2 ತಿಂಗಳಿಂದ ಡ್ರೈವಿಂಗ್‌ ಲೈಸೆನ್ಸ್‌ -ಬಂದ್‌ !


Team Udayavani, Aug 4, 2018, 10:20 AM IST

rto-office.jpg

ಮಂಗಳೂರು: ಸಾಫ್ಟ್ವೇರ್‌ ಅಳವಡಿಕೆ ವಿಳಂಬದಿಂದ ಸಾರ್ವಜನಿಕರು ಡ್ರೈವಿಂಗ್‌ ಲೈಸೆನ್ಸ್‌ಗಾಗಿ ನಿತ್ಯವೂ ಅಲೆದಾಡುವ ಸ್ಥಿತಿ ಉದ್ಭವಿಸಿದೆ. ಕಲಿಕಾ ಮತ್ತು ಚಾಲನಾ ಪರವಾನಗಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಜೂ.1ರಿಂದ ಮಂಗಳೂರಿನಲ್ಲಿ ಜಾರಿ ಗೊಳಿಸಿದ “ಸಾರಥಿ-4′ ಸಾಫ್ಟ್ವೇರ್‌ ಅಳವಡಿಕೆಯಲ್ಲಿ ತಾಂತ್ರಿಕ ಸಮಸ್ಯೆ ಉಂಟಾಯಿತು. ಇದುವರೆಗೂ ಬಗೆಹರಿಯದ ಕಾರಣ ಎರಡು ತಿಂಗಳಿನಿಂದ ಚಾಲನಾ ಪರವಾನಿಗೆಯೇ ವಿಲೇವಾರಿ ಆಗಿಲ್ಲ.

ಒಂದೆಡೆ ಹೊಸ ಪರವಾನಿಗೆ ಸಿಗುತ್ತಿಲ್ಲ. ಇನ್ನೊಂದೆಡೆ ನವೀಕರಣವೂ ಆಗುತ್ತಿಲ್ಲ. ಮಂಗಳೂರಲ್ಲದೇ, ಬಂಟ್ವಾಳ ಹಾಗೂ ಪುತ್ತೂರು ಆರ್‌ಟಿಓ ಕಚೇರಿಗಳಲ್ಲೂ ಇದೇ ಸಮಸ್ಯೆ ಚಾಲಕರನ್ನು ಕಾಡುತ್ತಿದೆ. ಆರ್‌ಟಿಓ ಕಚೇರಿಯನ್ನು ಸಾರ್ವಜನಿಕ ಸ್ನೇಹಿ ಹಾಗೂ ಪೇಪರ್‌ಲೆಸ್‌ ಮಾಡಲೆಂದು “ವಾಹನ-4′ ಹಾಗೂ “ಸಾರಥಿ 4′ ಸಾಫ್ಟ್ವೇರ್‌ ಯೋಜನೆಯನ್ನು ದೇಶಾ ದ್ಯಂತ ಜಾರಿಗೊಳಿಸಲಾಗಿತ್ತು. ಆನ್‌ಲೈನ್ ಮೂಲಕವೇ ಸಾಕಷ್ಟು ಕೆಲಸವಾಗುವುದ ರಿಂದ ಸಾರ್ವಜನಿಕರ ಕೆಲಸಗಳು ತ್ವರಿತಗತಿಯಲ್ಲಿ ಆಗುತ್ತದೆಂದು ನಿರೀಕ್ಷಿಸಲಾಗಿತ್ತು. ಆದರೆ, ಮಂಗಳೂರಲ್ಲಿ ಇದು ಸಾಧ್ಯವೇ ಆಗಿಲ್ಲ. 

