ಯಶಸ್ಸಿನತ್ತ ಸ್ವಚ್ಚ ಭಾರತ: ಹಿಂದುಳಿಯದಿರಲಿ ಕರ್ನಾಟಕ  


Team Udayavani, Aug 4, 2018, 6:00 AM IST

c-3.jpg

ದೇಶವನ್ನು ಬಯಲು ಶೌಚ ಮುಕ್ತಗೊಳಿಸಲು ಕೇಂದ್ರ ಸರಕಾರ ಸಮರೋಪಾದಿಯಲ್ಲಿ ಕೈಗೊಂಡಿದ್ದ ಅಭಿಯಾನ ಯಶಸ್ಸಿನತ್ತ ಮುಖ ಮಾಡಿರುವುದು ಒಂದು ಆಶಾದಾಯಕ ಬೆಳವಣಿಗೆ. ಅದರಲ್ಲೂ ಗ್ರಾಮೀಣ ಭಾರತವನ್ನು ಬಯಲು ಶೌಚ ಮುಕ್ತಗೊಳಿಸುವ ಗುರಿ ಅಸಾಧ್ಯವೆಂದೇ ಭಾವಿಸಲಾಗಿತ್ತು. ಕೇಂದ್ರ ಮತ್ತು ರಾಜ್ಯ ಸರಕಾರಗಳ ಸತತ ಪ್ರಯತ್ನಗಳಿಂದ ಈ ಅಸಾಧ್ಯ ಗುರಿಯ ಸನಿಹ ತಲುಪಿರುವುದು, ಯಾವುದೇ ಕಾರ್ಯಕ್ರಮವನ್ನು ಬದ್ಧತೆಯಿಂದ ಅನುಷ್ಠಾನಿಸಿದರೆ ಯಶಸ್ವಿಯಾಗಬಹುದು ಎನ್ನುವುದನ್ನು ತೋರಿಸಿಕೊಟ್ಟಿದೆ. 

ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯ ನಡೆಸಿರುವ ಸಮೀಕ್ಷೆ ಪ್ರಕಾರ ಬಯಲು ಶೌಚ ಮುಕ್ತ ಅಭಿಯಾನ ಶೇ.90ರಷ್ಟು ಗುರಿ ಸಾಧಿಸಿದೆ. ಗ್ರಾಮೀಣ ಭಾಗಗಳಲ್ಲಿ ಬಯಲು ಶೌಚಕ್ಕೆ ಹೋಗುವವರ ಸಂಖ್ಯೆ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂಬ ಅಂಶ ಈ ಸಮೀಕ್ಷೆಯಿಂದ ವ್ಯಕ್ತವಾಗಿದೆ. 2014ರಲ್ಲಿ ಗ್ರಾಮೀಣ ಭಾಗಗಳಲ್ಲಿ 55 ಕೋಟಿ ಜನರು ಬಯಲು ಶೌಚವನ್ನು ಆಶ್ರಯಿಸಿದ್ದರು. 2018ಕ್ಕಾಗುವ ಈ ಸಂಖ್ಯೆ 25 ಕೋಟಿಗಿಳಿದಿದೆ. ಇಷ್ಟರ ತನಕ ಸುಮಾರು 296 ಜಿಲ್ಲೆಗಳು, 3,07,349 ಹಳ್ಳಿಗಳನ್ನು ಬಯಲು ಶೌಚಮುಕ್ತ ಎಂದು ಘೋಷಿಸಲಾಗಿದ್ದು, ಭಾರತದ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ಸಾಧನೆ ಚಿಕ್ಕದಲ್ಲ. ಸಿಕ್ಕಿಂ, ಹಿಮಾಚಲ ಪ್ರದೇಶ, ಕೇರಳ, ಹರ್ಯಾಣ, ಉತ್ತರಖಂಡ, ಛತ್ತೀಸ್‌ಗಢ, ಅರುಣಾಚಲ್‌ ಪ್ರದೇಶ, ಗುಜರಾತ್‌, ದಮನ್‌-ದಿಯು ಮತ್ತು ಚಂಡೀಗಢ ರಾಜ್ಯಗಳು ಸಂಪೂರ್ಣ ಬಯಲು ಶೌಚ ಮುಕ್ತ ಎಂದು ಘೋಷಿಸಿಕೊಂಡಿವೆ. 

