ಸುರಿಯದ ಮಳೆ: ಬಾಡುತ್ತಿದೆ ಬೆಳೆ
Team Udayavani, Jul 31, 2018, 5:09 PM IST
ಶಹಾಬಾದ: ಮಳೆ ಕೊರತೆಯಿಂದಾಗಿ ಬೆಳೆ ಬಾಡುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಜೂನ್ ತಿಂಗಳ ಮೊದಲ ವಾರದಲ್ಲಿ ಬಿದ್ದ ಮೊದಲ ಮಳೆಯಿಂದ ಹರ್ಷಗೊಂಡಿದ್ದ ರೈತರು ಹೆಸರು ಬಿತ್ತನೆ ಮಾಡಿದ್ದರು. ಬಿತ್ತನೆ ಮಾಡಿದ ನಂತರ ಸುಮಾರು ತಿಂಗಳಾಗುತ್ತ ಬಂದರೂ ಇದುವರೆಗೂ ಮಳೆಯಾಗದಿರುವುದರಿಂದ ರೈತರು ತುಂಬಾ ಆತಂಕಕ್ಕೆ ಒಳಗಾಗಿದ್ದಾರೆ. ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರಿನಲ್ಲಿ ಉತ್ತಮ ಮಳೆಯಾಗಿತ್ತು. ಅಲ್ಲದೇ ಹೆಚ್ಚಿನ
ಮಳೆಯಾಗಿದ್ದರಿಂದ ತಗ್ಗು ಪ್ರದೇಶದ ಹೊಲ ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿತ್ತು.
ಈ ಬಾರಿ ಮಳೆ ಬಾರದಿರುವುದರಿಂದ ಬಾಡುವ ಹಂತ ತಲುಪಿದೆ. ಕೆಲವು ರೈತರು ಹೊಲ ಹರಗಿದ್ದಾರೆ. ಮಳೆ ಇಲ್ಲದೇ ಇರುವುದರಿಂದ ಆತಂಕಗೊಳಗಾದ ಮತ್ತೆ ನಿರಾಶೆಯಾಗಿದ್ದಾರೆ. ಹವಾಮಾನ ಇಲಾಖೆ ವರದಿಯಂತೆ ಈ ಬಾರಿ ಉತ್ತಮ ಮಳೆಯಾಗುತ್ತದೆ ಎಂಬ ಆಶಾಭಾವನೆಯಿಂದ ರೈತರು ಬಿತ್ತನೆ ಮಾಡಿದ್ದರು. ಆದರೆ ಬಿತ್ತನೆ ಮಾಡಿದ ನಂತರ ಮೊಳಕೆ ಒಡೆದು ಬಂದ ಬೆಳೆಗೆ ಸುಮಾರು ಒಂದು ತಿಂಗಳವರೆಗೆ ಮಳೆಯಾಗಲಿಲ್ಲ. ಆದರೆ ಆಗೊಮ್ಮ ಈಗೊಮ್ಮೆ ಸುರಿದ ಮಳೆಯಿಂದ ಹೇಗೋ ಚತರಿಸಿಕೊಂಡು ಬೆಳೆದ ಬೆಳೆಗೆ ತೇವಾಂಶದ ಕೊರತೆಯಿಂದ ಬಾಡುವ ಹಂತಕ್ಕೆ ತಲುಪಿವೆ. ಎಲೆಗಳು ಉದುರಿ ಹೋಗಿವೆ.
ಹೆಸರು, ಉದ್ದು, ಎಳ್ಳು, ಸಜ್ಜೆ ಮಳೆಯಿಲ್ಲದೇ ಒಣಗಿ ಹೋಗಿರುವುದರಿಂದ ರೈತರು ಬೆಳೆ ಹರಗುತ್ತಿದ್ದಾರೆ. ಅಲ್ಪ
ಮಳೆಯಾದ ಕೆಲವು ಪ್ರದೇಶಗಳಲ್ಲಿ ಕಾಯಿಯಾಗಿವೆ. ಆದರೆ ತೇವಾಂಶದ ಕೊರತೆಯಿಂದ ಕಾಯಿ ಕಟ್ಟಿಲ್ಲ. ಹತ್ತಿ ಬೆಳೆ ಮಾತ್ರ ಎರಡು ಗೇಣಿನಷ್ಟು ಬೆಳೆದು ನಿಂತಿದೆ. ಈಗ ಮಳೆಯಾದರೆ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಇನ್ನೂ ತೊಗರಿ ಬಿತ್ತನೆ ಮಾಡಿ, ಇಪ್ಪತ್ತು ದಿನಗಳಾದರೂ ಮಳೆಯಾಗದಿರುವುದರಿಂದ ರೈತರು ಕಣ್ಣೀರು ಸುರಿಸುವಂತಾಗಿದೆ.ಅಲ್ಲದೇ ರೈತರು ಮುಂದೆ ಒಳ್ಳೆಯ ಮಳೆ ಬರುವ ಆಶಾಭಾವನೆಯಿಂದ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈ ವರ್ಷ ಮಳೆಯೂ ಇಲ್ಲ. ಕಳೆಯೂ ಇಲ್ಲ. ಇದರಿಂದ ದನಗಳಿಗೆ ಮೇವಿಲ್ಲದಿದ್ದರೆ ಮಾರಾಟ ಮಾಡಲು ಕೃಷಿಕರು ಮುಂದಾಗುತ್ತಾರೆ. ಇಷ್ಟೆಲ್ಲ ಕಷ್ಟಗಳು ಇದ್ದರೂ ರೈತರು ಆಶಾಭಾವನೆಯಿಂದ ಮಳೆರಾಯನನ್ನು ಎದುರು ನೋಡುತ್ತಿದ್ದಾರೆ.
ಹೋಬಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯಿಲ್ಲದೇ ರೈತರು ಸಂಕಷ್ಟದಲ್ಲಿದ್ದಾರೆ. ಮಳೆಯಿಲ್ಲದೇ ಬೆಳೆ ಒಣಗಿ ಹೋಗಿದೆ. ಆದರೂ ಆಶಾಭಾವನೆಯಿಂದ ರೈತರು ಮಳೆರಾಯನಿಗಾಗಿ ಕಾದು ಕುಳಿತ್ತಿದ್ದಾರೆ ಎಂದು ನಾಗಣ್ಣ ರಾಂಪೂರೆ ತಿಳಿಸಿದ್ದಾರೆ. ಬೆಳೆಗೆ ತಕ್ಕಷ್ಟು ಮಳೆ ಬಂದಿದ್ದರೆ, ಬೆಳೆ ಉತ್ತಮವಾಗಿರುತ್ತಿತ್ತು. ಅಲ್ಲದೇ ನಿರೀಕ್ಷಿತ ಮಟ್ಟದಲ್ಲಿ ಇಳುವರಿ ಪಡೆಯಬಹುದಾಗಿತ್ತು. ಆದರೆ ಮಳೆಯಾಗದ ಕಾರಣ ಅರಳುವ ಮುಂಚೆಯೇ ಹೆಸರು ಬೆಳೆಗಳ ಎಲೆಗಳು ಉದುರಿ ಹೋಗಿವೆ. ಸಾಲ ಮಾಡಿದ ರೈತ ಮತ್ತೆ ಸಂಕಷ್ಟಕ್ಕೆ ಒಳಗಾಗಗಿದ್ದಾರೆ ಎಂದು ಮೋನಪ್ಪ ತೆಲಗಬಾಳ ಅಳಲು ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