ಹರಿಯಾಣ: ದನ ಕಳ್ಳನೆಂದು ಹೊಡೆದು ಕೊಂದ ಗ್ರಾಮಸ್ಥರು, ಓರ್ವ ಸೆರೆ
Team Udayavani, Aug 4, 2018, 3:46 PM IST
ಹೊಸದಿಲ್ಲಿ : ರಾಜಸ್ಥಾನದ ಅಲವಾರ್ನಲ್ಲಿ ಗೋ ಕಳ್ಳಸಾಗಾಟಗಾರನೆಂದು ಶಂಕಿಸಿ ವ್ಯಕ್ತಿಯೋರ್ವನನ್ನು ಉದ್ರಿಕ್ತ ಸಮೂಹ ಚಚ್ಚಿ ಕೊಂದ ಹದಿನೈದು ದಿನಗಳ ತರುವಾಯ ಇದೀಗ ಅದೇ ರೀತಿಯ ಇನ್ನೊಂದು ಘಟನೆ ಹರಿಯಾಣದಲ್ಲಿ ನಡೆದಿದೆ.
ಗುರುವಾರ – ಶುಕ್ರವಾರ ನಡುವಿನ ರಾತ್ರಿ ಹರಿಯಾಣದ ಪಲವಾಲ್ ಜಿಲ್ಲೆಯ ಬೆಹರೋಲಾ ಗ್ರಾಮದಲ್ಲಿ ದನ ಕಳ್ಳನೆಂಬ ಶಂಕೆಯಲ್ಲಿ ಗ್ರಾಮಸ್ಥರು ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿದ್ದಾರೆ. ಈತನ ಜತೆಗಿದ್ದ ಇನ್ನಿಬ್ಬರು ಸ್ಥಳದಿಂದ ಪಲಾಯನ ಮಾಡಿದ್ದಾರೆ.
ವ್ಯಕ್ತಿಯನ್ನು ಚಚ್ಚಿ ಸಾಯಿಸಿದ ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರು ಸಹೋದರರ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. ಮೂವರ ಪೈಕಿ ಒಬ್ಟಾತನನ್ನು ಅವರು ಬಂಧಿಸಿದ್ದಾರೆ.
ಸಮೂಹ ಹಿಂಸೆಯಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಗೋ ಕಳ್ಳತನದ ಶಂಕೆಯಲ್ಲಿ ಶಂಕಿತರನ್ನು ಉದ್ರಿಕ್ತರ ಗುಂಪು ಹೊಡೆದು ಸಾಯಿಸುವ ಪ್ರಕರಣಗಳನ್ನು ಕಠಿನ ಕಾನೂನಿನ ಮೂಲಕ ತಡೆಯಲು ಕೇಂದ್ರ ಸರಕಾರ, ಸುಪ್ರೀಂ ಕೋರ್ಟ್ ಸಲಹೆಯ ಪ್ರಕರ, ಹೊಸ ಕಾನೂನನ್ನು ಜಾರಿಗೆ ತರುವ ಚಿಂತನೆಯನ್ನು ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