ಬಯಲು ಶೌಚ ಅನೇಕ ಆರೋಗ್ಯ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗಿತ್ತು. ಹಳ್ಳಿಗಳಲ್ಲಿ ಮಹಿಳೆಯರು ಶೌಚಕ್ಕೆ ಹೋಗಲು ರಾತ್ರಿಯಾಗುವ ತನಕ ಕಾಯುವ ದಯನೀಯ ಪರಿಸ್ಥಿತಿಯಿತ್ತು. ಇದನ್ನೇ ಕಾದು ಕುಳಿತುಕೊಂಡು ಪುಂಡರು ಅವರ ಮೇಲೆ ಹಲ್ಲೆ ಮಾಡುತ್ತಿದ್ದರು. ವರ್ಷದಲ್ಲಿ ಸುಮಾರು 1 ಲಕ್ಷ ಮಕ್ಕಳು ಬಯಲು ಶೌಚ ಸಂಬಂಧಿ ಕಾಯಿಲೆಗಳಿಗೆ ಬಲಿಯಾಗುತ್ತಿದ್ದರು ಎಂಬಿತ್ಯಾದಿ ದಾರುಣವಾದ ಅಂಕಿಅಂಶಗಳು ನಮ್ಮ ಮುಂದಿದ್ದವು. ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೇರಿದ ಕೂಡಲೇ ಇದನ್ನು ಸವಾಲಾಗಿ ಪರಿಗಣಿಸಿ ಸ್ವಚ್ಚ ಭಾರತ ಅಭಿಯಾನವನ್ನು ಪ್ರಾರಂಭಿಸಿ ಸಮರೋಪಾದಿಯಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ಮುಂದಾಯಿತು. ಹೀಗೆ ಶುರುವಾದ ಅಭಿಯಾನವೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ನ್ಯೂಯಾರ್ಕ್‌ ಟೈಮ್ಸ್‌ನಂಥ ಪ್ರತಿಷ್ಠಿತ ಪತ್ರಿಕೆಗಳೇ ಬಯಲು ಶೌಚ ಮುಕ್ತ ಅಭಿಯಾನದ ಯಶಸ್ಸಿನ ಬಗ್ಗೆ ಸಂಪಾದಕೀಯ ಬರೆದಿದೆ. ದೇಶದ ಅಭಿವೃದ್ಧಿಯ ನೆಲೆಯಲ್ಲೂ ಇದೊಂದು ಈಡೇರಲೇಬೇಕಾದ ಕಾರ್ಯವೆನ್ನುವುದೂ ಸ್ಪಷ್ಟ. 

ಕರ್ನಾಟಕವೂ ಈ ಅಭಿಯಾನದಲ್ಲಿ ಸಕ್ರಿಯವಾಗಿ ಕೈಜೋಡಿಸಿದೆ. ಬಯಲು ಶೌಚ ಮುಕ್ತ ರಾಜ್ಯವಾಗುವತ್ತ ರಾಜ್ಯ ದಾಪುಗಾಲು ಇಡುತ್ತಿದೆ. ಇದರಲ್ಲಿ ಶೇ. 90 ಯಶಸ್ಸು ಸಾಧಿಸಲಾಗಿದೆ. ಆದರೂ ಹೈದರಾಬಾದ್‌ ಕರ್ನಾಟಕ, ಉತ್ತರ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಇನ್ನೂ ನಿರೀಕ್ಷಿತ ಪ್ರಗತಿಯಾಗದಿರುವುದು ಮಾತ್ರ ದುರದೃಷ್ಟಕರ. ರಾಜ್ಯದಲ್ಲಿ ಇನ್ನೂ 10 ಜಿಲ್ಲೆಗಳು, 61 ತಾಲೂಕುಗಳು , 108 ಸ್ಥಳೀಯ ಸಂಸ್ಥೆಗಳು, 1915 ಗ್ರಾಮ ಪಂಚಾಯಿತಿಗಳು ಬಯಲು ಶೌಚ ಮುಕ್ತಗೊಳ್ಳಬೇಕಿವೆ. 2019ಕ್ಕಾಗುವಾಗ ಇಡೀ ದೇಶವನ್ನು ಬಯಲು ಶೌಚ ಮುಕ್ತಗೊಳಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಹೀಗಾಗಿ ಇನ್ನೂ ಬಯಲು ಶೌಚ ಜಾರಿಯಲ್ಲಿರುವ ಭಾಗಗಳಿಗೆ ಸರಕಾರ ತುರ್ತು ಗಮನ ಹರಿಸುವ ಅವಶ್ಯಕತೆಯಿದೆ. ರಾಜ್ಯ ಈ ಅಭಿಯಾನದಲ್ಲಿ ಇಷ್ಟಾದರೂ ಸಾಧನೆ ಮಾಡಲು ಸಾಧ್ಯವಾದದ್ದು ಹಿಂದಿನ ಗ್ರಾಮೀಣಾಭಿವೃದ್ಧಿ ಸಚಿವ ಎಚ್‌. ಕೆ. ಪಾಟೀಲ್‌ ಅವರ ಪ್ರಯತ್ನದಿಂದಾಗಿ ಎನ್ನುವುದು ಉಲ್ಲೇಖೀಸಲೇ ಬೇಕಾದ ವಿಚಾರ. 

