ಶಿವಸಿಂಪಿ ಸಮಾಜದ ಹಾಸ್ಟೆಲ್‌, ಸಮುದಾಯ ಭವನಕ್ಕೆ ಅನುದಾನ


Team Udayavani, Jul 30, 2018, 3:23 PM IST

dvg-2.jpg

ದಾವಣಗೆರೆ: ಶಿವಸಿಂಪಿ ಸಮಾಜದ ಹಾಸ್ಟೆಲ್‌, ಸಮುದಾಯ ಭವನಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಭರವಸೆ ನೀಡಿದ್ದಾರೆ. ಭಾನುವಾರ ಶಿವಯೋಗಿ ಮಂದಿರದಲ್ಲಿ ದಾವಣಗೆರೆ ಜಿಲ್ಲಾ ಶಿವಸಿಂಪಿ ಸಮಾವೇಶ, ಕುಲಗುರು ಶರಣ ಶಿವದಾಸಿಮಯ್ಯ ಜಯಂತ್ಯುತ್ಸವ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣದ ಮೂಲಕ ಏನನ್ನಾದರೂ ಸಾಧಿಸಲು ಸಾಧ್ಯ. ಶಿವಸಿಂಪಿ ಸಮಾಜದವರು ಹಾಸ್ಟೆಲ್‌, ಸಮುದಾಯ ಭವನ ಮಾಡಿದರೆ ಅಗತ್ಯ ಅನುದಾನ ನೀಡುವುದಾಗಿ ಹೇಳಿದರು.

ಸಾಕ್ಷಾತ್‌ ಶಿವನಿಗೇ ಬಟ್ಟೆ ಹೊಲಿದು ಕೊಟ್ಟಿರುವ ಇತಿಹಾಸ ಹೊಂದಿರುವ ಶಿವಸಿಂಪಿ ಸಮಾಜ ಬಾಂಧವರು ಹಿಂದಿನಿಂದಲೂ ಬಟ್ಟೆ ಹೊಲೆಯುವ ವೃತ್ತಿ ಮಾಡುತ್ತಿದ್ದವರು. ಅವರಿಂದಲೇ ಬಟ್ಟೆ ಹೊಲಿಸುವುದೂ ಇತ್ತು. ಕಾಲಾನುಕ್ರಮೇಣ ಬೇರೆ ಬೇರೆ ವೃತ್ತಿ, ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದಿನ ಸಮಾಜದಲ್ಲಿ ಅಭಿವೃದ್ಧಿ ಆಗಬೇಕು ಎಂದಾದರೆ ಶಿಕ್ಷಣ ಅತಿ ಮುಖ್ಯ. ಹಾಗಾಗಿ ಶಿವಸಿಂಪಿ ಸಮಾಜದವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು. 

ದೇಶದ ರಾಷ್ಟ್ರಪತಿಗಳಾಗಿದ್ದ ಅಬ್ದುಲ್‌ ಕಲಾಂರವರು ಬಡತನದಲ್ಲಿ ಬೆಳೆದವರು. ಬೀದಿ ದೀಪದ ಬೆಳಕಿನಲ್ಲಿ ಓದಿ, ಮುಂದೆ ದೊಡ್ಡ ವಿಜ್ಞಾನಿಯಾದವರು. ಪ್ರಧಾನಿ ನರೇಂದ್ರ ಮೋದಿಯವರು ಸಹ ಬಡ ಕುಟುಂಬದಿಂದ ಬಂದವರು. ಅವರ ತಾಯಿ ಬೇರೆಯವರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಮೋದಿ ಅವರು ರೈಲ್ವೆ ನಿಲ್ದಾಣದಲ್ಲಿ ಚಹಾ ಮಾರುತ್ತಿದ್ದವರು. ಶಿಕ್ಷಣದ ಮೂಲಕ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಬಡತನ, ಸಿರಿತನ ಶಾಶ್ವತ ಅಲ್ಲ, ವಿದ್ಯೆಯೇ ಶಾಶ್ವತ ಎಂದು ತಿಳಿಸಿದರು. 

