ಅಡಿಕೆ ಮರ ಏರಿ ಔಷಧ ಸಿಂಪಡಿಸುವ ದಿಟ್ಟೆ!


Team Udayavani, Aug 4, 2018, 11:09 AM IST

4-agust-3.jpg

ಸುಳ್ಯ : ಅಡಿಕೆ ಮರ ಏರಿ ಔಷಧ ಸಿಂಪಡಿಸುವುದು, ಅಡಿಕೆ ಕೊಯ್ಯುವುದು ಅಂದಾಗ ತತ್‌ಕ್ಷಣ ನೆನಪಾಗುವುದು ಪುರುಷ ಕಾರ್ಮಿಕರು. ಆದರೆ ಇಲ್ಲೊಬ್ಬಳು ಮಹಿಳೆ ಪುರುಷರಿಗಿಂತ ತಾನು ಕಡಿಮೆ ಇಲ್ಲ ಅನ್ನುವುದನ್ನು ಸಾಬೀತುಪಡಿಸಿದ್ದಾರೆ. ಅಡಿಕೆ ಮರ ಏರುವ, ಮದ್ದು ಸಿಂಪಡಿಸುವ ಮೂಲಕ ಅದನ್ನು ಸಾಧಿಸಿ ತೋರಿಸಿದ್ದಾರೆ. ಅಡ್ಕಾರು ಕೋನಡ್ಕಪದವಿನ ಚಂದ್ರಲೇಖಾ ತನ್ನ ಮನೆಯ ತೋಟಕ್ಕೆ ತಾನೇ ಔಷಧ ಸಿಂಪಡಿಸುತ್ತಿರುವ ವಿಶಿಷ್ಟ ಸಾಧಕಿ.

ಇದು ಸುಲಭದ ಕೆಲಸ ಅಲ್ಲ. ಎಲ್ಲ ಪುರುಷರಿಗೂ ಸಾಧ್ಯವಿಲ್ಲ. ಗ್ರಾಮದಲ್ಲಿ ಮೂರು ನಾಲ್ಕು ಮಂದಿ ನಿಪುಣರಷ್ಟೇ ಇರುತ್ತಾರೆ. ಅಂತಹದ್ದರಲ್ಲಿ ಮಹಿಳೆ ತಾನೇನೂ ಕಮ್ಮಿ ಇಲ್ಲ ಎಂದು ಸಾಧಿಸಿ ತೋರಿಸಿದ್ದಾರೆ. ಕಂಟ್ರೋಲರ್‌ ಹಿಡಿದು, ದಿನಪೂರ್ತಿ ಮರದ ಮೇಲೆ ನಿಂತು ಔಷಧ ಸಿಂಪಡಿಸುವ ಕಷ್ಟದ ಕಾಯಕಕ್ಕೆ ಮೂರು ವರ್ಷ ಸಂದಿದೆ.

ಅಡಿಕೆ ಮರ ಏರಿದರು..!
ಇವರ ಕಾಯಕ ಆರಂಭವಾದದ್ದೇ ಕಾರ್ಮಿಕರ ಕೊರತೆಯ ಕಾರಣಕ್ಕೆ. ಮೂರು ವರ್ಷದ ಹಿಂದೆ ಮದ್ದು ಬಿಡಲು ಕಾರ್ಮಿ
ಕರು ಸಿಗದೆ ಕೊಳೆ ರೋಗ ಬಂದು ಇವರ ತೋಟದ ಎಳೆ ಅಡಿಕೆ ಧರೆಶಾಹಿಯಾಯಿತು. ಇಡೀ ಕುಟುಂಬ ಚಿಂತೆಯಲ್ಲಿದ್ದಾಗ, ಚಂದ್ರಲೇಖ ಮೆಷಿನ್‌ ಬಳಸಿ ಅಡಕೆ ಮರ ಏರಲು ಆರಂಭಿಸಿದರು. ಅಕ್ಕ ರತ್ನಾವತಿ ಮತ್ತು ಬಾವ ಆನಂದ ಗೌಡ ಇವರಿಗೆ ಪ್ರೋತ್ಸಾಹ ನೀಡಿದರು.

ಎರಡು ದಿನಗಳಲ್ಲಿ ಪೂರ್ಣ
ಚಂದ್ರಲೇಖಾ ಅವರ ತೋಟದಲ್ಲಿ 600 ಅಡಕೆ ಮರಗಳಿವೆ. ಅದಕ್ಕೆ ಔಷಧಿ ಸಿಂಪಡಿಸಲು ಎರಡು ದಿನ ಸಾಕಾಗುತ್ತದೆ. ಪ್ರಥಮ ಅವಧಿಗೆ ಎರಡು ಬ್ಯಾರಲ್‌ ಮತ್ತು ಎರಡನೇ ಅವಧಿ ಮೂರು ಬ್ಯಾರಲ್‌ ಔಷಧ ಬೇಕಾಗುತ್ತದೆ. ಎರಡು ದಿನಗಳಲ್ಲಿ ಪೂರ್ತಿ ತೋಟಕ್ಕೆ ಸಿಂಪಡಿಸಲು ಸಾಧ್ಯವಾಗುತ್ತದೆ.

ಆತ್ಮ ವಿಶ್ವಾಸ 
ಸುಳ್ಯ ಕೆವಿಜಿ ವಿದ್ಯಾಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಚಂದ್ರಲೇಖಾ ರಜಾ ದಿನಗಳಲ್ಲಿ ಔಷಧ ಸಿಂಪಡಿಸುವ ಕೆಲಸ ಮಾಡುತ್ತಾರೆ. ಇತರೆಡೆಗೆ ಇದುವರೆಗೆ ಔಷಧ ಸಿಂಪಡಿಸಲು ಹೋಗಿಲ್ಲ. ಅನಿವಾರ್ಯ ಸಂದರ್ಭ ಎದುರಾದರೆ ಅದಕ್ಕೂ ತಾನು ಸಿದ್ಧ ಅನ್ನುವ ಆತ್ಮವಿಶ್ವಾಸ ಪ್ರದರ್ಶಿಸುತ್ತಾರೆ.

ವಿಶೇಷ ವರದಿ

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.