ಏನಿದು ಸಮಸ್ಯೆ?
ಕೆಲ ವರ್ಷಗಳಿಂದ ಸಾರಥಿ-3 ಸಾಫ್ಟ್ವೇರ್‌ ಅನುಷ್ಠಾನದಲ್ಲಿತ್ತು. ಎಲ್‌ಎಲ್‌ಆರ್‌ ಮತ್ತು ಡಿಎಲ್‌ ಪಡೆಯಲು ಅಭ್ಯರ್ಥಿಗಳು ವಿವರಗಳನ್ನು ಆನ್‌ಲೈನ್‌ ಅರ್ಜಿಯಲ್ಲಿ ಸಲ್ಲಿಸಬೇಕಿತ್ತು.ಬಳಿಕ ಆರ್‌ಟಿಒ ಕಚೇರಿಗೆ ತೆರಳಿ ಆನ್‌ಲೈನ್‌ನಲ್ಲಿ ನೀಡಿದ್ದ ದಾಖಲೆಗಳ ಪ್ರತಿ ಸಲ್ಲಿಸಿ ಸಹಿ ಹಾಕಬೇಕಿತ್ತು. ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಲು ಸಾರಥಿ-4 ಸಾಫ್ಟ್ವೇರ್‌ ಅನುಷ್ಠಾನಕ್ಕೆ ತರಲಾಗಿದ್ದು, ಅದರಂತೆ ಅರ್ಜಿ ಪಡೆಯಲಾಗುತ್ತದೆ. ಚಾಲನಾ ಪರೀಕ್ಷೆಯನ್ನೂ ನಡೆಸಲಾಗುತ್ತದೆ. ಆದರೂ ಪರವಾನಿಗೆ ವಿತರಿಸುತ್ತಿಲ್ಲ. ಈ ಬಗ್ಗೆ ಆರ್‌ಟಿಓ ಕಚೇರಿಯನ್ನು ವಿಚಾರಿಸಿದರೆ, ಕೆಲವು ತಾಂತ್ರಿಕ ಕಾರಣದಿಂದ ಪರವಾನಗಿ ಮುದ್ರಣ ವಾಗುತ್ತಿಲ್ಲ. ಸದ್ಯವೇ ಸರಿಯಾಗಲಿದೆ ಎನ್ನುತ್ತಾರೆ.

ಹಳೆಯ ಲೈಸೆನ್ಸ್‌ ಕೊಡುವುದು ಮುಗಿದಿಲ್ಲ!
ಇಲಾಖೆಯು ಸಾರಥಿ-4ರ ಮೂಲಕ ಪರವಾನಗಿ ನೀಡಬೇಕಾದರೆ ಸಾರಥಿ-3ರ ಎಲ್ಲಾ ಕಡತಗಳು ವಿಲೇವಾರಿಯಾಗಬೇಕು. ಅಧಿಕಾರಿಗಳು ಹೇಳುವ ಪ್ರಕಾರ ಸದ್ಯ ಸಾರಥಿ-3 ಕಡತ ವಿಲೇವಾರಿ ನಡೆಯುತ್ತಿದ್ದು, ಇನ್ನೂ ಹತ್ತು ದಿನಗಳು ಬೇಕು. ಆ ಬಳಿಕವಷ್ಟೇ ಡಿಎಲ್‌ ವಿತರಣೆ ಮಾಡಲಿದೆಯಂತೆ.

ಕೆಲಸ ಕಳೆದುಕೊಂಡ ಚಾಲಕರು!
ಚಾಲನಾ ಪರವಾನಗಿ ನವೀಕರಣ ಸಮಯದಲ್ಲಿ ಸಾರಿಗೆ ಇಲಾಖೆಯಲ್ಲಿ ವಾಹನದ ವಾರಸುದಾರರಿಗೆ ಚಲನ್‌ ಕಟ್ಟಿದ ರಸೀದಿ ನೀಡುತ್ತಾರೆ. ಇದರಲ್ಲಿ ಡಿಎಲ್‌ ನಂಬರ್‌, ದಿನಾಂಕ ಸೇರಿದಂತೆ ಇನ್ನಿತರ ಮಾಹಿತಿ ಇರುತ್ತದೆ. ಒಂದು ವೇಳೆ ವಾಹನ ಚಾಲನೆ ಸಮಯದಲ್ಲಿ ಆರ್‌ಟಿಒ ಅಧಿಕಾರಿಗಳು ತಪಾಸಣೆ ನಡೆಸಿದರೆ ಈ ರಸೀದಿಯನ್ನು ತೋರಿಸಬಹುದು. ಆದರೆ, ಮಂಗಳೂರಿನಿಂದ ದೂರದ ಊರಿಗೆ ತೆರಳುವ ಕೆಲ ಖಾಸಗಿ ಬಸ್‌ಗಳ ಚಾಲಕರಿಗೆ ಮಾಲಕರು ಡಿಎಲ್‌ ಕಡ್ಡಾಯ ಮಾಡಿದ್ದಾರೆ. ಇದೇ ಕಾರಣದಿಂದ ಅನೇಕ ಚಾಲಕರು ಕೆಲಸಕ್ಕೆ ತೆರಳುತ್ತಿಲ್ಲ. ಈ ಬಗ್ಗೆ “ಉದಯವಾಣಿ’ ಜತೆಗೆ ಪ್ರತಿಕ್ರಿಯಿಸಿದ ಖಾಸಗಿ ಬಸ್ಸಿನ ಚಾಲಕ ಮೋಹನ್‌,ನಾನು ಮುಂಬಯಿ-ಬೆಂಗಳೂರು-ಮಂಗಳೂರು ಖಾಸಗಿ ಬಸ್‌ನಲ್ಲಿ ಚಾಲಕನಾಗಿದ್ದೆ. ಈಗ ಪರವಾನ‌ಗಿ ನವೀಕರಣಗೊಳ್ಳದ ಹಿನ್ನೆಲೆಯಲ್ಲಿ ಒಂದೂವರೆ ತಿಂಗಳಿನಿಂದ ಕೆಲಸಕ್ಕೆ ತೆರಳಲಾಗುತ್ತಿಲ್ಲ. ಆರ್‌ಟಿಒ ಸಂಸ್ಥೆಗೆ ಹೋದರೆ ಇಲ್ಲ ಸಲ್ಲದ ಸಬೂಬು ಹೇಳುತ್ತಿದ್ದಾರೆ ಎನ್ನುತ್ತಾರೆ. 