ಉಪನ್ಯಾಸ ನೀಡಿದ ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಎಂ. ಕೊಟ್ರೇಶ್‌, ಶಿವದಾಸಿಮಯ್ಯನವರೇ ಶಿವಸಿಂಪಿ ಸಮಾಜದ ಕುಲಗುರು ಎನ್ನುವುದಕ್ಕೆ ಸಾಕ್ಷ್ಯ ದೊರೆತಿದೆ. ಶಿವದಾಸಿಮಯ್ಯ ನಮ್ಮ ಸಮಾಜದ ಕುಲಗುರು ಎಂದು ಸಾಬೀತುಪಡಿಸುವ 16ನೇ ಶತಮಾನ ಹಸ್ತಪ್ರತಿ ದೊರೆತಿದೆ. ಆ ಪ್ರಕಾರ ಶಿವದಾಸಿಮಯ್ಯ ಬಸವಪೂರ್ವ ಅಂದರೆ 11ನೇ ಶತಮಾನದವರು. ವೇದಗಳಲ್ಲೂ ಚಿಂಪಿಗರು… ಎನ್ನುವ ಉಲ್ಲೇಖ ಇದೆ. ಇದು ನಮ್ಮ ಸಮಾಜಕ್ಕೆ ಹೆಮ್ಮೆಯ ವಿಚಾರ. ಈ ಎಲ್ಲ ವಿಚಾರಗಳ ಆಧಾರವಾಗಿಟ್ಟುಕೊಂಡು ಶಿವದಾಸಿಮಯ್ಯನವರ ಕುರಿತಾಗಿ ಹೊಸ ಚರಿತ್ರೆಯ ಕಟ್ಟಬೇಕಾಗಿದೆ ಎಂದರು.

ನಾಗರಿಕತೆಯ ಹುಟ್ಟಿನೊಂದಿಗೆ ಕಂಡು ಬರುವ ಶಿವಸಿಂಪಿ ಸಮಾಜದ ಕುಲಗುರು ಶಿವದಾಸಿಮಯ್ಯನವರ ಜಯಂತಿ ಸರ್ಕಾರ ಮಾಡಬೇಕು ಎಂದು ಭಿಕ್ಷೆ ಬೇಡುವ ಅಗತ್ಯ ಇಲ್ಲ. ಸರ್ಕಾರವೇ ಮುಂದಾಗಿ ಶಿವದಾಸಿಮಯ್ಯನವರ ಜಯಂತಿ ಉತ್ಸವವನ್ನು ರಾಷ್ಟ್ರೀಯ ಉತ್ಸವವನ್ನಾಗಿ ಮಾಡಬೇಕು. ಶಿವಸಿಂಪಿ ಸಮಾಜವನ್ನು ಪ್ರವರ್ಗ2 ಎ ಅಡಿ ಸೇರಿಸುವ ಮೂಲಕ ಸರ್ಕಾರ ಅನುಕೂಲ ಮಾಡಿಕೊಡಬೇಕು ಎಂದು ಆಶಿಸಿದರು. 

ದಾವಣಗೆರೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯ, ಶಿವಸಿಂಪಿ ಸಮಾಜದ ಜಿಲ್ಲಾ ಅಧ್ಯಕ್ಷ ಗುರುಬಸಪ್ಪ ಬೂಸ್ನೂರ್‌ ಅಧ್ಯಕ್ಷತೆ ವಹಿಸಿದ್ದರು. ಪ್ರೊ| ಮಲ್ಲಿಕಾರ್ಜುನ್‌ ಪ್ರಸ್ತಾವಿಕ ಮಾತುಗಳಾಡಿದರು. ಶಾಸಕ ಎಸ್‌.ಎ. ರವೀಂದ್ರನಾಥ್‌, ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌, ಯುವ ಮುಖಂಡ ಎಚ್‌.ಎಸ್‌. ನಾಗರಾಜ್‌, ಚಿಂದೋಡಿ ಚಂದ್ರಧರ್‌, ಜಗದೀಶ್‌ ಬಾವಿಕಟ್ಟಿ, ಎಸ್‌. ಷಣ್ಮುಖಪ್ಪ, ವಸಂತ್‌ಕುಮಾರ್‌, ಪಿ.ಎಸ್‌. ಲಕ್ಕುಂಡಿ, ಇ.ಸಿ.ಎಸ್‌. ಮೂರ್ತಿ, ಎಸ್‌.ಡಿ. ಕೊಟ್ರೇಶ್‌, ಮೂರಲ್‌ ರಾಜು, ಲೋಕೇಶ್‌, ಉಮಾಪತಿ ಇತರರು ಇದ್ದರು. ಸುಜಾತ
ಬೂಸ್ನೂರ್‌ ಪ್ರಾರ್ಥಿಸಿದರು. ಜ್ಞಾನೇಶ್ವರ್‌ ಜವಳಿ ನಿರೂಪಿಸಿದರು. ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಸನ್ಮಾನ ನಡೆಯಿತು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.