ಬೊಬ್ಬರ್ಯಗುಡ್ಡೆ ಬಳಿ ಸಂಪರ್ಕ ರಸ್ತೆ ಕುಸಿತದ ಭೀತಿ
Team Udayavani, Jul 31, 2018, 6:00 AM IST
ಮಲ್ಪೆ: ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಸಸಿತೋಟ ಎಂಬಲ್ಲಿ ನದಿ ಕೊರೆತದ ಪರಿಣಾಮವಾಗಿ ಇಲ್ಲಿನ ಹೊಳೆ ತೀರದ ನಿವಾಸಿಗಳು ಬವಣೆ ಪಡುವಂತಾಗಿದೆ.
ನದಿ ಕೊರೆತದ ಪರಿಣಾಮ ಇಲ್ಲಿ ವಿದ್ಯುತ್ ಕಂಬ ನೀರು ಉರುಳಿ ಬೀಳುವ ಸ್ಥಿತಿಯಲ್ಲಿದೆ. ಮಾತ್ರವಲ್ಲದೆ ಸಂಪರ್ಕ ರಸ್ತೆಯೂ ಕೂಡ ಕಡಿತಗೊಳ್ಳುವ ಸಾಧ್ಯತೆ ಇದೆ. ನದಿ ಕೊರೆತ ಉಂಟಾಗದಂತೆ ಈ ಭಾಗದಲ್ಲಿ ಶಾಶ್ವತವಾದ ಕಲ್ಲುದಂಡೆಯನ್ನು ನಿರ್ಮಿಸದೇ ಇರುವುದರಿಂದಾಗಿ ಸಮಸ್ಯೆ ಉದ್ಭವಿಸಿದೆ.
ಮಳೆಗಾಲದಲ್ಲಿ ಭಾರಿ ಮಳೆ ಸುರಿದಾಗ ಹೊಳೆ ನೀರು ತುಂಬಿಕೊಂಡು ನದಿ ಕೊರತದ ಭೀಕರತೆ ಅತಿಯಾಗುತ್ತದೆ.
ಈಗಾಗಲೇ ರಸ್ತೆಯ ಅಂಚಿನವರೆಗೆ ಕೊರೆತ ಉಂಟಾಗಿದ್ದು ಸಮೀಪದ ಮನೆಗಳಿಗೂ ಭೀತಿ ಉಂಟಾಗುತ್ತಿದೆ. ಶಾಲಾ ಮಕ್ಕಳ ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು ಅಪಾಯಕ್ಕೆ ಅಹ್ವಾನ ನೀಡುವಂತಿದೆ.
ಸುಮಾರು 7-8 ವರ್ಷಗಳ ಹಿಂದೆ ಇಲ್ಲಿನ ಅಣೆಕಟ್ಟು ವರೆಗೆ ಶಾಶ್ವತ ತಡೆಗೋಡೆ ರಚನೆ ಮಾಡಲಾಗಿದೆ. ಅಲ್ಲಿಂದ ಮುಂದೆ ಸುಮಾರು 200 ಮೀ. ಉದ್ದಕ್ಕೆ ತಡೆಗೋಡೆ ನಿರ್ಮಾಣ ಆಗಬೇಕಾಗಿದ್ದು ಈ ಬಗ್ಗೆ ಕಳೆದ ನಾಲ್ಕು ವರ್ಷಗಳಿಂದ ಸಂಬಂಧಪಟ್ಟ ಎಲ್ಲ ಇಲಾಖೆಗೂ ಮನವಿ ಮಾಡಿದರೂ ಯಾವುದೇ ಪ್ರಯೋಜನ ಇಲ್ಲ ಎಂದು ನಾಗರಿಕರು ಆರೋಪಿಸಿದ್ದಾರೆ.
ಹೋರಾಟ ಮಾಡುತ್ತಾ ಬಂದಿದ್ದೇವೆ
ಕಳೆದ ಮೂರು ವರ್ಷದಿಂದ ಈ ಬಗ್ಗೆ ನಾವು ಹೋರಾಟವನ್ನು ಮಾಡುತ್ತಾ ಬಂದಿದೇªವೆ. ಜನಪ್ರತಿನಿಧಿಗಳಿಗೆ ಸಾಕಷ್ಟು ಬಾರಿ ಮನವಿಯನ್ನು ಮಾಡಿದೇªವೆ ಯಾವ ಪ್ರಯೋಜನವೂ ಇಲ್ಲ. ನದಿ ಕೊರೆತದಿಂದ ರಸ್ತೆ ಜರಿದು ಸಮೀಪದ ಮನೆಗಳಿಗೆ ಅಪಾಯ ಕಾದಿದೆ.
– ಪ್ರಶಾಂತ್ ಕಾಂಚನ್ , ಕುತ್ಪಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ
Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ
Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ
Mangaluru ನಮಾಜ್ ಪ್ರಕರಣ: ಬಿ ರಿಪೋರ್ಟ್ ಸಲ್ಲಿಕೆ; ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ
TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್