ಸ್ವಚ್ಚ ಭಾರತ ಮಿಷನ್‌ನಡಿ ಶೌಚಾಲಯ ನಿರ್ಮಾಣದಲ್ಲಿ ಕರ್ನಾಟಕ ಇನ್ನೂ 21ನೇ ಸ್ಥಾನದಲ್ಲಿರುವುದು ಬೇಸರ ವಿಷಯ. ಹಾಗೇ ನೋಡಿದರೆ ಕಳೆದ ಮಾರ್ಚ್‌ಗೆ ರಾಜ್ಯ ಸಂಪೂರ್ಣ ಬಯಲು ಶೌಚ ಮುಕ್ತ ಎಂದು ಘೋಷಿಸಲ್ಪಡಬೇಕಿತ್ತು. ಹೈದರಾಬಾದ್‌ ಕರ್ನಾಟಕದ ಬೀದರ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಪ್ರಗತಿ ಕುಂಠಿತವಾಗಿರುವ ಕಾರಣ ಇದು ಸಾಧ್ಯವಾಗಿಲ್ಲ.ಈ ಭಾಗದ ಜನಪ್ರತಿನಿಧಿಗಳು, ಸ್ಥಳೀಯಾಡಳಿತಗಳು ಇನ್ನಾದರೂ ಈ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ಮಾಡುವುದು ಅನಿವಾರ್ಯ. ಜನರಲ್ಲಿ ಜಾಗೃತಿ ಮೂಡಿಸುವುದಷ್ಟೇ ಅಲ್ಲ ; ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಸಿಬಂದಿಯಲ್ಲೂ ಯೋಜನೆಯ ನಿಜವಾದ ಕಾಳಜಿಯನ್ನು ಸರಕಾರ ಅರ್ಥೈಸಬೇಕು. ಅಭಿವೃದ್ಧಿಯ ಹಲವು ಮಾನದಂಡಗಳಲ್ಲಿ ಅಗ್ರಸ್ಥಾನದಲ್ಲಿರುವ ಕರ್ನಾಟಕ ಬಯಲು ಶೌಚ ಮುಕ್ತಗೊಳಿಸುವ ವಿಚಾರದಲ್ಲಿ ಹಿಂದುಳಿಯುವುದು ಒಂದು ಕಪ್ಪುಚುಕ್ಕೆಯಾಗಿ ಉಳಿಯಬಹುದು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17

Baratang‌ Island: ಬಾರಾತಂಗ್‌ ಎಂಬ ಬೆರಗು

Mother’s Day: ಅಮ್ಮ ಅಂದರೆ ಪ್ರೀತಿಯ ಕಡಲು, ಮಮತೆಯ ಮಡಿಲು 

Mother’s Day: ಅಮ್ಮ ಅಂದರೆ ಪ್ರೀತಿಯ ಕಡಲು, ಮಮತೆಯ ಮಡಿಲು 

11

ಮೊಬೈಲ್‌ ಮಾಯಾಜಾಲ ರೀಲ್ಸ್‌ ಇಂದ್ರಜಾಲ!: ರೀಲ್‌ಗ‌ಳಿಗೆ ಮರುಳಾಗಬೇಡಿ, ನೆನಪು ಕುಂದುತ್ತೆ 

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.