ತೆಕ್ಕಟ್ಟೆ : ಬಸ್‌ ನಿಲ್ದಾಣ ಏಕಾಏಕಿ ಸ್ಥಳಾಂತರ


Team Udayavani, Aug 3, 2018, 6:15 AM IST

0208tke1-3imp.jpg

ತೆಕ್ಕಟ್ಟೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಬಸ್‌ ನಿಲ್ದಾಣವ‌ನ್ನು ಏಕಾಏಕಿ ಸ್ಥಳಾಂತರಿಸಿರುವು ದರ ವಿರುದ್ಧ ಸಾರ್ವಜನಿಕರು ತೆಕ್ಕಟ್ಟೆ ಗ್ರಾ.ಪಂ. ಎದುರು ತೀವ್ರ ಪ್ರತಿಭಟನೆ ನಡೆಸಿದರು. ಬಸ್‌ ತಂಗುದಾಣ ಸ್ಥಳಾಂತರಿಸುವ ಮೊದಲು ಗ್ರಾ.ಪಂ. ಜನಾಭಿಪ್ರಾಯ ಪಡೆದಿಲ್ಲ. ನಿರ್ಣಯವನ್ನೂ ಕೈಗೊಂಡಿಲ್ಲ. ಏಕಾಏಕಿ ಅಪ್ರಸ್ತುತ ಪ್ರದೇಶಕ್ಕೆ ನಿಲ್ದಾಣ ಸ್ಥಳಾಂತರಿಸಲಾಗಿದೆ ಎಂದು ಜನರು ಗುರುವಾರ ನಡೆದ ಪ್ರತಿಭಟನೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ  ತಹಶೀಲ್ದಾರ್‌ ಅವರೂ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು. 

ಮಾತಿನ ಚಕಮಕಿ 
ಬಸ್‌ ನಿಲ್ದಾಣ ಸ್ಥಳಾಂತರ ಬಗ್ಗೆ ಗ್ರಾ.ಪಂ. ನಿರ್ಣಯ ಕೈಗೊಂಡಿದೆಯೇ? ನಿರ್ಣಯ ಕೈಗೊಂಡಿದ್ದರೆ ಅದರ ಪ್ರತಿ ನೀಡುವಂತೆ ಸಾರ್ವಜನಿಕರು ಗ್ರಾ.ಪಂ.ಅಧ್ಯಕ್ಷ ಶೇಖರ್‌ ಕಾಂಚನ್‌ ಅವರನ್ನು ಆಗ್ರಹಿಸಿದರು. ಈ ವೇಳೆ ಮಾತಿನ ಚಕಮಕಿ ನಡೆಯಿತು. ಜತೆಗೆ ಸ್ಥಳೀಯರಾದ ಅವಿನಾಶ್‌ ಶೆಟ್ಟಿ ಪ್ರತಿಕ್ರಿಯಿಸಿ ತಂಗುದಾಣ ವಿಚಾರದಲ್ಲಿ ಗ್ರಾ.ಪಂ.ಗೆ ಸಂಬಂಧವಿಲ್ಲದಿದ್ದರೆ ಲಿಖೀತ ರೂಪದಲ್ಲಿ ಕೊಡಿ. ಅಥವಾ ಗಮನಕ್ಕೆ ತಾರದೆ ಸ್ಥಳಾಂತರಿಸಿದ್ದರೆ ತಂಗುದಾಣ ನಿರ್ಮಿಸಿರುವುದನ್ನು ತತ್‌ಕ್ಷಣವೇ ತೆರವುಗೊಳಿಸಬೇಕು. ಇಲ್ಲದಿದ್ದರೆ  ಉಗ್ರ ಪ್ರತಿಭಟನೆ ನಡೆಸುವುದಾಗಿ ಹೇಳಿದರು. 
 
ಗ್ರಾ.ಪಂ. ಸದಸ್ಯ ವಿಜಯ ಭಂಡಾರಿ, ಸತೀಶ್‌ ದೇವಾಡಿಗ ಕಂಚುಗಾರ್‌ಬೆಟ್ಟು , ಶಂಕರ ದೇವಾಡಿಗ, ಸುಧೀಂದ್ರ ಗಾಣಿಗ, ಶ್ರೀನಾಥ ಶೆಟ್ಟಿ, ಕಿರಣ್‌ ಪೂಜಾರಿ, ಗಣೇಶ್‌, ಶ್ರೀಧರ ಆಚಾರ್ಯ, ದಿನಕರ ಕಂಬಳಗದ್ದೆ ಬೆಟ್ಟು ಮತ್ತಿತರರಿದ್ದರು.

