ಚಂಪಾ ಕ್ರೀಡಾಂಗಣದಲ್ಲಿ ಸ್ಕೇಟಿಂಗ್‌ ರಿಂಕ್‌


Team Udayavani, Aug 4, 2018, 10:34 AM IST

gul-2.jpg

ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ಸ್ಕೇಟಿಂಗ್‌ ರಿಂಕ್‌ ನಿರ್ಮಿಸಲು ಜಿಲ್ಲಾ ಕ್ರೀಡಾಂಗಣ ಸಮಿತಿ ನಿರ್ಧರಿಸಿದೆ ಎಂದು ಪ್ರಾದೇಶಿಕ ಆಯುಕ್ತ ಹಾಗೂ ಎಚ್‌.ಕೆ.ಆರ್‌.ಡಿ.ಬಿ. ಕಾರ್ಯದರ್ಶಿ ಸುಬೋಧ ಯಾದವ ತಿಳಿಸಿದರು.

ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ
ಎಚ್‌.ಕೆ.ಆರ್‌.ಡಿ.ಬಿ ಮಂಡಳಿಯಿಂದ 20 ಲಕ್ಷ ರೂ., ಉಳಿದ 20 ಲಕ್ಷ ರೂ. ಅನುದಾನವನ್ನು ಶಾಸಕರು ಹಾಗೂ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅನುದಾನ ಪಡೆದು ಸ್ಕೇಟಿಂಗ್‌ ರಿಂಕ್‌ ನಿರ್ಮಿಸಲಾಗುವುದು ಎಂದರು.

ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಫುಟ್‌ ಬಾಲ್‌ ಮತ್ತು ಕ್ರಿಕೆಟ್‌ಗೆ ಪ್ರತ್ಯೇಕ ಆಟದ ಮೈದಾನದ ಕೊರತೆಯಿರುವ ಹಿನ್ನೆಲೆಯಲ್ಲಿ ಈಜುಕೊಳ ಹಿಂದುಗಡೆ ಲೋಕೋಪಯೋಗಿ ಇಲಾಖೆಗೆ ಸೇರಿದ ಏಳು ಎಕರೆ ನಿವೇಶನ ಲಭ್ಯವಿದೆ. ಇದನ್ನು ಕ್ರೀಡಾ ಇಲಾಖೆಗೆ ಪಡೆದು ಅಲ್ಲಿ ಕ್ರಿಕೆಟ್‌ ಮತ್ತು ಫುಟ್‌ಬಾಲ್‌ ಮೈದಾನ ನಿರ್ಮಿಸಬಹುದಾಗಿದೆ ಎಂದು ಹೇಳಿದರು.

ಈ ಏಳು ಎಕರೆ ಜಮೀನನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಉಚಿತವಾಗಿ ನೀಡಲು ಲೋಕೋಪಯೋಗಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ. ಅಲ್ಲದೆ ನಗರದ ಬಡೇಪುರ ಪ್ರದೇಶದ ವಿರೇಂದ್ರ ಪಾಟೀಲ ಬಡಾವಣೆಯಲ್ಲಿ ಲಭ್ಯವಿರುವ 2.75 ಎಕರೆ ಜಮೀನಿನಲ್ಲಿ ಕ್ರಿಕೆಟ್‌ ಪ್ರಾಕ್ಟಿಸ್‌ ಪಿಚ್‌ ಮತ್ತು ವಿವಿಧ ಕ್ರೀಡಾ ಸೌಲಭ್ಯ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಇತ್ತೀಚೆಗೆ ಕ್ರೀಡಾಂಗಣದಲ್ಲಿನ ಮಕ್ಕಳ ಈಜುಕೊಳ ದುರಸ್ತಿ ಮಾಡಿದರೂ ಸೋರಿಕೆಯಾಗುತ್ತಿದೆ. ವಾರದೊಳಗೆ ಇದನ್ನು ದುರಸ್ತಿ ಮಾಡಬೇಕು. ಕ್ರೀಡಾಂಗಣದಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಿಸಲಾಗಿದೆ. ಇದಕ್ಕೆ ಕೂಡಲೆ ಪೈಪ್‌ಲೈನ್‌ ಸಂಪರ್ಕ ಕಲ್ಪಿಸಬೇಕು ಎಂದು ಸೂಚಿಸಿದರು.
 
