ಕಾಂಗ್ರೆಸ್‌ ಬುಡ ಅಲ್ಲಾಡಿಸಿದ ಸಿಎಂ ಹೇಳಿಕೆ 


Team Udayavani, Aug 1, 2018, 6:00 AM IST

22.jpg

ಬೆಂಗಳೂರು: “ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಕಾದರೆ ಮಾಡಿಕೊಳ್ಳಿ, ಹೇಗೆ ಅಭಿವೃದ್ಧಿ ಮಾಡಿಕೊಳ್ಳುತ್ತೀರೋ ನಾನು ನೋಡುತ್ತೇನೆ’
-ಹೀಗೆಂದು ಸಮ್ಮಿಶ್ರ ಸರ್ಕಾರದ ನೊಗ ಹೊತ್ತಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರ ಸ್ವಾಮಿ ತವರು ಕ್ಷೇತ್ರ ರಾಮನಗರದಲ್ಲಿ ನೀಡಿದ ಹೇಳಿಕೆ ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷ ಕಾಂಗ್ರೆಸ್‌ ನ “ಬುಡ’ ಅಲ್ಲಾಡುವಂತೆ ಮಾಡಿದೆ. ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್‌ ನಾಯಕರಿಗೆ ಕುಮಾರಸ್ವಾಮಿ ಹೇಳಿಕೆ ನುಂಗಲಾರದ ತುತ್ತಾಗಿದೆ. ಅವರ ಹೇಳಿಕೆಯಿಂದ ಪಕ್ಷದ ಮೇಲೆ ಆಗುತ್ತಿರುವ ವ್ಯತಿರಿಕ್ತ ಪರಿಣಾಮ ಸರಿಪಡಿಸಲು ತಕ್ಷಣ ಮುಂದಾಗದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಕಷ್ಟವಾಗಲಿದೆ ಎಂಬ ಆತಂಕ ಕಾಂಗ್ರೆಸ್‌ ನಾಯಕರಲ್ಲಿ ಮೂಡಿದೆ. ಮುಖ್ಯಮಂತ್ರಿ ಹೇಳಿಕೆಯನ್ನು ಪ್ರತಿಪಕ್ಷ ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಬಹುದು ಎಂಬ ಆತಂಕ ಕೂಡ ಅವರಿಗೆ ಎದುರಾಗಿದೆ.

ಕುಮಾರಸ್ವಾಮಿ ನೀಡಿರುವ ಹೇಳಿಕೆಯಿಂದ ರಾಜಕೀಯವಾಗಿ ಜೆಡಿಎಸ್‌ಗೆ ಯಾವುದೇ ರೀತಿಯ ನಷ್ಟವಿಲ್ಲ. ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್‌ಗೆ ಹೆಚ್ಚಿನ ನಷ್ಟವಾಗಲಿದ್ದು, ಲೋಕಸಭೆ ಚುನಾವಣೆಗೆ ಕ್ಷೇತ್ರ ಹೊಂದಾಣಿಕೆ ಮಾಡಿಕೊಂಡರೆ, ಕಾಂಗ್ರೆಸ್‌ ಪಾಲಿಗೆ ದೊರೆಯುವ 20 ಕ್ಷೇತ್ರಗಳಲ್ಲಿ ಕನಿಷ್ಠ 16 ಕ್ಷೇತ್ರಗಳು ಉತ್ತರ ಕರ್ನಾಟಕ ಭಾಗದಲ್ಲಿಯೇ ಬರುತ್ತವೆ. ಪ್ರಸ್ತುತ ಉತ್ತರ ಕರ್ನಾಟಕದಲ್ಲಿ ಕಲಬುರಗಿ, ರಾಯಚೂರು ಹಾಗೂ ಚಿಕ್ಕೋಡಿ ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್‌ ಸಂಸದರಿದ್ದು, ಉಳಿದ ಕ್ಷೇತ್ರಗಲ್ಲಿ ಬಿಜೆಪಿಯೊಂದಿಗೆ ನೇರ ಪೈಪೋಟಿ ನಡೆಸಬೇಕು. ಆದರೆ, ಬಿಜೆಪಿಯವರು ಇದೇ ಭಾವನಾತ್ಮಕ ವಿಷಯ ಮುಂದಿಟ್ಟುಕೊಂಡು ಜನರನ್ನು ಸೆಳೆಯುವ ಪ್ರಯತ್ನ ಮಾಡಿದರೆ ಕಾಂಗ್ರೆಸ್‌ಗೆ ಕಷ್ಟವಾಗಲಿದೆ ಎಂಬುದು ಆ ಭಾಗದ
ಮುಖಂಡರ ವಾದ.

