ಕಾಲೇಜುಗಳಲ್ಲಿ ರೇಂಜರ್‌ ರೋವರ್‌ ಘಟಕ


Team Udayavani, Aug 1, 2018, 11:49 AM IST

blore-7.jpg

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳ ಅಧೀನದ ಕಾಲೇಜುಗಳಲ್ಲಿ ರೇಂಜರ್‌-ರೋವರ್‌ ಘಟಕ ಸ್ಥಾಪಿಸುವ
ಕಾರ್ಯ ಇನ್ನಷ್ಟು ಚುರುಕುಗೊಳಿಸಲಾಗುತ್ತದೆ ಎಂದು ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ರಾಜ್ಯ ಪ್ರಧಾನ ಆಯುಕ್ತ
ಪಿ.ಜಿ.ಆರ್‌.ಸಿಂಧ್ಯಾ ಹೇಳಿದ್ದಾರೆ.

ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಬೆಂಗಳೂರು ದಕ್ಷಿಣ ಜಿಲ್ಲೆ ವತಿಯಿಂದ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ
ಜಿಲ್ಲಾಮಟ್ಟದ ಗೀತಗಾಯನ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ
ವಿಶ್ವವಿದ್ಯಾಲಯದ ಅಧೀನದ ಕಾಲೇಜಿನಲ್ಲಿ ರೇಂಜರ್‌-ರೋವರ್‌ ಘಟಕ ಸ್ಥಾಪಿಸುವ ಬಗ್ಗೆ ಹಿಂದಿನ ಸರ್ಕಾರ ಆದೇಶ
ಹೊರಡಿಸಿದೆ. ಆದರೆ, ಯಾವುದೇ ವಿಶ್ವವಿದ್ಯಾಲಯದಲ್ಲೂ ಅದು ಪರಿಣಾಮಕಾರಿಯಾಗಿ ಜಾರಿಗೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾಲೇಜುಗಳಲ್ಲಿ ರೇಂಜರ್‌-ರೋವರ್‌ ಘಟಕ ಸ್ಥಾಪಿಸಲು ಸರ್ಕಾರವೇ ನಿರ್ದೇಶಿಸಿದ್ದರೂ. ಹಲವು ಕಾಲೇಜಿನಲ್ಲಿ ಜಾರಿಗೆ ಬಂದಿಲ್ಲ. ವಿಧದ ಕಾರಣಗಳಿಂದಾಗಿ ಭಾರತ್‌ ಸ್ಕೌಟ್‌ ಮತ್ತು ಗೈಡ್ಸ್‌ನಿಂದ ಕಾಲೇಜುಗಳ ಮೇಲೆ ಈ ಕುರಿತು ಹೆಚ್ಚಿನ ಒತ್ತಡವನ್ನು ಹಾಕಿರಲಿಲ್ಲ. ಪ್ರಸಕ್ತ ಸಾಲಿನಿಂದ ಆ ಕಾರ್ಯಕ್ಕೆ ಮತ್ತಷ್ಟು ಚುರುಕು ನೀಡಲಿದ್ದೇವೆ.

ವಿಶ್ವವಿದ್ಯಾಲಯದ ಕುಲಪತಿಗಳು ಕೂಡ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡದರು. ಎನ್‌ಸಿಸಿ, ಎನ್‌ಎಸ್‌ಎಸ್‌ ಹಾಗೂ ಭಾರತ್‌ ಸ್ಕೌಟ್‌ ಮತ್ತು ಗೈಡ್ಸ್‌ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಭಾರತ್‌ ಸ್ಕೌಟ್‌ ಮತ್ತು ಗೈಡ್ಸ್‌ ಸಂಸ್ಥೆ ಶಾಲಾ ಕಾಲೇಜಿನಲ್ಲಿ ವ್ಯಕ್ತಿ ನಿರ್ಮಾಣ ಕಾರ್ಯ ಮಾಡುತ್ತಿದೆ. 

ನಮ್ಮಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ. ಪ್ರತಿಭೆಗಳನ್ನು ಗುರುತಿಸುವ ಕೆಲಸ ಆಗಬೇಕು. ಸಂಗೀತ ಅತ್ಯಂತ ದೊಡ್ಡ
ಕಲೆ, ಅದನ್ನು ಜೀವನದಲ್ಲಿ ಅಳವಡಿಸಿ ಕೊಂಡು ಹೃದಯದಲ್ಲಿ ತುಂಬಿಕೊಳ್ಳಬೇಕು ಎಂದು ಮಕ್ಕಳಿಗೆ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್‌. ವೇಣುಗೋ ಪಾಲ್‌ ಮಾತನಾಡಿ, ವಿದ್ಯಾರ್ಥಿಗಳು ಸದೃಢ ಆರೋಗ್ಯ ಕಾಪಾಡಿಕೊಳ್ಳಲು ನಿತ್ಯ ವ್ಯಾಯಾಮ ಅಗತ್ಯ. ಭಾರತ್‌ ಸ್ಕೌಟ್‌ ಮತ್ತು ಗೈಡ್ಸ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಸಕಾರಾ ತ್ಮಕವಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ನೀಡಿದರು.

ಬೆಂವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲೂ ರೇಂಜರ್‌-ರೋವರ್‌ ಘಟಕ ಸ್ಥಾಪಿಸುವ ಬಗ್ಗೆ ಸೂಚನೆ ನೀಡಲಾಗುವುದು ಎಂದರು. ಜಿಲ್ಲಾ ಮುಖ್ಯ ಆಯುಕ್ತ ಎಂ.ಕೆ.ಖಾನ್‌, ಜಿಲ್ಲಾ ಆಯುಕ್ತ ಪಿ.ಪಳನಿ ಉಪಸ್ಥಿತರಿದ್ದರು. ವಿವಿಧ ಶಾಲೆಯ ಸುಮಾರು 50 ಸಾವಿರ ವಿದ್ಯಾರ್ಥಿಗಳು ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ದೆಲ್ಲಿ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳ ತಂಡ ಮೊದಲ ಸ್ಥಾನ, ನ್ಯೂ ಕೇಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಹಾಗೂ ಚಿನ್ಮಯ ವಿದ್ಯಾಲಯ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದುಕೊಂಡರು. 

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.