ಅಯರ್‌ಲ್ಯಾಂಡ್‌ ವಿರುದ್ಧ ಭಾರತಕ್ಕೆ  ಸೇಡಿನ ತವಕ


Team Udayavani, Aug 2, 2018, 9:34 AM IST

hockey.jpg

* ಇಟಲಿ ವಿರುದ್ಧ  3-0 ಜಯಭೇರಿ * ಇಂದು ಕ್ವಾರ್ಟರ್‌ ಫೈನಲ್‌ * ಗೆದ್ದರೆ 44 ವರ್ಷಗಳ ಬಳಿಕ ಸೆಮಿ ಟಿಕೆಟ್‌

ಲಂಡನ್‌: ವಿಶ್ವಕಪ್‌ ಹಾಕಿ ಪಂದ್ಯಾವಳಿಯಲ್ಲಿ ಹಳಿ ಏರಿದ ಭಾರತದ ವನಿತೆಯರೀಗ ಕ್ವಾರ್ಟರ್‌ ಫೈನಲ್‌ ಹಣಾಹಣಿಗೆ ಸಜ್ಜಾಗಿದ್ದಾರೆ. ಗುರುವಾರ ನಡೆಯುವ ಮುಖಾ ಮುಖೀಯಲ್ಲಿ ರಾಣಿ ರಾಮ್‌ಪಾಲ್‌ ಪಡೆ ಅಯರ್‌ಲ್ಯಾಂಡ್‌ ವಿರುದ್ಧ ಸೆಣಸಲಿದೆ. ಭಾರತದ ಪಾಲಿಗೆ ಇದೊಂದು ಸೇಡಿನ ಪಂದ್ಯ. “ಬಿ’ ಗುಂಪಿನ ತಂಡಗಳಾದ ಭಾರತ-ಅಯರ್‌ಲ್ಯಾಂಡ್‌ ಈಗಾಗಲೇ ಲೀಗ್‌ ಹಂತ ದಲ್ಲಿ ಎದುರಾಗಿದ್ದು, ಇದರಲ್ಲಿ ಭಾರತ 1-0 ಗೋಲಿನಿಂದ ಶರಣಾಗಿತ್ತು. ಇದಕ್ಕೀಗ ಸೇಡು ತೀರಿಸಿ ಸೆಮಿಫೈನಲ್‌ ಪ್ರವೇಶಿಸುವ ನಿಟ್ಟಿನಲ್ಲಿ ರಾಣಿ ಬಳಗ ಕಾರ್ಯತಂತ್ರ ರೂಪಿಸಬೇಕಿದೆ. ಗೆದ್ದರೆ ಭಾರತದ ವನಿತೆಯರು 44 ವರ್ಷಗಳ ಬಳಿಕ ವಿಶ್ವಕಪ್‌ ಸೆಮಿಫೈನಲ್‌ ಪ್ರವೇಶಿಸಲಿದ್ದಾರೆ. 

1974ರಲ್ಲಿ ನಡೆದ ಫ್ರಾನ್ಸ್‌ ಪಂದ್ಯಾವಳಿಯಲ್ಲಿ ಭಾರತ ಕೊನೆಯ ಹಾಗೂ ಏಕೈಕ ಸಲ ವಿಶ್ವಕಪ್‌ ಸೆಮಿಫೈನಲ್‌ ಪ್ರವೇಶಿಸಿತ್ತು. ಅಂದು 4ನೇ ಸ್ಥಾನ ಸಂಪಾದಿಸಿದ್ದೇ ವಿಶ್ವಕಪ್‌ನಲ್ಲಿ ಈ ವರೆಗೆ ಭಾರತದ ಅತ್ಯುತ್ತಮ ಸಾಧನೆಯಾಗಿದೆ. ಕಳೆದ ಸಲ ಆರ್ಜೆಂಟೀನಾದಲ್ಲಿ ನಡೆದ ವಿಶ್ವಕಪ್‌ ಕೂಟದಲ್ಲಿ 8ನೇ ಸ್ಥಾನಕ್ಕೆ ಕುಸಿದು ತೀವ್ರ ನಿರಾಸೆ ಮೂಡಿಸಿತ್ತು.

