ಭುಗಿಲೆದ್ದ ಹೋರಾಟ: ಯುವಕ ಆತ್ಮಹತ್ಯೆ ಮಾಡಿದ್ದು ಗಲಭೆಗೆ ಕಾರಣ?
Team Udayavani, Jul 31, 2018, 6:00 AM IST
ಪುಣೆ/ಔರಂಗಾಬಾದ್: ಸರಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಗೆ ಒತ್ತಾಯಿಸಿ ಮರಾಠಾ ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಸೋಮವಾರ ಮತ್ತೆ ತೀವ್ರಗೊಂಡಿದೆ. ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಪ್ರತಿಭಟನಾಕಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುಣೆಯಲ್ಲಿ ನಡೆದ ಹಿಂಸಾಚಾರದಲ್ಲಿ 40 ಸರಕಾರಿ ಬಸ್ಗಳು ಹಾಗೂ ಇತರೆ 40ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮರಾಠ ಕ್ರಾಂತಿ ಮೋರ್ಚಾ ಈ ಕೃತ್ಯ ನಡೆಸಿದೆ ಎಂದು ಪೊಲೀಸರು ಅನುಮಾನಿಸಿದ್ದಾರೆ.
ಪುಣೆ ಸಮೀಪ ಚಕನ್ ಎಂಬಲ್ಲಿ ಕಿಡಿಗೇಡಿಗಳು ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲೆಸೆದು ಹಾನಿ ಮಾಡಿದ್ದಾರೆ. ಇದರ ಜತೆಗೆ ಪುಣೆ-ನಾಶಿಕ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಪುಣೆಯ ಗ್ರಾಮಾಂತರ ಪೊಲೀಸರು ನಿಷೇಧಾಜ್ಞೆ ವಿಧಿಸಿದ್ದಾರೆ. ಇದೇ ವೇಳೆ, ಮೀಸಲಿಗೆ ಆಗ್ರಹಿಸಿ ಆ.9ರಂದು ಮೆಗಾ ರ್ಯಾಲಿ ಕೈಗೊಳ್ಳುವುದಾಗಿ ಮರಾಠಿ ಸಂಘಟನೆಗಳು ಘೋಷಿಸಿವೆ.
ಸರಕಾರದ ವಿಳಂಬ ನೀತಿ: ಇದೇ ವೇಳೆ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಮೀಸಲು ವಿವಾದಕ್ಕೆ ಸಂಬಂಧಿಸಿದಂತೆ ದೇವೇಂದ್ರ ಫಡ್ನವಿಸ್ ನೇತೃತ್ವದ ಸರಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದೆ. ಜತೆಗೆ, ಕೂಡಲೇ ಮೀಸಲಾತಿ ಕುರಿತು ನಿರ್ಧಾರ ಪ್ರಕಟಿಸುವಂತೆ ರಾಜ್ಯ ಸರಕಾರಕ್ಕೆ ಆದೇಶಿಸಬೇಕು ಎಂದು ರಾಜ್ಯಪಾಲ ವಿದ್ಯಾಸಾಗರ ರಾವ್ಗೆ ಮನವಿ ಸಲ್ಲಿಸಿದೆ. ಕಾಂಗ್ರೆಸ್ ಮುಖ್ಯಸ್ಥ ಅಶೋಕ್ ಚವಾಣ್ ನೇತೃತ್ವದ ಕಾಂಗ್ರೆಸ್ ನಿಯೋಗ ಸೋಮವಾರ ರಾಜ್ಯಪಾಲರನ್ನು ಭೇಟಿಯಾಗಿ ಈ ಮನವಿ ಸಲ್ಲಿಸಿದೆ. ಜತೆಗೆ, ಅಮಾಯಕ ಮರಾಠಾ ಪ್ರತಿಭಟನಾಕಾರರ ವಿರುದ್ಧದ ಕೇಸುಗಳನ್ನು ಕೂಡಲೇ ವಾಪಸ್ ಪಡೆಯುವಂತೆಯೂ ಆಗ್ರಹಿಸಿದೆ. ಇನ್ನೊಂದೆಡೆ, ಸರಕಾರವು ರಾಜ್ಯ ಹಿಂದುಳಿದ ಆಯೋಗದ ವರದಿಗೆ ಕಾಯದೇ, ಮೀಸಲು ಘೋಷಿಸಬೇಕು ಎಂದು ಶಿವಸೇನೆ ಆಗ್ರಹಿಸಿದೆ.
ವ್ಯಕ್ತಿ ಆತ್ಮಹತ್ಯೆ
ಮರಾಠಾ ಮೀಸಲು ವಿಚಾರಕ್ಕೆ ಸಂಬಂಧಿಸಿದಂತೆ ಔರಂಗಾಬಾ ದ್ನಲ್ಲಿ 35 ವರ್ಷದ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿನ ಎದುರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೀಸಲು ಹೋರಾ ಟಕ್ಕೆ ಬೆಂಬಲ ವ್ಯಕ್ತಪಡಿಸಿ ತಾನು ಈ ಕೃತ್ಯವೆಸಗುತ್ತಿರುವುದಾಗಿ ಆತ ಫೇಸ್ಬುಕ್, ವಾಟ್ಸ್ಆ್ಯಪ್ನಲ್ಲಿ ಸಂದೇಶ ಅಪ್ಲೋಡ್ ಮಾಡಿದ್ದ. ಇದೇ ವೇಳೆ, ಮೀಸಲು ವಿಚಾರದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ವರೆಗೆ ಮೃತದೇಹ ಪಡೆದುಕೊಳ್ಳುವುದಿಲ್ಲ ಎಂದು ಆತನ ಕುಟುಂಬ ಸದಸ್ಯರು ಪಟ್ಟುಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