ತುಂಬಿದ ಭದ್ರೆಗೆ ಶಾಸಕರಿಂದ ಬಾಗಿನ


Team Udayavani, Jul 30, 2018, 3:39 PM IST

dvg-4.jpg

ಭದ್ರಾವತಿ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉತ್ತಮ ಮಳೆಯಾಗುತ್ತಿದ್ದು ಎಲ್ಲಾ ಜಲಾಶಯಗಳು ಭರ್ತಿಯಾಗಿವೆ ಎಂದು ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು. ಅವರು ಭಾನುವಾರ ಭದ್ರಾ ಜಲಾಶಯದ ಅತಿಥಿ ಗೃಹದ ಮುಂಭಾಗದಲ್ಲಿ ನಡೆದ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ
ಭಾಗವಹಿಸಿ ಮಾತನಾಡಿದರು.

 ಸತತ ಮೂರು ವರ್ಷಗಳ ಮಳೆ ಕೊರತೆಯಿಂದಾಗಿ ಜಲಾಶಯಗಳು ಭರ್ತಿಯಾಗಿರಲಿಲ್ಲ. ಆದರೆ ಈ ಬಾರಿ
ಉತ್ತಮ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿದ್ದು ರೈತರ ಮುಖದಲ್ಲಿ ಸಂತಸ ಕಾಣುವಂತಾಗಿದೆ. ಬೆಂಗಳೂರಿನಲ್ಲಿ ಜಲ ಸಂಪನ್ಮೂಲ ಸಚಿವರೊಂದಿಗೆ ನಡೆದ ಸಭೆಯಲ್ಲಿ ಇಲ್ಲಿನ ಶಾಸಕ ಬಿ.ಕೆ. ಸಂಗಮೇಶ್‌ ಸಹ ಪಾಲ್ಗೊಂಡಿದ್ದು ಭದ್ರಾ ಜಲಾಶಯದಿಂದ ನಿರಂತರವಾಗಿ ಕಾಲುವೆಗಳಿಗೆ ನೀರು ಹರಿಸಲು ಸರ್ಕಾರ ಸಮ್ಮತಿ ನೀಡಿದೆ. ಪ್ರತೀ ವರ್ಷ ಇದೇ ರೀತಿ ಉತ್ತಮ ಮಳೆಯಾಗಿ ನಾವೆಲ್ಲರೂ ಜಂಟಿಯಾಗಿ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸುವಂತಾಗಲಿ ಎಂದರು.

ಹರಿಹರದ ಶಾಸಕ ರಾಮಪ್ಪ ಮಾತನಾಡಿ, ಈ ಜಲಾಶಯದಲ್ಲಿ ಅಪಾರ ಪ್ರಮಾಣದ ನೀರನ್ನು ನೋಡಲು ಬರುವ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಯನ್ನು ಮಾಡಿಲ್ಲ. ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತದೆ. ಈ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕು ಎಂದರು.

ಜಲಾಶಯದ ಪರಿಸರವನ್ನು ಇನ್ನಷ್ಟು ಆಧುನೀಕರಣಗೊಳಿಸಿ ವಿಶ್ವೇಶ್ವರಯ್ಯನವರ ನೆನಪಿಗಾಗಿ ಅವರ ಪುತ್ಥಳಿಯನ್ನು ಇಲ್ಲಿ ಪ್ರತಿಷ್ಠಾಪಿಸಬೇಕು ಎಂದರು. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ ಕ್ಷೇತ್ರದ ಜೀವನದಿ ಭದ್ರೆಗೆ ಕ್ಷೇತ್ರದ ನಾಗರಿಕರು, ಬೆಂಬಲಿಗರು ಹಾಗೂ ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.

 ಬಾಗಿನ ಸಮರ್ಪಿಸಿ ಮಾತನಾಡಿದ ಅವರು, ನನ್ನನ್ನು ಕ್ಷೇತ್ರದ ಜನತೆ ಶಾಸಕನಾಗಿ ಆರಿಸಿದಾಗಲೆಲ್ಲ ಮಳೆ ಉತ್ತಮವಾಗಿ ಆಗಿ ಭದ್ರಾ ಜಲಾಶಯ ತುಂಬಿದೆ. ನಾನು ಸೋತಾಗ ಜಲಾಶಯ ತುಂಬಿಲ್ಲ. ನಾನು 3ಬಾರಿ ಶಾಸಕನಾದಾಗಾಲೂ ಸಹ ತುಂಬಿದೆ ಎಂದರು.