ನಿರ್ಮಿತಿ ಕೇಂದ್ರದ ಅಧಿಕಾರಿಗಳು ಜಿಲ್ಲಾ ಕ್ರೀಡಾಧಿಕಾರಿಗಳೊಂದಿಗೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ
ವಿವಿಧ ಕಾಮಗಾರಿಗಳ ಪ್ರಗತಿಯನ್ನು ಜಂಟಿ ಸಮೀಕ್ಷೆ ಮಾಡಿ ಪರಿಶೀಲಿಸಬೇಕು. ಪೂರ್ಣಗೊಳ್ಳದ ಕಾಮಗಾರಿಗಳನ್ನು ಶೀಘ್ರ ಮುಗಿಸಬೇಕು. ಕ್ರೀಡಾಂಗಣದಲ್ಲಿನ ಶೌಚಾಲಯಗಳಲ್ಲಿ ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದರು.

ಜಿಲ್ಲಾ ಕ್ರೀಡಾಂಗಣ ಸಮಿತಿಯಲ್ಲಿ ಕ್ರೀಡಾ ಕ್ಷೇತ್ರದ ಸದಸ್ಯರನ್ನು ನೇಮಕ ಮಾಡಬೇಕು. ಸಮಿತಿಗೆ ಪೂರಕವಾಗಿ ಜಿಲ್ಲಾ ಕ್ರೀಡಾಂಗಣ ಕಾರ್ಯನಿರ್ವಾಹಕ ಸಮಿತಿ ರಚಿಸಬೇಕು. ಬಳಕೆದಾರರನ್ನು ಸಮಿತಿಗೆ ನೇಮಿಸಿದರೆ ಕ್ರೀಡಾ ಸೌಲಭ್ಯಗಳನ್ನು ಇನ್ನಷ್ಟು ಉತ್ಕೃಷ್ಟಗೊಳಿಸಬಹುದಾಗಿದೆ ಎಂದರಲ್ಲದೆ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕ್ಯಾಂಟಿನ್‌ ಪ್ರಾರಂಭಿಸಲು ಕೂಡಲೆ ಟೆಂಡರ್‌ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೇಂದ್ರ ಸರ್ಕಾರದ “ಖೇಲೋ ಇಂಡಿಯಾ’ ಯೋಜನೆಯಡಿ ಕ್ರೀಡಾಂಗಣದಲ್ಲಿ ಫುಟಬಾಲ್‌, ಹಾಕಿ ಸಿಂಥೆಟಿಕ್‌ ಹಾಗೂ ಜುಡೋ, ರೆಸ್ಟಲಿಂಗ್‌ ಹಾಲ್‌
ನಿರ್ಮಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅಗತ್ಯ ಕ್ರಮ ಲೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್‌.ಜಿ. ನಾಡಗೀರ ಮಾತನಾಡಿ, ಕ್ರೀಡಾಂಗಣದಲ್ಲಿ 17 ಕ್ರೀಡಾ ಸೌಲಭ್ಯಗಳಿವೆ. ಪ್ರತಿ ದಿನ 900ಕ್ಕಿಂತ ಹೆಚ್ಚು ಕ್ರೀಡಾ ಪಟುಗಳು ಇದರ ಸೌಲಭ್ಯ ಪಡೆಯುತಿದ್ದಾರೆ ಎಂದರು.

ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಏಕಾಂತಪ್ಪ, ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ವಿಧಾನ ಪರಿಷತ್‌ ಸದಸ್ಯ ಬಿ.ಜಿ. ಪಾಟೀಲ ಸಲಹೆ ನೀಡಿದರು. ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ, ಜಿಪಂ ಸಿಇಒ ಹೆಪ್ಸಿಬಾರಾಣಿ ಕೋರ್ಲಪಾಟಿ, ಪ್ರೊಬೇಷನರಿಐ.ಎ.ಎಸ್‌. ಅಧಿಕಾರಿ ಸ್ನೇಹಲ್‌ ಸುಧಾಕರ ಲೋಕಂಡೆ ಹಾಜರಿದ್ದರು.

ಟಾಪ್ ನ್ಯೂಸ್

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-uv-fusion

UV Fusion: ಆರಾಮಕ್ಕಿರಲಿ  ವಿರಾಮ…

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.