ಧ ಇಂಧನ ಹಾಗೂ ಉದ್ಯೋಗಾವಕಾಶ ಒದಗಿಸಬಹುದು.

ಅಲ್ಲದೇ ಭೂಮಿಯನ್ನು ಜೈವಿಕ ಇಂಧನ ಉತ್ಪಾದನೆಗೆ ಬಳಸುವುದರಿಂದ ಸಣ್ಣ ಹಿಡುವಳಿದಾರರಿಗೆ ಪ್ರಯೋಜನವಾಗಲಿದೆ. ಈ ನಿಟ್ಟಿನಲ್ಲಿ ಒಂದಷ್ಟು ಉತ್ಕೃಷ್ಟ ಸಂಶೋಧನೆಗಳಾಗಬೇಕು ಎಂದರು. ಪರಿಸರವಾದಿ ಎಚ್‌.ಎನ್‌.ಎ. ಪ್ರಸಾದ್‌ ಮಾತನಾಡಿದರು.

ಇಜ್ಞಾನ ಟ್ರಸ್ಟ್‌ ವತಿಯಿಂದ ಕಲಿಕೆಗೆ ಕೊಡುಗೆ ಯೋಜನೆಯ ಅಡಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಈ ವೇಳೆ ಲೇಖಕ ಟಿ.ಎಸ್‌.ಗೋಪಾಲ್‌ ಅವರ ಜ್ಞಾನಪೀಠಕ್ಕೆ  ಮೆರಗು ಕನ್ನಡದ ಬೆಡಗು ಸೇರಿದಂತೆ ಕೆಲವು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.