ತಾವು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿಲ್ಲ. ಆದರೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೇನೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಕ್ಷೇತ್ರದ ಜನತೆಯ ಆಶೀರ್ವಾದದಿಂದ ನಾನು ಮಂತ್ರಿಯಾಗುವ ನಂಬಿಕೆ ಇದೆ. ಕಾಂಗ್ರೆಸ್‌ ಹೈಕಮಾಂಡ್‌ಗೆ ತಮಗೆ ಸಚಿವ ಸ್ಥಾನ ನೀಡುವ ಸಂಬಂಧ ಈಗಾಗಲೇ ಮನವರಿಕೆ ಮಾಡಲಾಗಿದೆ. ಶ್ರಾವಣ ಮಾಸದಲ್ಲಿ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದ್ದು, ತಮಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಶಾಸಕ ಬಿ.ಕೆ. ಸಂಗಮೇಶ್‌ ದೋಣಿಯಲ್ಲಿ ಭದ್ರಾ ಜಲಾಶಯದ ಮಧ್ಯಭಾಗಕ್ಕೆ ತೆರಳಿ ಬಾಗಿನ ಅರ್ಪಿಸಿದರು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಅಶೋಕ ನಾಯ್ಕ ಮಾತನಾಡಿ, ಭದ್ರಾ ಜಲಾಶಯ ದಾವಣಗೆರೆ, ಶಿವಮೊಗ್ಗ ಕ್ಷೇತ್ರದ ಜನರ ಜೀವನದ ಅವಿಭಾಜ್ಯ ಅಂಗದಂತಾಗಿದ್ದು ಈ ಜಲಾಶಯ ತುಂಬಿರುವುದು ಕ್ಷೇತ್ರದ ಜನತೆ ಹಾಗೂ ರೈತರಿಗೆ ಬಹಳ ಸಂತಸ ತಂದಿದೆ ಎಂದರು.

ವೇದಿಕೆಯಲ್ಲಿ ಏಕೈಕ ಬಿಜೆಪಿ ಶಾಸಕ: ಕಾಂಗ್ರೆಸ್‌ ಶಾಸಕ ಬಿ.ಕೆ.ಸಂಗಮೇಶ್‌ ಏರ್ಪಡಿಸಿದ್ದ ಬಾಗಿನ ಸಮರ್ಪಣೆಯ
ವೇದಿಕೆ ಕಾರ್ಯಕ್ರಮದಲ್ಲಿ ದಾವಣಗೆರೆ, ಹರಿಹರ ಕ್ಷೇತ್ರದ ಕಾಂಗ್ರೆಸ್‌ ಶಾಸಕರು ಭಾಗವಹಿಸಿದ್ದರು. ಹಾಗಾಗಿ ಭಾಷಣ
ಮಾಡಿದ ಪ್ರತಿಯೊಬ್ಬರೂ ತಮ್ಮ ಭಾಷಣದಲ್ಲಿ ವೇದಿಕೆ ಮೇಲಿರುವ ಕಾಂಗ್ರೆಸ್‌ ಪಕ್ಷದ ಶಾಸಕರೇ, ನಾಯಕರೇ
ಎಂದು ಭಾಷಣ ಮಾಡುತ್ತಿದ್ದರು. 

ಆದರೆ ವೇದಿಕೆಯಲ್ಲಿ ಉಪಸ್ಥಿತರಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಅಶೋಕ ನಾಯ್ಕ ಅವರು ಯಾವಾಗ
ಕಾಂಗ್ರೆಸ್‌ ಸೇರಿದರೆಂದು ಜನರ ಮಾತನಾಡಿಕೊಳ್ಳುತ್ತಿದ್ದರು. ಸ್ವಾಮೀಜಿಗಳಾದ ಸಿದ್ಧರಾಮೇಶ್ವರ, ಲಕ್ಷ್ಮಣಾರ್ಯ ಹಾಗೂ ಕೃಷ್ಣ ಮೂರ್ತಿ ಸೋಮಯಾಜಿ, ಮೌಲಾನಾ ಸಿದ್ದಿಕ್‌, ಡೆವಿಡಾನ್‌, ಮಾಜಿ ಶಾಸಕ ರಾಜೇಶ್‌, ಹೊನ್ನಾಳಿ ಮಾಜಿ ಶಾಸಕ ಶಾಂತನಗೌಡ, ದಾವಣಗೆರೆ ಮೇಯರ್‌ ಪಲ್ಲಾಗಟ್ಟಿ, ಭದ್ರಾವತಿ ಕಾಂಗ್ರೆಸ್‌ ನಗರಾಧ್ಯಕ್ಷ ಚಂದ್ರೇಗೌಡ, ಗ್ರಾಮಾಂತರ ಘಟಕದ ಅಧ್ಯಕ್ಷ ಷಡಾಕ್ಷರಿ,ತಹೀಲ್ದಾರ್‌ ನಾಗರಾಜ್‌, ಮುಖಂಡರಾದ ಬಿ.ಟಿ. ನಾಗರಾಜ್‌, ಮಾಜಿ ಉಪಮೇಯರ್‌ ಮಹಮದ್‌ ಸನಾವುಲ್ಲಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.