ಮಾನ್ಸೂನ್‌ ಫಿಟ್‌ 


Team Udayavani, Aug 3, 2018, 6:00 AM IST

2020.jpg

ತಣ್ಣನೆ ಮಳೆಗೂ ಸೋಮಾರಿತನಕ್ಕೂ ಅವಿನಾಭಾವ ಸಂಬಂಧ. ಕುಳಿತಲ್ಲೇ ಕುಳಿತು, ಮೈ ಜಡ್ಡುಗಟ್ಟಿದ ದೇಹವನ್ನು ಆಲಸ್ಯದ ಗೂಡು ಮಾಡಿಕೊಳ್ಳುವುದು, ಒಂದಿಷ್ಟು ಕುರುಕಲು ತಿಂದು ಆರೋಗ್ಯವನ್ನೂ ಕೆಡಿಸಿಕೊಳ್ಳುವುದು ಪ್ರತಿ ಮಳೆಗಾಲದಲ್ಲಿನ ಸಾಮಾನ್ಯ ಕತೆ. ಅದರಲ್ಲೂ ಮಹಿಳೆಯರ ಆರೋಗ್ಯವನ್ನು ಮಾನ್ಸೂನ್‌ ಇನ್ನಿಲ್ಲದಂತೆ ಹದಗೆಡಿಸುತ್ತದೆ. ದೈಹಿಕವಾಗಿ ಚಟುವಟಿಕೆಯಿಂದ ಇದ್ದರಷ್ಟೇ ಆಕೆ ಮಾನ್ಸೂನ್‌ನ ಅಪಾಯದಿಂದ ತಪ್ಪಿಸಿಕೊಳ್ಳಬಹುದು. ಹಾಗಾದರೆ, ಮಳೆಗಾಲದಲ್ಲಿ ಮಹಿಳೆ ದೈಹಿಕವಾಗಿ ಸದೃಢವಾಗಿರುವುದು ಹೇಗೆ?

1 ಹೊರಗೆ ಜೋರು ಮಳೆ ಸುರೀತಿದೆ ಅಂದಾಕ್ಷಣ ಹೆದರಿ ಕೂರಬೇಕಂತೇನಿಲ್ಲ. ಮೈ ನೆನೆಯದಂತೆ, ಯೋಗ್ಯ ರೈನ್‌ಕೋಟ್‌ ಧರಿಸಿ, ಒಂದಷ್ಟು ಕಿಲೋಮೀಟರ್‌ವರೆಗೆ ಓಡಿರಿ. ಇದರಿಂದ ದೇಹದಲ್ಲಿ ಜೀವರಾಸಾಯನಿಕ ಕ್ರಿಯೆ ಹೆಚ್ಚುತ್ತದೆ. ಬೊಜ್ಜು ಕರಗುವುದಲ್ಲದೇ, ಪಾದಗಳೂ ಮೃದುವಾಗುತ್ತವೆ.

2 ಹೊರಗೆ ಕಾಲಿಟ್ಟರೆ ಶೀತವಾಗುತ್ತದೆ, ಜ್ವರ ಬರುತ್ತದೆ ಎಂಬಷ್ಟು ಸೂಕ್ಷ್ಮ ಆರೋಗ್ಯದವರು ಮನೆಯಲ್ಲಿನ ಮೆಟ್ಟಿಲುಗಳನ್ನೇ ವ್ಯಾಯಾಮ ಕೇಂದ್ರ ಮಾಡಿಕೊಳ್ಳಬಹುದು. 8-10 ಬಾರಿ ಮೆಟ್ಟಿಲನ್ನು ಏರುವುದು, ಇಳಿಯುವುದನ್ನು ಮಾಡಿದರೆ, ಕಾಲುಗಳ ಸ್ನಾಯುಗಳು ಗಟ್ಟಿಯಾಗುತ್ತವೆ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದು. 

