ಶೀಘ್ರ ನೂತನ ರಾಯರ ಮಠ ಲೋಕಾರ್ಪಣೆ


Team Udayavani, Aug 2, 2018, 4:09 PM IST

bell-1.jpg

ಕಂಪ್ಲಿ: ಪಟ್ಟಣದ ಸತ್ಯನಾರಾಯಣ ಪೇಟೆಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ನೂತನ ಮಠವನ್ನು ಅಕ್ಟೋಬರ್‌ ಅಥವಾ ನವೆಂಬರ್‌ ತಿಂಗಳಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಮಂತ್ರಾಲಯ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು.

ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀಮಠಕ್ಕೆ ಮಂಗಳವಾರ ರಾತ್ರಿ ಭೇಟಿ ನೀಡಿ ಮಠದ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಪಟ್ಟಣದಲ್ಲಿ ರಾಯರ ಮಠದ ಭಕ್ತರ ಉದಾರ ದೇಣಿಗೆಯಿಂದ ಮಠದ ಕಾಮಗಾರಿ
ಮುಕ್ತಾಯದ ಹಂತದಲ್ಲಿದೆ. ಮಠಕ್ಕೆ ಮತ್ತು ವಸತಿ ಗೃಹಗಳಿಗೆ ಕಿಡಕಿ, ಬಾಗಿಲುಗಳು, ವಿದ್ಯುತ್‌ ಸಂಪರ್ಕ ಸೇರಿದಂತೆ ಇತರೆ ಸಣ್ಣ ಪುಟ್ಟ ಕಾಮಗಾರಿಗಳು ಬಾಕಿ ಇದ್ದು, ಈ ಎಲ್ಲಾ ಕಾಮಗಾರಿಗಳನ್ನು ಶ್ರೀಮಠವು ಮತ್ತು ಭಕ್ತರ ದೇಣಿಗೆಯಿಂದ ಮುಕ್ತಾಯಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಈಗಾಗಲೇ ಪಟ್ಟಣವೂ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ರಾಯರ ಮಠದ ಭಕ್ತರಿಂದ ಸುಮಾರು 13 ಸಾವಿರ ಚದರಡಿಯಲ್ಲಿ ಅಂದಾಜು 2.5 ಕೋಟಿ ರೂ. ವೆಚ್ಚದಲ್ಲಿ ಶ್ರೀಮಠ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತ
ತಲುಪಿದ್ದು, ರಾಯರ ಸನ್ನಿಧಾನಕ್ಕೆ ಸಂತೋಷ ಉಂಟು ಮಾಡಿದೆ. ಇನ್ನು ಸುಮಾರು 35ರಿಂದ 40 ಲಕ್ಷ ರೂ. ವೆಚ್ಚದ ಕಾಮಗಾರಿ ಬಾಕಿ ಇದ್ದು ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಭಕ್ತರ ಸೇವೆಗೆ ಲೋಕಾರ್ಪಣೆ ಮಾಡಲಾಗುವುದು. ನೂತನ ಮಠದಲ್ಲಿ ರಾಯರ ಬೃಂದಾವನ ಕೆತ್ತನೆಯನ್ನು ಹೊಸಪೇಟೆಯ ಖ್ಯಾತ ಶಿಲ್ಪಿ ಗಣೇಶಾಚಾರ್‌ ತಯಾರಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶ್ರೀಮಠದ ದ್ವಾರಪಾಲಕ ಅನಂತ ಪುರಾಣಿಕ, ಮಠದ ಸಿವಿಲ್‌ ಎಂಜಿನಿಯರ್‌ ಸುರೇಶ್‌, ಮಠದ ಸಂಚಾಲಕ ರಾಮಕೃಷ್ಣ ಜಾಗಿರ್‌ದಾರ್‌, ಕಂಪ್ಲಿಯ ಮುಖಂಡರಾದ ಟಿ.ಕೊಟ್ರೇಶ್‌, ವ್ಯಾಸಾಚಾರ್‌, ಶೇಷಗಿರಿ,
ಕೆ.ಅನಂತಪದ್ಮನಾಭ, ಬಿ.ನಿರಂಜನಗುಪ್ತ, ಬಿ.ರವೀಂದ್ರನಾಥ್‌, ಡಿ.ಸುಬ್ರಹ್ಮಣ್ಯ ಶೆಟ್ಟಿ, ಮಂತ್ರಾಲಯ ಮುರಳೀಧರ, ಜಿ.ವಿ.ಕೋಟೇಶ್‌, ವಿಜಯೇಂದ್ರ, ಮೌನೇಶ್‌, ಜಗದೀಶ್‌ ರಾಯ್ಕರ್‌ ಇನ್ನಿತರರಿದ್ದರು. ಶ್ರೀಮಠ ನಿರ್ಮಾಣ
ಕಾರ್ಯಕ್ಕೆ ದೇಣಿಗೆ ನೀಡುವವರು ಶ್ರಿಮಠದ ಭಕ್ತರಾದ ಟಿ.ಕೊಟ್ರೇಶ್‌ ( 9448050350), ಸಾಚಾರ್‌(9448584417) ಮೊಬೈಲ್‌ ಸಂಪರ್ಕಿಸಬಹುದು.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.