ವಿಟ್ಲ: ಆಟೋ ರಿಕ್ಷಾ ಉರುಳಿ ಆರು ಮಂದಿ ಗಾಯ
Team Udayavani, Aug 4, 2018, 3:57 PM IST
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾಯೊಂದು ಉರುಳಿ ಬಿದ್ದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ವಿಟ್ಲದ ಸಾಲೆತ್ತೂರು ರಸ್ತೆಯ ನೆತ್ರಕೆರೆ ಎಂಬಲ್ಲಿ ಶನಿವಾರ ಸಂಭವಿದೆ.
ಕಡಂಬು ನಿವಾಸಿಗಳಾದ ರಾಫಿಯಾ(20), ರಶೀದಾ(23), ಮೋನಪ್ಪ(50), ಗೋಪಾಲಕೃಷ್ಣ(65), ಕೃಷ್ಣಪ್ಪ(65) ಹಾಗೂ ದೇರಣ್ಣ ಗೌಡ(63) ಗಾಯಗೊಂಡವರು. ರಾಫಿಯಾ ಹಾಗೂ ರಶೀದಾ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಿದರೆ, ಕೃಷ್ಣಪ್ಪ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಕೆಲವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲು ಮಾಡಲಾಗಿದೆ.
ವಿಟ್ಲದಿಂದ ಕೊಡಂಗಾಯಿ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ಕಳೆದು ರಸ್ತೆಗೆ ಉರುಳಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