3 ಒಂದು ಕಂಬಕ್ಕೆ ಉದ್ದದ, ತೂಕದ ಹಗ್ಗ ಕಟ್ಟಿ ಅದನ್ನು ನಿರಂತರವಾಗಿ ಗಾಳಿಯಲ್ಲಿ ಜಗ್ಗುವುದರಿಂದ ದೇಹಕ್ಕೆ ಅತ್ಯುತ್ತಮ ವ್ಯಾಯಾಮ ಸಿಗುತ್ತದೆ. ಇದನ್ನು “ಬ್ಯಾಟಲ್‌ ರೋಪ್‌’ ವಕೌìಟ್‌ ಅಂತಾರೆ. ಕೇವಲ 20 ನಿಮಿಷ ಈ ಹಗ್ಗ ವ್ಯಾಯಾಮ ಮಾಡಿದರೆ, ದೇಹದ ಅಷ್ಟೂ ಸ್ನಾಯುಗಳಿಗೆ ವ್ಯಾಯಾಮ ಸಿಕ್ಕಂತಾಗುತ್ತದೆ.

4 ಮಳೆಗಾಲದಲ್ಲಿ ದೇಹವನ್ನು ಫಿಟ್‌ ಆಗಿಡಲೆಂದೇ ಒಂದಿಷ್ಟು ಯೋಗಾಸನಗಳೂ ಇವೆ. ಅಧೋಮುಖ ಶ್ವಾಸಾಸನ, ಸೇತು ಬಂಧಾಸನ, ಭುಜಂಗಾಸನ, ನೌಕಾಸನಗಳು ಮಾನ್ಸೂನ್‌ ಸಂಬಂಧಿತ ಜಡತ್ವ ನಿವಾರಿಸಲು ಸಹಕಾರಿ. ಇವೆಲ್ಲದರ ಜತೆ ಪ್ರಾಣಾಯಾಮ ಅನುಸರಿಸುವುದು ಆವಶ್ಯ.

5 ಬೆಳಗ್ಗೆದ್ದ ಕೂಡಲೇ ಕಾಫಿಗೋ, ಚಹಾಕ್ಕೋ ತುಟಿಯೊಡ್ಡುವ ಬದಲು, ಬಿಸಿನೀರಿಗೆ ಲಿಂಬೆರಸ, ತುಸು ಜೇನುತುಪ್ಪ ಬೆರೆಸಿ ನಿತ್ಯವೂ ಸೇವಿಸಬೇಕು. ದೇಹವನ್ನು ಇಡೀ ದಿನ ಆ್ಯಕ್ಟಿವ್‌ ಆಗಿಡಲು ಇದೊಂದು ಕಪ್‌ ಸಾಕು. ರೋಗನಿರೋಧಕ ಶಕ್ತಿ ಹೆಚ್ಚಿಸುವ ಗುಣವೂ ಈ ಪೇಯದಲ್ಲಿದೆ.

6 ಕುರುಕುಲು ತಿಂಡಿ ತಿಂದರೆ, ನಾಲಿಗೆಗೇನೋ ಮಜಾ ಸಿಗುತ್ತೆ. ಮಳೆ ನೋಡ್ತಾ ನೋಡ್ತಾ ಟೈಂಪಾಸೂ ಆಗುತ್ತೆ ಎನ್ನುವುದು ತಪ್ಪು ಕಲ್ಪನೆ. ಕುರುಕಲು ಮೋಹ, ದೇಹದ ಆರೋಗ್ಯವನ್ನು ಹದಗೆಡಿಸುತ್ತದೆ ಎಂಬುದು ಗೊತ್ತಿರಲಿ.

7ಮಾನ್ಸೂನ್‌ನ ಈ 3-4 ತಿಂಗಳ ಕಾಲದಲ್ಲಿ ಭರತನಾಟ್ಯ ಇಲ್ಲವೇ ಯಾವುದಾದರೂ ಒಂದು ನೃತ್ಯ ಪ್ರಕಾರವನ್ನು ಅಭ್ಯಾಸ ಮಾಡಿ. ಮಳೆಯ ನೆಪದಲ್ಲಿ ಕಲೆಯನ್ನು ಅರಗಿಸಿಕೊಂಡರೆ, ಮುಂದೆ ಇದಕ್ಕೆ ಸತ#ಲ ಸಿಕ್ಕೇ ಸಿಗುತ್ತದೆ ಎಂಬುದು ನಿಮಗೆ ತಿಳಿದಿರಲಿ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.