ಇಟಲಿ ವಿರುದ್ಧ 3-0 ವಿಕ್ರಮ
ಲೀಗ್‌ ಹಂತದಲ್ಲಿ ಒಂದೂ ಗೆಲುವು ಕಾಣದೆ ತೃತೀಯ ಸ್ಥಾನಕ್ಕೆ ಕುಸಿದಿದ್ದ ಭಾರತ, “ಕ್ರಾಸ್‌-ಓವರ್‌’ ಪದ್ಧತಿಯ ನೆರವಿನಿಂದ ನಾಕೌಟ್‌ ಪ್ರವೇಶಿಸಿತ್ತು. ಇಲ್ಲಿ ಮಂಗಳವಾರ ರಾತ್ರಿ ಇಟಲಿಯನ್ನು 3-0 ಗೋಲುಗಳಿಂದ ಮಣಿಸಿತು. ಲಾಲ್ರೆಮಿÕಯಾಮಿ (20ನೇ ನಿಮಿಷ), ನೇಹಾ ಗೋಯಲ್‌ (45ನೇ ನಿಮಿಷ) ಹಾಗೂ ವಂದನಾ ಕಟಾರಿಯಾ (55ನೇ ನಿಮಿಷ) ಗೋಲು ಸಿಡಿಸಿ ಮೆರೆದಿದ್ದರು. ಇದು ಈ ಕೂಟದಲ್ಲಿ ಭಾರತ ಸಾಧಿಸಿದ ಮೊದಲ ಗೆಲುವಾಗಿತ್ತು. ಇದೇ ರಭಸವನ್ನು ಕಾಯ್ದುಕೊಂಡು ಅಯರ್‌ಲ್ಯಾಂಡ್‌ ವಿರುದ್ಧ ಸವಾರಿ ಮಾಡಬೇಕಿದೆ.
ಆದರೆ ಐರಿಷ್‌ ಪಡೆಯನ್ನು ಎದುರಿಸುವುದು ಸುಲಭದ ಸವಾ ಲೇನೂ ಅಲ್ಲ. ಇವರೆದುರು ಭಾರತ ಸತತ 2 ಸೋಲನುಭವಿಸಿ ಹಿನ್ನಡೆ ಅನುಭವಿಸಿದ್ದನ್ನು ಮರೆಯುವಂತಿಲ್ಲ. ಲೀಗ್‌ ಹಂತದ ಸೋಲಿಗೂ ಮುನ್ನ ಕಳೆದ ವರ್ಷ ಜೊಹಾನ್ಸ್‌ಬರ್ಗ್‌
ನಲ್ಲಿ ನಡೆದ ವರ್ಲ್ಡ್ ಲೀಗ್‌ ಸೆಮಿ ಫೈನಲ್‌ನಲ್ಲೂ ಅಯರ್‌ಲ್ಯಾಂಡ್‌ ಭಾರತವನ್ನು ಮಣಿಸಿತ್ತು (2-1). 
ಲೀಗ್‌ ಹಂತದಲ್ಲೂ ಅಯರ್‌ಲ್ಯಾಂಡ್‌ ಉತ್ತಮ ಪ್ರದರ್ಶನ ನೀಡಿದ್ದನ್ನು ಮರೆಯುವಂತಿಲ್ಲ. ಇಂಗ್ಲೆಂಡ್‌ ವಿರುದ್ಧ ಸೋತರೂ ಭಾರತ ಹಾಗೂ ಅಮೆರಿಕವನ್ನು ಕೆಡವಿ (3-1) ಗುಂಪಿನ ಅಗ್ರಸ್ಥಾನಿಯಾಗಿ ಕ್ವಾರ್ಟರ್‌ ಫೈನಲ್‌ಗೆ ನೇರ ಪ್ರವೇಶ ಪಡೆದಿತ್ತು.

ಪಯಣ ಇಲ್ಲಿಗೇ ಕೊನೆಯಾಗದು: ರಾಣಿ
ಅಮೋಘ ಜಯದೊಂದಿಗೆ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದರಿಂದ ಭಾರತ ತಂಡದ ಸ್ಫೂರ್ತಿ ಹಾಗೂ ಆತ್ಮವಿಶ್ವಾಸ ಸಹಜವಾಗಿಯೇ ಹೆಚ್ಚಿದೆ. ನಾಯಕಿ ರಾಣಿ ರಾಮ್‌ಪಾಲ್‌ ಕೂಡ ಇದನ್ನೇ ಹೇಳಿದ್ದಾರೆ. “ಆರಂಭದಲ್ಲಿ ನಾವು ಗೋಲಿನ ಬರಗಾಲದಲ್ಲಿದ್ದೆವು. ಇಟಲಿ ವಿರುದ್ಧ ಈ ಕೊರತೆಯನ್ನು ನೀಗಿಸಿಕೊಂಡಿದ್ದೇವೆ. ಪ್ರಯಾಣ ಮುಂದುವರಿಸಲು ಹೊಸ ಸ್ಫೂರ್ತಿ ಲಭಿಸಿದೆ. ಈ ಪಯಣ ನಾಳೆಗೇ ಕೊನೆಯಾಗುವುದನ್ನು ನಾವು ಬಯಸುವುದಿಲ್ಲ…’ ಎಂದಿದ್ದಾರೆ.
ಭಾರತ ಸೆಮಿಫೈನಲ್‌ ಪ್ರವೇಶಿಸಿದರೆ ಸ್ಪೇನ್‌ ಅಥವಾ ಜರ್ಮನಿ ಸವಾಲನ್ನು ಎದುರಿಸಲಿದೆ.
 

ಟಾಪ್ ನ್ಯೂಸ್

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.