ವಿವಿಧ ರೈಲುಗಳ ಸೇವೆ ಮುಂದುವರಿಕೆಗೆ ನಿರ್ಧಾರ
Team Udayavani, Aug 1, 2018, 3:16 PM IST
ಬೆಂಗಳೂರು: ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಕೃಷ್ಣರಾಜಪುರಂ- ಕಾಚೇಗುಡಾ (07604-07605) ವಾರದ ವಿಶೇಷ ರೈಲನ್ನು ಅ.29ರವರೆಗೆ ಹಾಗೂ ಯಶವಂತಪುರ-ವಿಶಾಖಪಟ್ಟಣಂ ವಾರದ ತತ್ಕಾಲ್ ಎಕ್ಸ್ಪ್ರೆಸ್ (06579/06580) ರೈಲುಗಳ ಸೇವೆಯನ್ನು ಸೆ.28ರವರೆಗೆ ಮುಂದುವರಿಸಲು ನಿರ್ಧರಿಸಲಾಗಿದೆ.
ಕೃಷ್ಣರಾಜಪುರಂದಿಂದ ಸೋಮವಾರ ಮಧ್ಯಾಹ್ನ 3:25ಕ್ಕೆ ಹೊರಡುವ ರೈಲು ಮರುದಿನ ಬೆಳಗ್ಗೆ 6:55ಕ್ಕೆ ಕಾಚೇಗುಡಾಕ್ಕೆ ಬಂದು ಸೇರಲಿದೆ. ಅದೇ ರೀತಿ ರವಿವಾರ ಸಂಜೆ 6 ಗಂಟೆಗೆ ಕಾಚೇಗುಡಾದಿಂದ ಪ್ರಯಾಣ ಬೆಳೆಸುವ ರೈಲು ಮರುದಿನ ಬೆಳಗ್ಗೆ 6 ಗಂಟೆಗೆ ಕೃಷ್ಣರಾಜಪುರಂ ನಿಲ್ದಾಣಕ್ಕೆ ಆಗಮಿಸಲಿದೆ.
ತತ್ಕಾಲ ಎಕ್ಸ್ಪ್ರೆಸ್ ರೈಲು ಯಶವಂತಪುರದಿಂದ ಶುಕ್ರವಾರ ಸಂಜೆ 6:35ಕ್ಕೆ ಹೊರಡಲಿದ್ದು, ಮರುದಿನ ಮಧ್ಯಾಹ್ನ 2:35ಕ್ಕೆ ವಿಶಾಖಪಟ್ಟಣಂಗೆ ಬಂದು ಸೇರಲಿದೆ. ಅದೇ ರೀತಿ ವಿಶಾಖಪಟ್ಟಣಂ ನಿಲ್ದಾಣದಿಂದ ರವಿವಾರ ಮಧ್ಯಾಹ್ನ 1:45ಕ್ಕೆ ಹೊರಡ ಲಿದ್ದು, ಮರುದಿನ ಬೆಳಗ್ಗೆ 9:05ಕ್ಕೆ ಯಶವಂತಪುರಕ್ಕೆ ಆಗಮಿಸಲಿದೆ.
ಆ. 5ರಿಂದ ಯಶವಂತಪುರ- ವಿಶಾಖಪಟ್ಟಣಂ ವೀಕ್ಲಿ ತತ್ಕಾಲ್ ಎಕ್ಸ್ಪ್ರೆಸ್ ರೈಲಿಗೆ ತಾತ್ಕಾಲಿಕವಾಗಿ ಒಂದು 2ಟೀರ್ ಎಸಿ ಕೋಚ್, ಒಂದು ದ್ವಿತೀಯ ದರ್ಜೆ ಸ್ಲಿಪರ್ ಕೋಚ್ ಜೋಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