ಲಿಂಗಾಯತ ಎಫೆಕ್ಟ್: ವಿಧಾನಸಭೆ ಚುನಾವಣೆಗೂ ಮುಂಚೆ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹೋರಾಟ ಮಾಡಿದ್ದರಿಂದ ಉ.ಕ. ಭಾಗದಲ್ಲಿ ಲಿಂಗಾಯತ ಸಮುದಾಯ ಬಿಜೆಪಿ ಪರವಾಗಿ ನಿಂತಿದ್ದು ಕಾಂಗ್ರೆಸ್‌ ಹಿನ್ನಡೆಗೆ ಕಾರಣವಾಗಿದೆ ಎಂಬ ಅಭಿಪ್ರಾಯ ಇದೆ. ಈಗ ಮತ್ತೂಂದು ಪ್ರತ್ಯೇಕತೆಯ ಹೇಳಿಕೆಯಿಂದ ಕಾಂಗ್ರೆಸ್‌ಗೆ ನಷ್ಟವಾಗಲಿದ್ದು, ಪಕ್ಷದ ನಾಯಕರು ಈ ಬಗ್ಗೆ ತಕ್ಷಣವೇ ಎಚ್ಚೆತ್ತುಕೊಳ್ಳದಿರುವುದು ಆ ಭಾಗದ ಕಾಂಗ್ರೆಸ್‌ ನಾಯಕರ ಮುನಿಸಿಗೆ ಕಾರಣವಾಗಿದೆ. ಈಗಲಾದರೂ ಪಕ್ಷದ ರಾಜ್ಯದ ನಾಯಕರು ಶಾಸಕಾಂಗ ಪಕ್ಷದ ಸಭೆ ಕರೆದು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಾಂಗ್ರೆಸ್‌ ಬದ್ದವಾಗಿದೆ ಎಂಬ ಸಂದೇಶ ರವಾನಿಸಬೇಕು. ಅಲ್ಲದೇ ತಕ್ಷಣ ಸಮನ್ವಯ ಸಮಿತಿ ಸಭೆ ಕರೆದು ಇನ್ಮುಂದೆ ಮುಖ್ಯಮಂತ್ರಿ ಕುಮಾರಸ್ವಾಮಿಗೆ ವಿವಾದಾತ್ಮಕ ಹೇಳಿಕೆ ನೀಡದಂತೆ ಸೂಚನೆ ನೀಡಬೇಕು ಎಂದು ಆ ಭಾಗದ ಕಾಂಗ್ರೆಸ್‌ ನಾಯಕರು ಹೈಕಮಾಂಡ್‌ ಗಮನಕ್ಕೂ
ತಂದಿದ್ದಾರೆ ಎಂದು ತಿಳಿದು ಬಂದಿದೆ.

ಕುಮಾರಸ್ವಾಮಿ ಮೊದಲು ಉತ್ತರ ಕರ್ನಾಟಕ ಹೋರಾಟಗಾರರ ಮನಸ್ಸು ಗೆಲ್ಲಬೇಕು. ಆ ಭಾಗದ ಅಭಿವೃದ್ಧಿಗೆ ನ್ಯಾಯಯುತವಾಗಿ ಆರ್ಥಿಕ ಅನುದಾನ ಸಿಗುವಂತೆ ಮಾಡಲು ವಿಶೇಷ ಕಾಳಜಿ ವಹಿಸಬೇಕು. ಕಾಂಗ್ರೆಸ್‌ ಕೂಡ ಅಖಂಡ ಕರ್ನಾಟಕದ ಪರವಾಗಿದೆ ಎನ್ನುವ ವಾತಾವರಣ ಮೂಡಿಸುವ ಪ್ರಯತ್ನ ಮಾಡಬೇಕು.
● ಎಚ್‌.ಕೆ. ಪಾಟೀಲ್‌, ಮಾಜಿ ಸಚಿವ

ಕುಮಾರಸ್ವಾಮಿ ತಮ್ಮ ಪಕ್ಷದ ಪರವಾಗಿ ಮಾತನಾಡಿರಬಹುದು. ಆದರೆ, ಸಮ್ಮಿಶ್ರ ಸರ್ಕಾರದಲ್ಲಿರುವಾಗ ಎಲ್ಲವನ್ನೂ ಅರಿತು ನಡೆಯಬೇಕು.
ಎರಡೂ ಪಕ್ಷದ ಆಗುಹೋಗುಗಳನ್ನು ನೋಡಿಕೊಂಡು ನಡೆಯಬೇಕು. ಉ.ಕ.ಭಾಗದಲ್ಲಿ ಕಾಂಗ್ರೆಸ್‌ಗೆ 40 ಸ್ಥಾನ ದೊರೆತಿದೆ. ಸಮಗ್ರ ಕರ್ನಾಟಕ ನಮ್ಮೆಲ್ಲರ ಅಭಿಪ್ರಾಯ. ಈ ಬಗ್ಗೆ ಚರ್ಚೆ ಮಾಡುತ್ತೇವೆ.

● ಎಂ.ಬಿ. ಪಾಟೀಲ್‌, ಮಾಜಿ ಸಚಿವ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬರುತ್ತಿರುವ ಜಿಲ್ಲೆಗಳ ಎಲ್ಲ ಶಾಸಕರು ಮತ್ತು ಮಠಾಧಿಪತಿಗಳ ಸಭೆ ಕರೆದು
ಅವರಲ್ಲಿ ವಿಶ್ವಾಸ ಮೂಡಿಸಬೇಕು. ಒಂದು ವೇಳೆ, ಪ್ರತ್ಯೇಕತೆಯ ಧ್ವನಿ ಗಟ್ಟಿಯಾದರೆ ಅದಕ್ಕೆ ಜೆಡಿಎಸ್‌ -ಕಾಂಗ್ರೆಸ್‌ ಜಂಟಿ ಸರಕಾರ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಕಾರಣರಾಗುತ್ತಾರೆ. 

● ಕೋಟ ಶ್ರೀನಿವಾಸ  ಪೂಜಾರಿ, ವಿಧಾನಪರಿಷತ್‌ ವಿಪಕ್ಷ ನಾಯಕ

 ಶಂಕರ ಪಾಗೋಜಿ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.