ಏನಿದು ವಿವಾದ?  
ಚತುಷ್ಪಥ ಹೆದ್ದಾರಿ ನಿರ್ಮಾಣದ ವೇಳೆ ಶಾಶ್ವತ ಬಸ್‌ ನಿಲ್ದಾಣಕ್ಕೆ ಅವಕಾಶ ನೀಡದ್ದರಿಂದ ಸ್ಥಳೀಯ ಸಂಘ ಸಂಸ್ಥೆಗಳ ನೆರವಿನಿಂದ ತಾತ್ಕಾಲಿಕ ಬಸ್‌ ನಿಲ್ದಾಣ  ನಿರ್ಮಿಸಲಾಗಿತ್ತು. ಇದರಿಂದ ಮಲ್ಯಾಡಿ ಒಳ ಮಾರ್ಗದಿಂದ ರಾ.ಹೆದ್ದಾರಿಗೆ ಪ್ರವೇಶಿಸುವ ವಾಹನ ಸವಾರರಿಗೆ ಗೊಂದಲ ಏರ್ಪಟ್ಟು ಅವಘಡಕ್ಕೆ ಕಾರಣವಾಗು ತ್ತಿರುವ ಬಗ್ಗೆ  ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಗ್ರಾ.ಪಂ. ಬಸ್‌ ನಿಲುಗಡೆ ಸ್ಥಳ ಬದಲಾಯಿಸಿದ್ದು, ಸೂಚನಾ ಫ‌ಲಕ ಅಳವಡಿಸಿತ್ತು.  

ಮಹತ್ವದ ನಿರ್ಣಯ
ತೆಕ್ಕಟ್ಟೆ ಗ್ರಾ.ಪಂ. ವ್ಯಾಪ್ತಿಯಲ್ಲಿ  ಒಟ್ಟು 4 ತಾತ್ಕಾಲಿಕ ತಂಗುದಾಣಗಳಿವೆ .ಆದರೆ ಯಾವುದಕ್ಕೂ ಕೂಡಾ ಗ್ರಾ.ಪಂ. ಪರವಾನಿಗೆ ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ಮೇಲಧಿಕಾರಿಗಳ ನಿರ್ದೇಶಕ್ಕೆ  ಬದ್ಧರಾಗಿದ್ದು  ಮುಂದಿನ ದಿನಗಳಲ್ಲಿ ಜನಾಭಿಪ್ರಾಯಗಳಿಗೆ ಅನುಗುಣವಾಗಿ ಮಹತ್ವದ ನಿರ್ಣಯವನ್ನು ಕೈಗೊಳ್ಳುತ್ತೇವೆ.

ಶೇಖರ್‌ ಕಾಂಚನ್‌ ಕೊಮೆ
ಅಧ್ಯಕ್ಷರು,ಗ್ರಾ.ಪಂ.ತೆಕ್ಕಟ್ಟೆ.

ಸ್ಥಳ ಪರಿಶೀಲನೆಗೆ ಆದೇಶ 
ಬಸ್‌ ತಂಗುದಾಣದ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ  ಸಂಬಂಧಪಟ್ಟ ಅಧಿಕಾರಿಗಳಲ್ಲಿ ಸ್ಥಳ ಪರಿಶೀಲಿಸುವಂತೆ ಆದೇಶಿಸಿದ್ದೇನೆ. ಸದ್ಯದ ಪರಿಸ್ಥಿತಿಯಲ್ಲಿ ನಿಯಮ ಮೀರಿ ಬಸ್‌ ತಂಗುದಾಣ ನಿರ್ಮಿಸದಂತೆ ಆದೇಶಿಸಲಾಗಿದೆ.

– ಪ್ರಿಯಾಂಕಾ ಮೇರಿ  ಫ್ರಾನ್ಸಿಸ್‌,ಜಿಲ್ಲಾಧಿಕಾರಿಗಳು

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.