2,500ರಷ್ಟು ಮಂದಿಗೆ ಪರವಾನಗಿ ಸಿಕ್ಕಿಲ್ಲ
ಸಾರಥಿ 4 ಅನುಷ್ಠಾನಗೊಳ್ಳುವ ಮೊದಲು ಪ್ರತೀದಿನ ಕಡಿಮೆ ಅಂದರೂ ಸುಮಾರು 50ರಷ್ಟು ಅರ್ಜಿಗಳು ಚಾಲನಾ ಪರವಾನಿಗೆಗೆ ಬರುತ್ತಿದ್ದವು. ಅಂದರೆ ತಿಂಗಳಿನಲ್ಲಿ 5 ರಜೆ ಹೊರತುಪಡಿಸಿ 25 ದಿನದಲ್ಲಿ ಸುಮಾರು 1250ರಷ್ಟು ಅರ್ಜಿಗಳನ್ನು ಸ್ವೀಕರಿಸ ಲಾಗುತ್ತಿತ್ತು. ಅಂದರೆ ಎರಡು ತಿಂಗಳಿನಲ್ಲಿ 2500 ರಷ್ಟು ಅರ್ಜಿಗಳು ಸಲ್ಲಿಕೆಯಾಗಿವೆ. ಇವರ್ಯಾರಿಗೂ ಇನ್ನೂ ಪರವಾನಗಿ ಸಿಕ್ಕಿಲ್ಲ. ಜತೆಗೆ ನವೀಕರಣದ ಲೈಸೆನ್ಸ್‌ನ ಪ್ರಕಾರ ಸುಮಾರು 600ರಷ್ಟು ಅರ್ಜಿಗಳು ವಿಲೇವಾರಿ ಆಗಬೇಕಿದೆ.

“10 ದಿನದೊಳಗೆ ಪರಿಹಾರ’
ಮಂಗಳೂರು ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಸಾರಥಿ-3 ವಿಲೇವಾರಿ ಕೆಲಸ ನಡೆಯುತ್ತಿದೆ. ಆದ್ದರಿಂದ ಸಾರಥಿ-4 ಚಾಲನಾ ಪರವಾನಗಿ ಮುದ್ರಣವಾಗುತ್ತಿಲ್ಲ. ಇದೇ ಕಾರಣದಿಂದ ಸುಮಾರು 3000ದಷ್ಟು ಡಿಎಲ್‌/ನವೀಕರಣ ಬಾಕಿ ಇದೆ. ಮುಂದಿನ 10 ದಿನಗಳೊಳಗೆ ಸರಿಪಡಿಸಲಾಗುತ್ತದೆ. ಮುಂದೆ ಈ ರೀತಿಯ ಸಮಸ್ಯೆ ಉದ್ಭವಿಸುವುದಿಲ್ಲ. 
  -ಸಿ.ಡಿ. ನಾಯಕ್‌, 
ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಗಳೂರು

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.